Homeಮುಖಪುಟನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

ನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

- Advertisement -
- Advertisement -

ಲಕ್ನೋದಲ್ಲಿ ಇತ್ತೀಚೆಗೆ ಉದ್ಘಾಟನೆಯಾದ ಲುಲು ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್‌ ಆದ ಬಳಿಕ ಮೂಲಭೂತವಾಗಿ ಹಿಂದುತ್ವ ಗುಂಪುಗಳು ‘ಲವ್‌ ಜಿಹಾದ್’ ಆರೋಪ ಮಾಡಿವೆ.

ಅಖಿಲ ಭಾರತೀಯ ಹಿಂದೂ ಮಹಾಸಭಾ ಆರೋಪ ಮಾಡಿದ್ದು, “ಇಲ್ಲಿನ ಉದ್ಯೋಗಗಳಲ್ಲಿ ಶೇ. 70ರಷ್ಟು ಮುಸ್ಲಿಂ ಪುರುಷರು, ಶೇ. 30ರಷ್ಟು ಹಿಂದೂ ಮಹಿಳೆಯರು ಕೆಲಸ ಮಾಡುತ್ತಾರೆ. ಆ ಮೂಲಕ ಲವ್‌ ಜಿಹಾದ್‌ ನಡೆಸಲಾಗುತ್ತಿದೆ” ಎಂದಿದೆ. ಇದಕ್ಕೆ ಲುಲು ಮಾಲ್‌ ಮ್ಯಾನೇಜ್‌ಮೆಂಟ್ ಸ್ಪಷ್ಟೀಕರಣ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶೇ. 80ರಷ್ಟು ಲುಲು ಮಾಲ್‌ ಉದ್ಯೋಗಿಗಳು ಹಿಂದೂಗಳಾಗಿದ್ದಾರೆ. ಮಾಲ್ ತನ್ನ ಉದ್ಯೋಗ ನೀತಿಯಲ್ಲಿ ಪಕ್ಷಪಾತಿಯಾಗಿಲ್ಲ. ಮುಸ್ಲಿಮರಿಗೆ ಆದ್ಯತೆ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾಗಿದೆ” ಎಂದು ಲುಲು ಮಾಲ್ ತಿಳಿಸಿದೆ.

“ಯಾವುದೇ ತಾರತಮ್ಯವಿಲ್ಲದೆ ವ್ಯಾಪಾರವನ್ನು ನಡೆಸುವ ಸಂಪೂರ್ಣ ವೃತ್ತಿಪರ ಸಂಸ್ಥೆ ನಮ್ಮದಾಗಿದೆ. ನಮ್ಮ ಉದ್ಯೋಗಿಗಳನ್ನು ಕೌಶಲ್ಯ ಮತ್ತು ಅರ್ಹತೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದೆಯೇ ಹೊರತು ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಅಲ್ಲ” ಎಂದು ಸ್ಪಷ್ಟಪಡಿಸಿದೆ.

“ಕೆಲವು ಸ್ವಾರ್ಥಿಗಳು ನಮ್ಮನ್ನು ಟಾರ್ಗೆಟ್ ಮಾಡಲು ಪ್ರಯತ್ನಿಸುತ್ತಿರುವುದು ದುಃಖಕರವಾಗಿದೆ. ನಮ್ಮ ಉದ್ಯೋಗಿಗಳಲ್ಲಿ 80 ಪ್ರತಿಶತದಷ್ಟು ಹಿಂದೂಗಳು ಇದ್ದಾರೆ. ಉಳಿದವರು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಇತರ ವಿವಿಧ ಸಮುದಾಯಗಳಿಗೆ ಸೇರಿದ್ದಾರೆ” ಎಂದು ತಿಳಿಸಿದೆ.

ಮಾಲ್ ಆಡಳಿತವು ಎಫ್‌ಐಆರ್ ದಾಖಲಿಸಿದೆ. ಸಾರ್ವಜನಿಕ ಪ್ರದೇಶದಲ್ಲಿ “ದುರುದ್ದೇಶದಿಂದ” ಪ್ರಾರ್ಥನೆಗಳನ್ನು ನಡೆಸಲು ಪ್ರಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿರುವುದಾಗಿ ಮಾಲ್‌ ಹೇಳಿದೆ.

ಶನಿವಾರ ಲುಲು ಮಾಲ್‌ಗೆ ಪ್ರವೇಶಿಸಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರನ್ನು ಇತ್ತೀಚೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲ್‌ನಲ್ಲಿ ನಮಾಜ್ ಮಾಡಿದ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ಅಲ್ಲದೇ ಗಲಭೆ ಸೃಷ್ಟಿಸುವ ಪಿತೂರಿಯಿಂದಲೇ ಇಲ್ಲಿ ನಮಾಜ್‌ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ನಮಾಜ್‌ ಮಾಡಿದರಿಗೆ ನಮಾಜ್ ಮಾಡುವ ವಿಧಿ ವಿಧಾನವೂ ತಿಳಿದಿರಲಿಲ್ಲ ಎಂದು ವಿಡಿಯೊವನ್ನು ಪರಿಶೀಲಿಸಿದವರು ಹೇಳುತ್ತಿದ್ದಾರೆ.

ಸಾಮಾನ್ಯವಾಗಿ ಐದರಿಂದ ಆರು ನಿಮಿಷಗಳ ಕಾಲ ನಡೆಯುವ ನಮಾಜ್‌ ಕೇವಲ ಒಂದೇ ನಿಮಿಷದಲ್ಲಿ ಮುಗಿಯುತ್ತದೆ. ಜೊತೆಗೆ ಮಾಲ್‌ಗೆ ಬಂದಿರುವ ಈ ದುಷ್ಕರ್ಮಿಗಳು ಮಾಲ್‌ನಲ್ಲಿ ಏನನ್ನೂ ಖರೀದಿಸದೇ ಕೇವಲ ವಿವಾದ ಸೃಷ್ಟಿಸಲೆಂದೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿರುವ ಪೊಲೀಸರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...