Homeಮುಖಪುಟ8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

8 ಪೊಲೀಸರ ಹತ್ಯೆ: ಆರೋಪಿ ವಿಕಾಸ್ ದುಬೆಗೆ ದಾಳಿಯ ಮಾಹಿತಿ ಕೊಟ್ಟಿದ್ದು ಪೊಲೀಸರೇ?

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

- Advertisement -
- Advertisement -

ಕಾನ್ಪುರದಲ್ಲಿ ವಿಕಾಸ್ ದುಬೆ ಮತ್ತು ಆತನ ಗ್ಯಾಂಗ್ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಕೊಂದ ನಂತರ, ಆತನ ಬಂಧನಕ್ಕೆ ಹೋಗುವ ಮಾಹಿತಿ ಆರೋಪಿಗಳಿಗೆ ಕೊಟ್ಟಿದ್ದು ಯಾರು ಎಂದು ಉತ್ತರ ಪ್ರದೇಶ ಪೊಲೀಸರು ತಮ್ಮ ಸ್ಥಳೀಯ ಪೊಲೀಸರ ಮೇಲೆ ತನಿಖೆ ನಡೆಸುತ್ತಿದ್ದಾರೆ.

ಕಾನ್ಪುರದ ಶಿವರಾಜ್‌ಪುರ, ಬಿಲ್ಹೌರ್ ಮತ್ತು ಚೌಬೆಪುರದ ಮೂರು ಪೊಲೀಸ್ ತಂಡಗಳು ಶುಕ್ರವಾರ ವಿಕಾಸ್ ದುಬೆ ಅವರನ್ನು ಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ  ಬಿಕ್ರು ಗ್ರಾಮದಲ್ಲಿ ಏಕಾಏಕಿ ಎರಗಿದ ಗುಂಡಿನ ದಾಳಿಯಲ್ಲಿ 8 ಪೊಲೀಸರು ಹತರಾಗಿದ್ದರು. ಆರೋಪಿ ವಿಕಾಸ್ ದುಬೆಯನ್ನು ಹಿಡಿಯಲು 25 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ವಿಕಾಸ್ ದುಬೆ ಬಂಧನಕ್ಕೆ ಹೊರಟಿರುವ ಮಾಹಿತಿಯನ್ನು ಚೌಬೆಪುರ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿರಬಹುದೆಂದು ಪೊಲೀಸರು ಶಂಕಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ದುಬೆಯ ಕ್ರಿಮಿನಲ್ ಮಾಫಿಯಾ ಪರವಾಗಿ ಬೇಹುಗಾರಿಕೆ ನಡೆಸಿದ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಚೌಬೆಪುರ ಪೊಲೀಸರ್ ಠಾಣೆಯ ಉಸ್ತುವಾರಿ ವಿನಯ್ ತಿವಾರಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ವಿಕಾಸ್ ದುಬೆ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಸ್ಥಳೀಯ ರಾಹುಲ್ ತಿವಾರಿ ದೂರು ನೀಡಿದ ನಂತರ ಶುಕ್ರವಾರದ ಘಟನೆ ಜರುಗಿದೆ.

ರಾಹುಲ್ ತಿವಾರಿ ಚೌಬೆಪುರ ಠಾಣೆಯ ಉಸ್ತುವಾರಿ ವಿನಯ್ ತಿವಾರಿ ಅವರನ್ನು ಸಂಪರ್ಕಿಸಿದಾಗ, ವಿಕಾಸ್ ದುಬೆ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ. ನಂತರ ರಾಹುಲ್ ತಿವಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರನ್ನು ಸಂಪರ್ಕಿಸಿದಾಗ ಎಫ್‌ಐಆರ್‌ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ಮಾಡಲು ಹೋದಾಗ, ಎನ್ಕೌಂಟರ್ ಪ್ರಾರಂಭವಾಗುವ ಮುನ್ನವೇ ಸ್ಟೇಷನ್ ಇನ್-ಚಾರ್ಜ್ ವಿನಯ್ ತಿವಾರಿ ಪರಾರಿಯಾಗಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಕಾನ್ಪುರ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಮಾತನಾಡಿ “ಗುಂಡಿನ ದಾಳಿ ಮೂರು ಕಡೆಯಿಂದ ಬಂದಿದ್ದು, ಇದು ಸಂಪೂರ್ಣವಾಗಿ ಯೋಜಿತವಾಗಿದೆ ಎಂದು ಸಾಬೀತಾಗಿದೆ. ರಸ್ತೆಯನ್ನು ನಿರ್ಬಂಧಿಸುವ ಮೂಲಕ ಪೊಲೀಸರು ತಮ್ಮ ವಾಹನಗಳನ್ನು ಬಿಟ್ಟು ಬಿಕ್ರು ಗ್ರಾಮಕ್ಕೆ ನಡೆದುಕೊಂಡೇ ಬರುವಂತೆ ಮಾಡಿರುವುದು ಸಹ ಯೋಜನೆಯ ಭಾಗ ಎಂದು ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಗ್ಯಾಂಗ್‌ನಿಂದ ಕೊಲ್ಲಲ್ಪಟ್ಟ ಎಂಟು ಪೊಲೀಸರಲ್ಲಿ ದೇವೇಂದ್ರ ಮಿಶ್ರಾ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ ಅವರನ್ನು ವಿಕಾಸ್‌ದುಬೆ ಅವರ ಸಂಬಂಧಿ ಪ್ರೇಮ್ ಪ್ರಕಾಶ್ ಪಾಂಡೆ ಅವರ ಮನೆಗೆ ಎಳೆದುಕೊಂಡು ಹೋಗೆ ಹೊಡೆದುರುಳಿಸಲಾಗಿದೆ. ಅವರ ಸರ್ವಿಸ್ ರಿವಾಲ್ವರ್ ಅನ್ನು ಅದೇ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಸಹ ಗುಂಡಿಕ್ಕಿ ಕೊಂದಿದ್ದಾರೆ. ಅದೇ ವೇಳೆ ಇಬ್ಬರು ಆರೋಪಿಗಳು ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾರೆ.

ಪ್ರೇಮ್ ಪ್ರಕಾಶ್ ಕ್ರಿಮಿನಲ್ ಆರೋಪಿಯಾಗಿದ್ದು ವಿಕಾಸ್‌ದುಬೆ ಅವರ ಗ್ಯಾಂಗ್‌ನ ಸದಸ್ಯನೆಂದು ಹೇಳಲಾಗಿದ್ದು ಆತನನ್ನು ಎನ್ಕೌಂಟರ್‌ ಮಾಡಲಾಗಿದೆ.

ಕುಖ್ಯಾತ ಕ್ರಿಮಿನಲ್ ಮಾಸ್ಟರ್ ಮೈಂಡ್ ವಿಕಾಸ್‌ದುಬೆ ಕೊಲೆ ಯತ್ನ, ಅಪಹರಣ, ಸುಲಿಗೆ ಮತ್ತು ಗಲಭೆಗೆ ಸಂಬಂಧಿಸಿದ 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾರೆ. ಶನಿವಾರ ಕಾನ್ಪುರ ಜಿಲ್ಲಾಡಳಿತ ಅವರ ಮನೆಯನ್ನು ನೆಲಸಮ ಮಾಡಿದೆ.


ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...