Homeಮುಖಪುಟ8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

- Advertisement -
- Advertisement -

ಕಾನ್ಪುರದಲ್ಲಿ ವಿಕಾಸ್ ದುಬೆ ಮತ್ತು ಆತನ ಗ್ಯಾಂಗ್ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಕೊಂದ ನಂತರ, ಆತನ ಬಂಧನಕ್ಕೆ ಹೋಗುವ ಮಾಹಿತಿ ಆರೋಪಿಗಳಿಗೆ ಕೊಟ್ಟಿದ್ದು ಯಾರು ಎಂದು ಉತ್ತರ ಪ್ರದೇಶ ಪೊಲೀಸರು ತಮ್ಮ ಸ್ಥಳೀಯ ಪೊಲೀಸರ ಮೇಲೆ ತನಿಖೆ ನಡೆಸುತ್ತಿದ್ದಾರೆ.

ಕಾನ್ಪುರದ ಶಿವರಾಜ್‌ಪುರ, ಬಿಲ್ಹೌರ್ ಮತ್ತು ಚೌಬೆಪುರದ ಮೂರು ಪೊಲೀಸ್ ತಂಡಗಳು ಶುಕ್ರವಾರ ವಿಕಾಸ್ ದುಬೆ ಅವರನ್ನು ಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ  ಬಿಕ್ರು ಗ್ರಾಮದಲ್ಲಿ ಏಕಾಏಕಿ ಎರಗಿದ ಗುಂಡಿನ ದಾಳಿಯಲ್ಲಿ 8 ಪೊಲೀಸರು ಹತರಾಗಿದ್ದರು. ಆರೋಪಿ ವಿಕಾಸ್ ದುಬೆಯನ್ನು ಹಿಡಿಯಲು 25 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ಹೊರಟಿರುವ ಮಾಹಿತಿಯನ್ನು ಚೌಬೆಪುರ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿರಬಹುದೆಂದು ಪೊಲೀಸರು ಶಂಕಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ದುಬೆಯ ಕ್ರಿಮಿನಲ್ ಮಾಫಿಯಾ ಪರವಾಗಿ ಬೇಹುಗಾರಿಕೆ ನಡೆಸಿದ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಚೌಬೆಪುರ ಪೊಲೀಸರ್ ಠಾಣೆಯ ಉಸ್ತುವಾರಿ ವಿನಯ್ ತಿವಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ವಿಕಾಸ್ ದುಬೆ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಸ್ಥಳೀಯ ರಾಹುಲ್ ತಿವಾರಿ ದೂರು ನೀಡಿದ ನಂತರ ಶುಕ್ರವಾರದ ಘಟನೆ ಜರುಗಿದೆ.

ರಾಹುಲ್ ತಿವಾರಿ ಚೌಬೆಪುರ ಠಾಣೆಯ ಉಸ್ತುವಾರಿ ವಿನಯ್ ತಿವಾರಿ ಅವರನ್ನು ಸಂಪರ್ಕಿಸಿದಾಗ, ವಿಕಾಸ್ ದುಬೆ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ. ನಂತರ ರಾಹುಲ್ ತಿವಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರನ್ನು ಸಂಪರ್ಕಿಸಿದಾಗ ಎಫ್‌ಐಆರ್‌ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಕಾನ್ಪುರ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಮಾತನಾಡಿ “ಗುಂಡಿನ ದಾಳಿ ಮೂರು ಕಡೆಯಿಂದ ಬಂದಿದ್ದು, ಇದು ಸಂಪೂರ್ಣವಾಗಿ ಯೋಜಿತವಾಗಿದೆ ಎಂದು ಸಾಬೀತಾಗಿದೆ. ರಸ್ತೆಯನ್ನು ನಿರ್ಬಂಧಿಸುವ ಮೂಲಕ ಪೊಲೀಸರು ತಮ್ಮ ವಾಹನಗಳನ್ನು ಬಿಟ್ಟು ಬಿಕ್ರು ಗ್ರಾಮಕ್ಕೆ ನಡೆದುಕೊಂಡೇ ಬರುವಂತೆ ಮಾಡಿರುವುದು ಸಹ ಯೋಜನೆಯ ಭಾಗ ಎಂದು ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಗ್ಯಾಂಗ್‌ನಿಂದ ಕೊಲ್ಲಲ್ಪಟ್ಟ ಎಂಟು ಪೊಲೀಸರಲ್ಲಿ ದೇವೇಂದ್ರ ಮಿಶ್ರಾ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ ಅವರನ್ನು ವಿಕಾಸ್‌ದುಬೆ ಅವರ ಸಂಬಂಧಿ ಪ್ರೇಮ್ ಪ್ರಕಾಶ್ ಪಾಂಡೆ ಅವರ ಮನೆಗೆ ಎಳೆದುಕೊಂಡು ಹೋಗೆ ಹೊಡೆದುರುಳಿಸಲಾಗಿದೆ. ಅವರ ಸರ್ವಿಸ್ ರಿವಾಲ್ವರ್ ಅನ್ನು ಅದೇ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಸಹ ಗುಂಡಿಕ್ಕಿ ಕೊಂದಿದ್ದಾರೆ. ಅದೇ ವೇಳೆ ಇಬ್ಬರು ಆರೋಪಿಗಳು ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾರೆ.

ಪ್ರೇಮ್ ಪ್ರಕಾಶ್ ಕ್ರಿಮಿನಲ್ ಆರೋಪಿಯಾಗಿದ್ದು ವಿಕಾಸ್‌ದುಬೆ ಅವರ ಗ್ಯಾಂಗ್‌ನ ಸದಸ್ಯನೆಂದು ಹೇಳಲಾಗಿದ್ದು ಆತನನ್ನು ಎನ್ಕೌಂಟರ್‌ ಮಾಡಲಾಗಿದೆ.

ಕುಖ್ಯಾತ ಕ್ರಿಮಿನಲ್ ಮಾಸ್ಟರ್ ಮೈಂಡ್ ವಿಕಾಸ್‌ದುಬೆ ಕೊಲೆ ಯತ್ನ, ಅಪಹರಣ, ಸುಲಿಗೆ ಮತ್ತು ಗಲಭೆಗೆ ಸಂಬಂಧಿಸಿದ 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾರೆ. ಶನಿವಾರ ಕಾನ್ಪುರ ಜಿಲ್ಲಾಡಳಿತ ಅವರ ಮನೆಯನ್ನು ನೆಲಸಮ ಮಾಡಿದೆ.


ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...