Homeಮುಖಪುಟ8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

- Advertisement -
- Advertisement -

ಕಾನ್ಪುರದಲ್ಲಿ ವಿಕಾಸ್ ದುಬೆ ಮತ್ತು ಆತನ ಗ್ಯಾಂಗ್ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಕೊಂದ ನಂತರ, ಆತನ ಬಂಧನಕ್ಕೆ ಹೋಗುವ ಮಾಹಿತಿ ಆರೋಪಿಗಳಿಗೆ ಕೊಟ್ಟಿದ್ದು ಯಾರು ಎಂದು ಉತ್ತರ ಪ್ರದೇಶ ಪೊಲೀಸರು ತಮ್ಮ ಸ್ಥಳೀಯ ಪೊಲೀಸರ ಮೇಲೆ ತನಿಖೆ ನಡೆಸುತ್ತಿದ್ದಾರೆ.

ಕಾನ್ಪುರದ ಶಿವರಾಜ್‌ಪುರ, ಬಿಲ್ಹೌರ್ ಮತ್ತು ಚೌಬೆಪುರದ ಮೂರು ಪೊಲೀಸ್ ತಂಡಗಳು ಶುಕ್ರವಾರ ವಿಕಾಸ್ ದುಬೆ ಅವರನ್ನು ಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ  ಬಿಕ್ರು ಗ್ರಾಮದಲ್ಲಿ ಏಕಾಏಕಿ ಎರಗಿದ ಗುಂಡಿನ ದಾಳಿಯಲ್ಲಿ 8 ಪೊಲೀಸರು ಹತರಾಗಿದ್ದರು. ಆರೋಪಿ ವಿಕಾಸ್ ದುಬೆಯನ್ನು ಹಿಡಿಯಲು 25 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ಹೊರಟಿರುವ ಮಾಹಿತಿಯನ್ನು ಚೌಬೆಪುರ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿರಬಹುದೆಂದು ಪೊಲೀಸರು ಶಂಕಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ದುಬೆಯ ಕ್ರಿಮಿನಲ್ ಮಾಫಿಯಾ ಪರವಾಗಿ ಬೇಹುಗಾರಿಕೆ ನಡೆಸಿದ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಚೌಬೆಪುರ ಪೊಲೀಸರ್ ಠಾಣೆಯ ಉಸ್ತುವಾರಿ ವಿನಯ್ ತಿವಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ವಿಕಾಸ್ ದುಬೆ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಸ್ಥಳೀಯ ರಾಹುಲ್ ತಿವಾರಿ ದೂರು ನೀಡಿದ ನಂತರ ಶುಕ್ರವಾರದ ಘಟನೆ ಜರುಗಿದೆ.

ರಾಹುಲ್ ತಿವಾರಿ ಚೌಬೆಪುರ ಠಾಣೆಯ ಉಸ್ತುವಾರಿ ವಿನಯ್ ತಿವಾರಿ ಅವರನ್ನು ಸಂಪರ್ಕಿಸಿದಾಗ, ವಿಕಾಸ್ ದುಬೆ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ. ನಂತರ ರಾಹುಲ್ ತಿವಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರನ್ನು ಸಂಪರ್ಕಿಸಿದಾಗ ಎಫ್‌ಐಆರ್‌ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಕಾನ್ಪುರ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಮಾತನಾಡಿ “ಗುಂಡಿನ ದಾಳಿ ಮೂರು ಕಡೆಯಿಂದ ಬಂದಿದ್ದು, ಇದು ಸಂಪೂರ್ಣವಾಗಿ ಯೋಜಿತವಾಗಿದೆ ಎಂದು ಸಾಬೀತಾಗಿದೆ. ರಸ್ತೆಯನ್ನು ನಿರ್ಬಂಧಿಸುವ ಮೂಲಕ ಪೊಲೀಸರು ತಮ್ಮ ವಾಹನಗಳನ್ನು ಬಿಟ್ಟು ಬಿಕ್ರು ಗ್ರಾಮಕ್ಕೆ ನಡೆದುಕೊಂಡೇ ಬರುವಂತೆ ಮಾಡಿರುವುದು ಸಹ ಯೋಜನೆಯ ಭಾಗ ಎಂದು ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಗ್ಯಾಂಗ್‌ನಿಂದ ಕೊಲ್ಲಲ್ಪಟ್ಟ ಎಂಟು ಪೊಲೀಸರಲ್ಲಿ ದೇವೇಂದ್ರ ಮಿಶ್ರಾ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ ಅವರನ್ನು ವಿಕಾಸ್‌ದುಬೆ ಅವರ ಸಂಬಂಧಿ ಪ್ರೇಮ್ ಪ್ರಕಾಶ್ ಪಾಂಡೆ ಅವರ ಮನೆಗೆ ಎಳೆದುಕೊಂಡು ಹೋಗೆ ಹೊಡೆದುರುಳಿಸಲಾಗಿದೆ. ಅವರ ಸರ್ವಿಸ್ ರಿವಾಲ್ವರ್ ಅನ್ನು ಅದೇ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಸಹ ಗುಂಡಿಕ್ಕಿ ಕೊಂದಿದ್ದಾರೆ. ಅದೇ ವೇಳೆ ಇಬ್ಬರು ಆರೋಪಿಗಳು ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾರೆ.

ಪ್ರೇಮ್ ಪ್ರಕಾಶ್ ಕ್ರಿಮಿನಲ್ ಆರೋಪಿಯಾಗಿದ್ದು ವಿಕಾಸ್‌ದುಬೆ ಅವರ ಗ್ಯಾಂಗ್‌ನ ಸದಸ್ಯನೆಂದು ಹೇಳಲಾಗಿದ್ದು ಆತನನ್ನು ಎನ್ಕೌಂಟರ್‌ ಮಾಡಲಾಗಿದೆ.

ಕುಖ್ಯಾತ ಕ್ರಿಮಿನಲ್ ಮಾಸ್ಟರ್ ಮೈಂಡ್ ವಿಕಾಸ್‌ದುಬೆ ಕೊಲೆ ಯತ್ನ, ಅಪಹರಣ, ಸುಲಿಗೆ ಮತ್ತು ಗಲಭೆಗೆ ಸಂಬಂಧಿಸಿದ 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾರೆ. ಶನಿವಾರ ಕಾನ್ಪುರ ಜಿಲ್ಲಾಡಳಿತ ಅವರ ಮನೆಯನ್ನು ನೆಲಸಮ ಮಾಡಿದೆ.


ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...