Homeಮುಖಪುಟಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತನ್ನ ಕ್ಷೇತ್ರದ 8 ರೈಲು ನಿಲ್ದಾಣಗಳಿಗೆ ದೇವಾಲಯ, ವಿಗ್ರಹದ ಹೆಸರು ಮರುನಾಮಕರಣ...

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತನ್ನ ಕ್ಷೇತ್ರದ 8 ರೈಲು ನಿಲ್ದಾಣಗಳಿಗೆ ದೇವಾಲಯ, ವಿಗ್ರಹದ ಹೆಸರು ಮರುನಾಮಕರಣ ಮಾಡಿಸಿದ ಸ್ಮೃತಿ ಇರಾನಿ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅಮೇಥಿ ಜಿಲ್ಲೆಯ 8 ರೈಲು ನಿಲ್ದಾಣಗಳಿಗೆ ಸ್ಥಳೀಯ ದೇವಾಲಯಗಳು, ಸಂತರು, ವಿಗ್ರಹಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಸ್ಮೃತಿ ಇರಾನಿ ಮರು ನಾಮಕರಣ ಮಾಡಿಸಿದ್ದಾರೆ. ಮರುನಾಮಕರಣ ಮಾಡುವ ಯುಪಿ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (ಎನ್‌ಒಸಿ) ನೀಡಿದೆ.

ಅಮೇಥಿಯ ಸಾಂಸ್ಕೃತಿಕ ಗುರುತು ಮತ್ತು ಪರಂಪರೆಯನ್ನು ಕಾಪಾಡುವ ದೃಷ್ಟಿಯಿಂದ ತಮ್ಮ ಕ್ಷೇತ್ರದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸಲಾಗಿದೆ ಎಂದು ಸ್ಮೃತಿ ಇರಾನಿ ಬುಧವಾರ ಹೇಳಿದ್ದಾರೆ.

ವಿರಾಸತ್ ಭೀ, ವಿಕಾಸ್ ಭಿ… ಅಮೇಥಿ ಲೋಕಸಭಾ ಕ್ಷೇತ್ರದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಈ ನಿರ್ಧಾರವು ಅಮೇಥಿಯ ಸಾಂಸ್ಕೃತಿಕ ಅಸ್ಮಿತೆ ಮತ್ತು ಪರಂಪರೆಯನ್ನು ಉಳಿಸುವಲ್ಲಿ ಉಪಯುಕ್ತವಾಗಿದೆ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

ಕಾಸಿಂಪುರ ರೈಲ್ವೇ ನಿಲುಗಡೆಯನ್ನು ‘ಜೈಸ್ ಸಿಟಿ’ ಎಂದು ಮರುನಾಮಕರಣ ಮಾಡಲು ಮತ್ತು ಜೈಸ್‌ನ್ನು  ಗುರು ಗೋರಖ್‌ನಾಥ್ ಧಾಮ್ ಎಂದು ಮರುನಾಮಕರಣ, ಬನಿ ರೈಲ್ವೇ ಬಿಲ್ಧಾಣವನ್ನು ಸ್ವಾಮಿ ಪರಮಹಂಸ್ ಎಂದು, ಮಿಸ್ರೌಲಿಯನ್ನು ಮಾ ಕಾಲಿಕನ್ ಧಾಮ್ ಎಂದು, ನಿಹಾಲ್‌ಗಢವನ್ನು ಮಹಾರಾಜ ಬಿಜ್ಲಿ ಪಾಸಿ ಎಂದು, ಅಕ್ಬರ್‌ಗಂಜ್‌ನ್ನು ಮಾ ಅಹೋರ್ವಾ ಭವಾನಿ ಧಾಮ್ ಆಗಿ, ವಾರಿಸ್‌ಗಂಜ್‌ನ್ನು ಅಮರ್ ಶಾಹಿದ್ ಭಲೇ ಸುಲ್ತಾನ್ ಎಂದು ಮತ್ತು ಫರ್ಸತ್‌ಗಂಜ್‌ನ್ನು ತಪೇಶ್ವರನಾಥ್ ಧಾಮ್ ಆಗಿ ಮರುನಾಮಕರಣ ಮಾಡಲು ಫೆಬ್ರವರಿ 12ರಂದು ಸರ್ಕಾರವು MHAಗೆ ಪ್ರಸ್ತಾವನೆಯನ್ನು ರವಾನಿಸಿತ್ತು. ಇದೀಗ ಮರುನಾಮಕರಣ ಮಾಡುವ ಯುಪಿ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯವು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿದೆ.

ಬಿಜೆಪಿಯ ಅಮೇಥಿ ಘಟಕದ ಜಿಲ್ಲಾಧ್ಯಕ್ಷ ರಾಮ್ ಪ್ರಸಾದ್ ಮಿಶ್ರಾ ಅವರು ಈ ಬಗ್ಗೆ ಮಾತನಾಡುತ್ತಾ, ಸ್ಥಳೀಯ ದೇವಾಲಯಗಳು, ಸಂತರು, ವಿಗ್ರಹಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಅಮೇಥಿಯಲ್ಲಿ ರೈಲು ನಿಲ್ದಾಣಗಳಿಗೆ ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಬಹುಕಾಲದಿಂದ ಇತ್ತು ಎಂದು ಮಾಹಿತಿ ನೀಡಿದ್ದಾರೆ.

ಮುಸ್ಲಿಂ ಬಾಹುಳ್ಯ ಇರುವ ಕಾಸಿಂಪುರ ಗ್ರಾಮದ ಹೆಸರನ್ನು ಕಾಸಿಂಪುರ ಹಾಲ್ಟ್ ರೈಲ್ವೆ ನಿಲ್ದಾಣಕ್ಕೆ ಹೆಸರಿಸಲಾಗಿತ್ತು‌. ಇದನ್ನು ಜೈಸ್ ಸಿಟಿ ಎಂದು ಮರುನಾಮಕರಣ ಮಾಡಬೇಕೆಂದು ಸಲಹೆ ನೀಡಲಾಯಿತು. ಪ್ರಸ್ತುತ ಜೈಸ್ ರೈಲು ನಿಲ್ದಾಣವು ಅದರ ಸಮೀಪದಲ್ಲಿ ಅನೇಕ ಆಶ್ರಮಗಳನ್ನು ಹೊಂದಿದೆ. ಇದರಲ್ಲಿ ಪ್ರಮುಖವಾದದ್ದು ಗುರು ಗೋರಖನಾಥ ಧಾಮ್ ಆಶ್ರಮ, ಆದ್ದರಿಂದ ನಿಲ್ದಾಣಕ್ಕೆ ಆಶ್ರಮದ ಹೆಸರನ್ನು ಮರುನಾಮಕರಣ ಮಾಡಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...