Homeಮುಖಪುಟ8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

- Advertisement -
- Advertisement -

ಕಾನ್ಪುರದಲ್ಲಿ ವಿಕಾಸ್ ದುಬೆ ಮತ್ತು ಆತನ ಗ್ಯಾಂಗ್ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಕೊಂದ ನಂತರ, ಆತನ ಬಂಧನಕ್ಕೆ ಹೋಗುವ ಮಾಹಿತಿ ಆರೋಪಿಗಳಿಗೆ ಕೊಟ್ಟಿದ್ದು ಯಾರು ಎಂದು ಉತ್ತರ ಪ್ರದೇಶ ಪೊಲೀಸರು ತಮ್ಮ ಸ್ಥಳೀಯ ಪೊಲೀಸರ ಮೇಲೆ ತನಿಖೆ ನಡೆಸುತ್ತಿದ್ದಾರೆ.

ಕಾನ್ಪುರದ ಶಿವರಾಜ್‌ಪುರ, ಬಿಲ್ಹೌರ್ ಮತ್ತು ಚೌಬೆಪುರದ ಮೂರು ಪೊಲೀಸ್ ತಂಡಗಳು ಶುಕ್ರವಾರ ವಿಕಾಸ್ ದುಬೆ ಅವರನ್ನು ಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ  ಬಿಕ್ರು ಗ್ರಾಮದಲ್ಲಿ ಏಕಾಏಕಿ ಎರಗಿದ ಗುಂಡಿನ ದಾಳಿಯಲ್ಲಿ 8 ಪೊಲೀಸರು ಹತರಾಗಿದ್ದರು. ಆರೋಪಿ ವಿಕಾಸ್ ದುಬೆಯನ್ನು ಹಿಡಿಯಲು 25 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ಹೊರಟಿರುವ ಮಾಹಿತಿಯನ್ನು ಚೌಬೆಪುರ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿರಬಹುದೆಂದು ಪೊಲೀಸರು ಶಂಕಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ದುಬೆಯ ಕ್ರಿಮಿನಲ್ ಮಾಫಿಯಾ ಪರವಾಗಿ ಬೇಹುಗಾರಿಕೆ ನಡೆಸಿದ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಚೌಬೆಪುರ ಪೊಲೀಸರ್ ಠಾಣೆಯ ಉಸ್ತುವಾರಿ ವಿನಯ್ ತಿವಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ವಿಕಾಸ್ ದುಬೆ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಸ್ಥಳೀಯ ರಾಹುಲ್ ತಿವಾರಿ ದೂರು ನೀಡಿದ ನಂತರ ಶುಕ್ರವಾರದ ಘಟನೆ ಜರುಗಿದೆ.

ರಾಹುಲ್ ತಿವಾರಿ ಚೌಬೆಪುರ ಠಾಣೆಯ ಉಸ್ತುವಾರಿ ವಿನಯ್ ತಿವಾರಿ ಅವರನ್ನು ಸಂಪರ್ಕಿಸಿದಾಗ, ವಿಕಾಸ್ ದುಬೆ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ. ನಂತರ ರಾಹುಲ್ ತಿವಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರನ್ನು ಸಂಪರ್ಕಿಸಿದಾಗ ಎಫ್‌ಐಆರ್‌ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಕಾನ್ಪುರ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಮಾತನಾಡಿ “ಗುಂಡಿನ ದಾಳಿ ಮೂರು ಕಡೆಯಿಂದ ಬಂದಿದ್ದು, ಇದು ಸಂಪೂರ್ಣವಾಗಿ ಯೋಜಿತವಾಗಿದೆ ಎಂದು ಸಾಬೀತಾಗಿದೆ. ರಸ್ತೆಯನ್ನು ನಿರ್ಬಂಧಿಸುವ ಮೂಲಕ ಪೊಲೀಸರು ತಮ್ಮ ವಾಹನಗಳನ್ನು ಬಿಟ್ಟು ಬಿಕ್ರು ಗ್ರಾಮಕ್ಕೆ ನಡೆದುಕೊಂಡೇ ಬರುವಂತೆ ಮಾಡಿರುವುದು ಸಹ ಯೋಜನೆಯ ಭಾಗ ಎಂದು ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಗ್ಯಾಂಗ್‌ನಿಂದ ಕೊಲ್ಲಲ್ಪಟ್ಟ ಎಂಟು ಪೊಲೀಸರಲ್ಲಿ ದೇವೇಂದ್ರ ಮಿಶ್ರಾ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ ಅವರನ್ನು ವಿಕಾಸ್‌ದುಬೆ ಅವರ ಸಂಬಂಧಿ ಪ್ರೇಮ್ ಪ್ರಕಾಶ್ ಪಾಂಡೆ ಅವರ ಮನೆಗೆ ಎಳೆದುಕೊಂಡು ಹೋಗೆ ಹೊಡೆದುರುಳಿಸಲಾಗಿದೆ. ಅವರ ಸರ್ವಿಸ್ ರಿವಾಲ್ವರ್ ಅನ್ನು ಅದೇ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಸಹ ಗುಂಡಿಕ್ಕಿ ಕೊಂದಿದ್ದಾರೆ. ಅದೇ ವೇಳೆ ಇಬ್ಬರು ಆರೋಪಿಗಳು ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾರೆ.

ಪ್ರೇಮ್ ಪ್ರಕಾಶ್ ಕ್ರಿಮಿನಲ್ ಆರೋಪಿಯಾಗಿದ್ದು ವಿಕಾಸ್‌ದುಬೆ ಅವರ ಗ್ಯಾಂಗ್‌ನ ಸದಸ್ಯನೆಂದು ಹೇಳಲಾಗಿದ್ದು ಆತನನ್ನು ಎನ್ಕೌಂಟರ್‌ ಮಾಡಲಾಗಿದೆ.

ಕುಖ್ಯಾತ ಕ್ರಿಮಿನಲ್ ಮಾಸ್ಟರ್ ಮೈಂಡ್ ವಿಕಾಸ್‌ದುಬೆ ಕೊಲೆ ಯತ್ನ, ಅಪಹರಣ, ಸುಲಿಗೆ ಮತ್ತು ಗಲಭೆಗೆ ಸಂಬಂಧಿಸಿದ 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾರೆ. ಶನಿವಾರ ಕಾನ್ಪುರ ಜಿಲ್ಲಾಡಳಿತ ಅವರ ಮನೆಯನ್ನು ನೆಲಸಮ ಮಾಡಿದೆ.


ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...