Homeಮುಖಪುಟನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

ನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

- Advertisement -
- Advertisement -

ಲಕ್ನೋದಲ್ಲಿ ಇತ್ತೀಚೆಗೆ ಉದ್ಘಾಟನೆಯಾದ ಲುಲು ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್‌ ಆದ ಬಳಿಕ ಮೂಲಭೂತವಾಗಿ ಹಿಂದುತ್ವ ಗುಂಪುಗಳು ‘ಲವ್‌ ಜಿಹಾದ್’ ಆರೋಪ ಮಾಡಿವೆ.

ಅಖಿಲ ಭಾರತೀಯ ಹಿಂದೂ ಮಹಾಸಭಾ ಆರೋಪ ಮಾಡಿದ್ದು, “ಇಲ್ಲಿನ ಉದ್ಯೋಗಗಳಲ್ಲಿ ಶೇ. 70ರಷ್ಟು ಮುಸ್ಲಿಂ ಪುರುಷರು, ಶೇ. 30ರಷ್ಟು ಹಿಂದೂ ಮಹಿಳೆಯರು ಕೆಲಸ ಮಾಡುತ್ತಾರೆ. ಆ ಮೂಲಕ ಲವ್‌ ಜಿಹಾದ್‌ ನಡೆಸಲಾಗುತ್ತಿದೆ” ಎಂದಿದೆ. ಇದಕ್ಕೆ ಲುಲು ಮಾಲ್‌ ಮ್ಯಾನೇಜ್‌ಮೆಂಟ್ ಸ್ಪಷ್ಟೀಕರಣ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶೇ. 80ರಷ್ಟು ಲುಲು ಮಾಲ್‌ ಉದ್ಯೋಗಿಗಳು ಹಿಂದೂಗಳಾಗಿದ್ದಾರೆ. ಮಾಲ್ ತನ್ನ ಉದ್ಯೋಗ ನೀತಿಯಲ್ಲಿ ಪಕ್ಷಪಾತಿಯಾಗಿಲ್ಲ. ಮುಸ್ಲಿಮರಿಗೆ ಆದ್ಯತೆ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾಗಿದೆ” ಎಂದು ಲುಲು ಮಾಲ್ ತಿಳಿಸಿದೆ.

“ಯಾವುದೇ ತಾರತಮ್ಯವಿಲ್ಲದೆ ವ್ಯಾಪಾರವನ್ನು ನಡೆಸುವ ಸಂಪೂರ್ಣ ವೃತ್ತಿಪರ ಸಂಸ್ಥೆ ನಮ್ಮದಾಗಿದೆ. ನಮ್ಮ ಉದ್ಯೋಗಿಗಳನ್ನು ಕೌಶಲ್ಯ ಮತ್ತು ಅರ್ಹತೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದೆಯೇ ಹೊರತು ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಅಲ್ಲ” ಎಂದು ಸ್ಪಷ್ಟಪಡಿಸಿದೆ.

“ಕೆಲವು ಸ್ವಾರ್ಥಿಗಳು ನಮ್ಮನ್ನು ಟಾರ್ಗೆಟ್ ಮಾಡಲು ಪ್ರಯತ್ನಿಸುತ್ತಿರುವುದು ದುಃಖಕರವಾಗಿದೆ. ನಮ್ಮ ಉದ್ಯೋಗಿಗಳಲ್ಲಿ 80 ಪ್ರತಿಶತದಷ್ಟು ಹಿಂದೂಗಳು ಇದ್ದಾರೆ. ಉಳಿದವರು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಇತರ ವಿವಿಧ ಸಮುದಾಯಗಳಿಗೆ ಸೇರಿದ್ದಾರೆ” ಎಂದು ತಿಳಿಸಿದೆ.

ಮಾಲ್ ಆಡಳಿತವು ಎಫ್‌ಐಆರ್ ದಾಖಲಿಸಿದೆ. ಸಾರ್ವಜನಿಕ ಪ್ರದೇಶದಲ್ಲಿ “ದುರುದ್ದೇಶದಿಂದ” ಪ್ರಾರ್ಥನೆಗಳನ್ನು ನಡೆಸಲು ಪ್ರಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿರುವುದಾಗಿ ಮಾಲ್‌ ಹೇಳಿದೆ.

ಶನಿವಾರ ಲುಲು ಮಾಲ್‌ಗೆ ಪ್ರವೇಶಿಸಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರನ್ನು ಇತ್ತೀಚೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲ್‌ನಲ್ಲಿ ನಮಾಜ್ ಮಾಡಿದ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ಅಲ್ಲದೇ ಗಲಭೆ ಸೃಷ್ಟಿಸುವ ಪಿತೂರಿಯಿಂದಲೇ ಇಲ್ಲಿ ನಮಾಜ್‌ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ನಮಾಜ್‌ ಮಾಡಿದರಿಗೆ ನಮಾಜ್ ಮಾಡುವ ವಿಧಿ ವಿಧಾನವೂ ತಿಳಿದಿರಲಿಲ್ಲ ಎಂದು ವಿಡಿಯೊವನ್ನು ಪರಿಶೀಲಿಸಿದವರು ಹೇಳುತ್ತಿದ್ದಾರೆ.

ಸಾಮಾನ್ಯವಾಗಿ ಐದರಿಂದ ಆರು ನಿಮಿಷಗಳ ಕಾಲ ನಡೆಯುವ ನಮಾಜ್‌ ಕೇವಲ ಒಂದೇ ನಿಮಿಷದಲ್ಲಿ ಮುಗಿಯುತ್ತದೆ. ಜೊತೆಗೆ ಮಾಲ್‌ಗೆ ಬಂದಿರುವ ಈ ದುಷ್ಕರ್ಮಿಗಳು ಮಾಲ್‌ನಲ್ಲಿ ಏನನ್ನೂ ಖರೀದಿಸದೇ ಕೇವಲ ವಿವಾದ ಸೃಷ್ಟಿಸಲೆಂದೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿರುವ ಪೊಲೀಸರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...