Homeಮುಖಪುಟ80 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

80 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

- Advertisement -
- Advertisement -

80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿದ್ದು, ಮೀನುಗಾರರನ್ನು ಅಟ್ಟಾರಿ-ವಾಘಾ ಗಡಿಯಲ್ಲಿ ಬಿಎಸ್‌ಎಫ್ ಅಧಿಕಾರಿಗಳ ಜೊತೆ ಕಳುಹಿಸಿಕೊಟ್ಟಿದ್ದಾರೆ.

3 ವರ್ಷದ ಹಿಂದೆ ಅರಬ್ಬಿ ಸಮುದ್ರದಲ್ಲಿ ಅಕ್ರಮವಾಗಿ ಗಡಿರೇಖೆ ಪ್ರವೇಶಿಸಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದ್ದು, 80 ಭಾರತೀಯ ಮೀನುಗಾರರನ್ನು ಕರಾಚಿಯ ಮಲಿರ್ ಜೈಲಿನಲ್ಲಿರಿಸಲಾಗಿತ್ತು.

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೀನುಗಾರರಿಗೆ ತುರ್ತು ಪ್ರಯಾಣ ಪ್ರಮಾಣಪತ್ರ ನೀಡಿದೆ. ಅಟ್ಟಾರಿ-ವಾಘಾ ಗಡಿಯ ಭೂ ಸಾರಿಗೆ ಮಾರ್ಗದ ಮೂಲಕ ಎಲ್ಲಾ ಕೈದಿಗಳು ಶುಕ್ರವಾರ ರಾತ್ರಿ ಭಾರತದ ಗಡಿ ದಾಟಿದ್ದಾರೆ ಎಂದು ಪಂಜಾಬ್‌ನ ಪೊಲೀಸ್‌ ಅಧಿಕಾರಿ ಅರುಣ್ ಮಹಲ್ ಹೇಳಿದ್ದಾರೆ.

ಮೀನುಗಾರರ ವಾಪಸ್ಸಾತಿ ನಂತರ ಭಾರತೀಯ ವೈದ್ಯರ ತಂಡವು ವೈದ್ಯಕೀಯ ಪರೀಕ್ಷೆಯನ್ನು ನಡೆಸಿದೆ ಎಂದು ಅಟ್ಟಾರಿ-ವಾಘಾ ಗಡಿಯ ಜಂಟಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೇಳಿದ್ದಾರೆ.

ಅರೇಬಿಯನ್ ಸಮುದ್ರದಲ್ಲಿ ಕಡಲ ಗಡಿಯನ್ನು ಸರಿಯಾಗಿ ಗುರುತಿಸದ ಕಾರಣ, ಭಾರತ ಮತ್ತು ಪಾಕಿಸ್ತಾನದ ಎರಡೂ ಕಡೆಯ ಮೀನುಗಾರರು ಆಗಾಗ್ಗೆ ಬಂಧನಕ್ಕೆ ಒಳಗಾಗುತ್ತಾರೆ. ಅನೇಕ ಮೀನುಗಾರಿಕಾ ದೋಣಿಗಳು ತಮ್ಮ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಅಗತ್ಯವಾದ ತಂತ್ರಜ್ಞಾನವನ್ನು ಹೊಂದಿರದಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಎಎನ್‌ಐ ಜೊತೆ ಮಾತನಾಡಿದ ಮೀನುಗಾರರೊಬ್ಬರು, ನಾವು ಆಕಸ್ಮಿಕವಾಗಿ ಚಂಡಮಾರುತದ ವೇಳೆ ಅಂತರಾಷ್ಟ್ರೀಯ ಗಡಿಯನ್ನು ದಾಟಿದ್ದೇವೆ. ನಾವು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದೆವು. ಈಗ ಎಲ್ಲರೂ ಹಿಂತಿರುಗಿದ್ದಾರೆ. ಇನ್ನೂ 184 ಮಂದಿ ಜೈಲಿನಲ್ಲಿದ್ದಾರೆ. ಅವರನ್ನೂ ವಾಪಸ್ ಕರೆತರುವಂತೆ ನಾನು ಸರ್ಕಾರವನ್ನು ಒತ್ತಾಯಿಸಲು ಬಯಸುತ್ತೇನೆ. ಅವರಲ್ಲಿ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

ನಾವು ಗಡಿ ದಾಟಿದಾಗ ನಮಗೆ ತಿಳಿದಿರಲಿಲ್ಲ. ಪಾಕಿಸ್ತಾನ ನೌಕಾಪಡೆ ಬಂದು ನಮ್ಮನ್ನು ಬಂಧಿಸಿತು. ನಾನು ಬಂದು ಸುಮಾರು 3ವರ್ಷ 3 ತಿಂಗಳಾಗಿದೆ. ನಮ್ಮ ದೋಣಿಗಳನ್ನು ಬಿಡುಗಡೆ ಮಾಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಅವು ತುಂಬಾ ದುಬಾರಿಯಾಗಿದೆ ಎಂದು ಇನ್ನೋರ್ವ ಮೀನುಗಾರ ಹೇಳಿದ್ದಾರೆ.

ಇದನ್ನು ಓದಿ: ವಿಜಯೇಂದ್ರನದ್ದು ಅತ್ತೂ, ಕರೆದು ಔತಣ ಮಾಡಿಸಿಕೊಂಡ ಸ್ಥಿತಿ: ಜಗದೀಶ್‌ ಶೆಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...