Homeಮುಖಪುಟ80 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

80 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

- Advertisement -
- Advertisement -

80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿದ್ದು, ಮೀನುಗಾರರನ್ನು ಅಟ್ಟಾರಿ-ವಾಘಾ ಗಡಿಯಲ್ಲಿ ಬಿಎಸ್‌ಎಫ್ ಅಧಿಕಾರಿಗಳ ಜೊತೆ ಕಳುಹಿಸಿಕೊಟ್ಟಿದ್ದಾರೆ.

3 ವರ್ಷದ ಹಿಂದೆ ಅರಬ್ಬಿ ಸಮುದ್ರದಲ್ಲಿ ಅಕ್ರಮವಾಗಿ ಗಡಿರೇಖೆ ಪ್ರವೇಶಿಸಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದ್ದು, 80 ಭಾರತೀಯ ಮೀನುಗಾರರನ್ನು ಕರಾಚಿಯ ಮಲಿರ್ ಜೈಲಿನಲ್ಲಿರಿಸಲಾಗಿತ್ತು.

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೀನುಗಾರರಿಗೆ ತುರ್ತು ಪ್ರಯಾಣ ಪ್ರಮಾಣಪತ್ರ ನೀಡಿದೆ. ಅಟ್ಟಾರಿ-ವಾಘಾ ಗಡಿಯ ಭೂ ಸಾರಿಗೆ ಮಾರ್ಗದ ಮೂಲಕ ಎಲ್ಲಾ ಕೈದಿಗಳು ಶುಕ್ರವಾರ ರಾತ್ರಿ ಭಾರತದ ಗಡಿ ದಾಟಿದ್ದಾರೆ ಎಂದು ಪಂಜಾಬ್‌ನ ಪೊಲೀಸ್‌ ಅಧಿಕಾರಿ ಅರುಣ್ ಮಹಲ್ ಹೇಳಿದ್ದಾರೆ.

ಮೀನುಗಾರರ ವಾಪಸ್ಸಾತಿ ನಂತರ ಭಾರತೀಯ ವೈದ್ಯರ ತಂಡವು ವೈದ್ಯಕೀಯ ಪರೀಕ್ಷೆಯನ್ನು ನಡೆಸಿದೆ ಎಂದು ಅಟ್ಟಾರಿ-ವಾಘಾ ಗಡಿಯ ಜಂಟಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೇಳಿದ್ದಾರೆ.

ಅರೇಬಿಯನ್ ಸಮುದ್ರದಲ್ಲಿ ಕಡಲ ಗಡಿಯನ್ನು ಸರಿಯಾಗಿ ಗುರುತಿಸದ ಕಾರಣ, ಭಾರತ ಮತ್ತು ಪಾಕಿಸ್ತಾನದ ಎರಡೂ ಕಡೆಯ ಮೀನುಗಾರರು ಆಗಾಗ್ಗೆ ಬಂಧನಕ್ಕೆ ಒಳಗಾಗುತ್ತಾರೆ. ಅನೇಕ ಮೀನುಗಾರಿಕಾ ದೋಣಿಗಳು ತಮ್ಮ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಅಗತ್ಯವಾದ ತಂತ್ರಜ್ಞಾನವನ್ನು ಹೊಂದಿರದಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಎಎನ್‌ಐ ಜೊತೆ ಮಾತನಾಡಿದ ಮೀನುಗಾರರೊಬ್ಬರು, ನಾವು ಆಕಸ್ಮಿಕವಾಗಿ ಚಂಡಮಾರುತದ ವೇಳೆ ಅಂತರಾಷ್ಟ್ರೀಯ ಗಡಿಯನ್ನು ದಾಟಿದ್ದೇವೆ. ನಾವು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದೆವು. ಈಗ ಎಲ್ಲರೂ ಹಿಂತಿರುಗಿದ್ದಾರೆ. ಇನ್ನೂ 184 ಮಂದಿ ಜೈಲಿನಲ್ಲಿದ್ದಾರೆ. ಅವರನ್ನೂ ವಾಪಸ್ ಕರೆತರುವಂತೆ ನಾನು ಸರ್ಕಾರವನ್ನು ಒತ್ತಾಯಿಸಲು ಬಯಸುತ್ತೇನೆ. ಅವರಲ್ಲಿ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

ನಾವು ಗಡಿ ದಾಟಿದಾಗ ನಮಗೆ ತಿಳಿದಿರಲಿಲ್ಲ. ಪಾಕಿಸ್ತಾನ ನೌಕಾಪಡೆ ಬಂದು ನಮ್ಮನ್ನು ಬಂಧಿಸಿತು. ನಾನು ಬಂದು ಸುಮಾರು 3ವರ್ಷ 3 ತಿಂಗಳಾಗಿದೆ. ನಮ್ಮ ದೋಣಿಗಳನ್ನು ಬಿಡುಗಡೆ ಮಾಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಅವು ತುಂಬಾ ದುಬಾರಿಯಾಗಿದೆ ಎಂದು ಇನ್ನೋರ್ವ ಮೀನುಗಾರ ಹೇಳಿದ್ದಾರೆ.

ಇದನ್ನು ಓದಿ: ವಿಜಯೇಂದ್ರನದ್ದು ಅತ್ತೂ, ಕರೆದು ಔತಣ ಮಾಡಿಸಿಕೊಂಡ ಸ್ಥಿತಿ: ಜಗದೀಶ್‌ ಶೆಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...