Homeಮುಖಪುಟ8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

- Advertisement -
- Advertisement -

ಕಾನ್ಪುರದಲ್ಲಿ ವಿಕಾಸ್ ದುಬೆ ಮತ್ತು ಆತನ ಗ್ಯಾಂಗ್ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಕೊಂದ ನಂತರ, ಆತನ ಬಂಧನಕ್ಕೆ ಹೋಗುವ ಮಾಹಿತಿ ಆರೋಪಿಗಳಿಗೆ ಕೊಟ್ಟಿದ್ದು ಯಾರು ಎಂದು ಉತ್ತರ ಪ್ರದೇಶ ಪೊಲೀಸರು ತಮ್ಮ ಸ್ಥಳೀಯ ಪೊಲೀಸರ ಮೇಲೆ ತನಿಖೆ ನಡೆಸುತ್ತಿದ್ದಾರೆ.

ಕಾನ್ಪುರದ ಶಿವರಾಜ್‌ಪುರ, ಬಿಲ್ಹೌರ್ ಮತ್ತು ಚೌಬೆಪುರದ ಮೂರು ಪೊಲೀಸ್ ತಂಡಗಳು ಶುಕ್ರವಾರ ವಿಕಾಸ್ ದುಬೆ ಅವರನ್ನು ಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ  ಬಿಕ್ರು ಗ್ರಾಮದಲ್ಲಿ ಏಕಾಏಕಿ ಎರಗಿದ ಗುಂಡಿನ ದಾಳಿಯಲ್ಲಿ 8 ಪೊಲೀಸರು ಹತರಾಗಿದ್ದರು. ಆರೋಪಿ ವಿಕಾಸ್ ದುಬೆಯನ್ನು ಹಿಡಿಯಲು 25 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ಹೊರಟಿರುವ ಮಾಹಿತಿಯನ್ನು ಚೌಬೆಪುರ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿರಬಹುದೆಂದು ಪೊಲೀಸರು ಶಂಕಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ದುಬೆಯ ಕ್ರಿಮಿನಲ್ ಮಾಫಿಯಾ ಪರವಾಗಿ ಬೇಹುಗಾರಿಕೆ ನಡೆಸಿದ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಚೌಬೆಪುರ ಪೊಲೀಸರ್ ಠಾಣೆಯ ಉಸ್ತುವಾರಿ ವಿನಯ್ ತಿವಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ವಿಕಾಸ್ ದುಬೆ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಸ್ಥಳೀಯ ರಾಹುಲ್ ತಿವಾರಿ ದೂರು ನೀಡಿದ ನಂತರ ಶುಕ್ರವಾರದ ಘಟನೆ ಜರುಗಿದೆ.

ರಾಹುಲ್ ತಿವಾರಿ ಚೌಬೆಪುರ ಠಾಣೆಯ ಉಸ್ತುವಾರಿ ವಿನಯ್ ತಿವಾರಿ ಅವರನ್ನು ಸಂಪರ್ಕಿಸಿದಾಗ, ವಿಕಾಸ್ ದುಬೆ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ. ನಂತರ ರಾಹುಲ್ ತಿವಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರನ್ನು ಸಂಪರ್ಕಿಸಿದಾಗ ಎಫ್‌ಐಆರ್‌ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಕಾನ್ಪುರ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಮಾತನಾಡಿ “ಗುಂಡಿನ ದಾಳಿ ಮೂರು ಕಡೆಯಿಂದ ಬಂದಿದ್ದು, ಇದು ಸಂಪೂರ್ಣವಾಗಿ ಯೋಜಿತವಾಗಿದೆ ಎಂದು ಸಾಬೀತಾಗಿದೆ. ರಸ್ತೆಯನ್ನು ನಿರ್ಬಂಧಿಸುವ ಮೂಲಕ ಪೊಲೀಸರು ತಮ್ಮ ವಾಹನಗಳನ್ನು ಬಿಟ್ಟು ಬಿಕ್ರು ಗ್ರಾಮಕ್ಕೆ ನಡೆದುಕೊಂಡೇ ಬರುವಂತೆ ಮಾಡಿರುವುದು ಸಹ ಯೋಜನೆಯ ಭಾಗ ಎಂದು ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಗ್ಯಾಂಗ್‌ನಿಂದ ಕೊಲ್ಲಲ್ಪಟ್ಟ ಎಂಟು ಪೊಲೀಸರಲ್ಲಿ ದೇವೇಂದ್ರ ಮಿಶ್ರಾ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ ಅವರನ್ನು ವಿಕಾಸ್‌ದುಬೆ ಅವರ ಸಂಬಂಧಿ ಪ್ರೇಮ್ ಪ್ರಕಾಶ್ ಪಾಂಡೆ ಅವರ ಮನೆಗೆ ಎಳೆದುಕೊಂಡು ಹೋಗೆ ಹೊಡೆದುರುಳಿಸಲಾಗಿದೆ. ಅವರ ಸರ್ವಿಸ್ ರಿವಾಲ್ವರ್ ಅನ್ನು ಅದೇ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಸಹ ಗುಂಡಿಕ್ಕಿ ಕೊಂದಿದ್ದಾರೆ. ಅದೇ ವೇಳೆ ಇಬ್ಬರು ಆರೋಪಿಗಳು ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾರೆ.

ಪ್ರೇಮ್ ಪ್ರಕಾಶ್ ಕ್ರಿಮಿನಲ್ ಆರೋಪಿಯಾಗಿದ್ದು ವಿಕಾಸ್‌ದುಬೆ ಅವರ ಗ್ಯಾಂಗ್‌ನ ಸದಸ್ಯನೆಂದು ಹೇಳಲಾಗಿದ್ದು ಆತನನ್ನು ಎನ್ಕೌಂಟರ್‌ ಮಾಡಲಾಗಿದೆ.

ಕುಖ್ಯಾತ ಕ್ರಿಮಿನಲ್ ಮಾಸ್ಟರ್ ಮೈಂಡ್ ವಿಕಾಸ್‌ದುಬೆ ಕೊಲೆ ಯತ್ನ, ಅಪಹರಣ, ಸುಲಿಗೆ ಮತ್ತು ಗಲಭೆಗೆ ಸಂಬಂಧಿಸಿದ 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾರೆ. ಶನಿವಾರ ಕಾನ್ಪುರ ಜಿಲ್ಲಾಡಳಿತ ಅವರ ಮನೆಯನ್ನು ನೆಲಸಮ ಮಾಡಿದೆ.


ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...