Homeಮುಖಪುಟ8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

- Advertisement -
- Advertisement -

ಕಾನ್ಪುರದಲ್ಲಿ ವಿಕಾಸ್ ದುಬೆ ಮತ್ತು ಆತನ ಗ್ಯಾಂಗ್ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಕೊಂದ ನಂತರ, ಆತನ ಬಂಧನಕ್ಕೆ ಹೋಗುವ ಮಾಹಿತಿ ಆರೋಪಿಗಳಿಗೆ ಕೊಟ್ಟಿದ್ದು ಯಾರು ಎಂದು ಉತ್ತರ ಪ್ರದೇಶ ಪೊಲೀಸರು ತಮ್ಮ ಸ್ಥಳೀಯ ಪೊಲೀಸರ ಮೇಲೆ ತನಿಖೆ ನಡೆಸುತ್ತಿದ್ದಾರೆ.

ಕಾನ್ಪುರದ ಶಿವರಾಜ್‌ಪುರ, ಬಿಲ್ಹೌರ್ ಮತ್ತು ಚೌಬೆಪುರದ ಮೂರು ಪೊಲೀಸ್ ತಂಡಗಳು ಶುಕ್ರವಾರ ವಿಕಾಸ್ ದುಬೆ ಅವರನ್ನು ಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ  ಬಿಕ್ರು ಗ್ರಾಮದಲ್ಲಿ ಏಕಾಏಕಿ ಎರಗಿದ ಗುಂಡಿನ ದಾಳಿಯಲ್ಲಿ 8 ಪೊಲೀಸರು ಹತರಾಗಿದ್ದರು. ಆರೋಪಿ ವಿಕಾಸ್ ದುಬೆಯನ್ನು ಹಿಡಿಯಲು 25 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ಹೊರಟಿರುವ ಮಾಹಿತಿಯನ್ನು ಚೌಬೆಪುರ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿರಬಹುದೆಂದು ಪೊಲೀಸರು ಶಂಕಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ದುಬೆಯ ಕ್ರಿಮಿನಲ್ ಮಾಫಿಯಾ ಪರವಾಗಿ ಬೇಹುಗಾರಿಕೆ ನಡೆಸಿದ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಚೌಬೆಪುರ ಪೊಲೀಸರ್ ಠಾಣೆಯ ಉಸ್ತುವಾರಿ ವಿನಯ್ ತಿವಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ವಿಕಾಸ್ ದುಬೆ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಸ್ಥಳೀಯ ರಾಹುಲ್ ತಿವಾರಿ ದೂರು ನೀಡಿದ ನಂತರ ಶುಕ್ರವಾರದ ಘಟನೆ ಜರುಗಿದೆ.

ರಾಹುಲ್ ತಿವಾರಿ ಚೌಬೆಪುರ ಠಾಣೆಯ ಉಸ್ತುವಾರಿ ವಿನಯ್ ತಿವಾರಿ ಅವರನ್ನು ಸಂಪರ್ಕಿಸಿದಾಗ, ವಿಕಾಸ್ ದುಬೆ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ. ನಂತರ ರಾಹುಲ್ ತಿವಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರನ್ನು ಸಂಪರ್ಕಿಸಿದಾಗ ಎಫ್‌ಐಆರ್‌ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಕಾನ್ಪುರ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಮಾತನಾಡಿ “ಗುಂಡಿನ ದಾಳಿ ಮೂರು ಕಡೆಯಿಂದ ಬಂದಿದ್ದು, ಇದು ಸಂಪೂರ್ಣವಾಗಿ ಯೋಜಿತವಾಗಿದೆ ಎಂದು ಸಾಬೀತಾಗಿದೆ. ರಸ್ತೆಯನ್ನು ನಿರ್ಬಂಧಿಸುವ ಮೂಲಕ ಪೊಲೀಸರು ತಮ್ಮ ವಾಹನಗಳನ್ನು ಬಿಟ್ಟು ಬಿಕ್ರು ಗ್ರಾಮಕ್ಕೆ ನಡೆದುಕೊಂಡೇ ಬರುವಂತೆ ಮಾಡಿರುವುದು ಸಹ ಯೋಜನೆಯ ಭಾಗ ಎಂದು ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಗ್ಯಾಂಗ್‌ನಿಂದ ಕೊಲ್ಲಲ್ಪಟ್ಟ ಎಂಟು ಪೊಲೀಸರಲ್ಲಿ ದೇವೇಂದ್ರ ಮಿಶ್ರಾ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ ಅವರನ್ನು ವಿಕಾಸ್‌ದುಬೆ ಅವರ ಸಂಬಂಧಿ ಪ್ರೇಮ್ ಪ್ರಕಾಶ್ ಪಾಂಡೆ ಅವರ ಮನೆಗೆ ಎಳೆದುಕೊಂಡು ಹೋಗೆ ಹೊಡೆದುರುಳಿಸಲಾಗಿದೆ. ಅವರ ಸರ್ವಿಸ್ ರಿವಾಲ್ವರ್ ಅನ್ನು ಅದೇ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಸಹ ಗುಂಡಿಕ್ಕಿ ಕೊಂದಿದ್ದಾರೆ. ಅದೇ ವೇಳೆ ಇಬ್ಬರು ಆರೋಪಿಗಳು ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾರೆ.

ಪ್ರೇಮ್ ಪ್ರಕಾಶ್ ಕ್ರಿಮಿನಲ್ ಆರೋಪಿಯಾಗಿದ್ದು ವಿಕಾಸ್‌ದುಬೆ ಅವರ ಗ್ಯಾಂಗ್‌ನ ಸದಸ್ಯನೆಂದು ಹೇಳಲಾಗಿದ್ದು ಆತನನ್ನು ಎನ್ಕೌಂಟರ್‌ ಮಾಡಲಾಗಿದೆ.

ಕುಖ್ಯಾತ ಕ್ರಿಮಿನಲ್ ಮಾಸ್ಟರ್ ಮೈಂಡ್ ವಿಕಾಸ್‌ದುಬೆ ಕೊಲೆ ಯತ್ನ, ಅಪಹರಣ, ಸುಲಿಗೆ ಮತ್ತು ಗಲಭೆಗೆ ಸಂಬಂಧಿಸಿದ 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾರೆ. ಶನಿವಾರ ಕಾನ್ಪುರ ಜಿಲ್ಲಾಡಳಿತ ಅವರ ಮನೆಯನ್ನು ನೆಲಸಮ ಮಾಡಿದೆ.


ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...