Homeಮುಖಪುಟನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

ನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

- Advertisement -
- Advertisement -

ಲಕ್ನೋದಲ್ಲಿ ಇತ್ತೀಚೆಗೆ ಉದ್ಘಾಟನೆಯಾದ ಲುಲು ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್‌ ಆದ ಬಳಿಕ ಮೂಲಭೂತವಾಗಿ ಹಿಂದುತ್ವ ಗುಂಪುಗಳು ‘ಲವ್‌ ಜಿಹಾದ್’ ಆರೋಪ ಮಾಡಿವೆ.

ಅಖಿಲ ಭಾರತೀಯ ಹಿಂದೂ ಮಹಾಸಭಾ ಆರೋಪ ಮಾಡಿದ್ದು, “ಇಲ್ಲಿನ ಉದ್ಯೋಗಗಳಲ್ಲಿ ಶೇ. 70ರಷ್ಟು ಮುಸ್ಲಿಂ ಪುರುಷರು, ಶೇ. 30ರಷ್ಟು ಹಿಂದೂ ಮಹಿಳೆಯರು ಕೆಲಸ ಮಾಡುತ್ತಾರೆ. ಆ ಮೂಲಕ ಲವ್‌ ಜಿಹಾದ್‌ ನಡೆಸಲಾಗುತ್ತಿದೆ” ಎಂದಿದೆ. ಇದಕ್ಕೆ ಲುಲು ಮಾಲ್‌ ಮ್ಯಾನೇಜ್‌ಮೆಂಟ್ ಸ್ಪಷ್ಟೀಕರಣ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶೇ. 80ರಷ್ಟು ಲುಲು ಮಾಲ್‌ ಉದ್ಯೋಗಿಗಳು ಹಿಂದೂಗಳಾಗಿದ್ದಾರೆ. ಮಾಲ್ ತನ್ನ ಉದ್ಯೋಗ ನೀತಿಯಲ್ಲಿ ಪಕ್ಷಪಾತಿಯಾಗಿಲ್ಲ. ಮುಸ್ಲಿಮರಿಗೆ ಆದ್ಯತೆ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾಗಿದೆ” ಎಂದು ಲುಲು ಮಾಲ್ ತಿಳಿಸಿದೆ.

“ಯಾವುದೇ ತಾರತಮ್ಯವಿಲ್ಲದೆ ವ್ಯಾಪಾರವನ್ನು ನಡೆಸುವ ಸಂಪೂರ್ಣ ವೃತ್ತಿಪರ ಸಂಸ್ಥೆ ನಮ್ಮದಾಗಿದೆ. ನಮ್ಮ ಉದ್ಯೋಗಿಗಳನ್ನು ಕೌಶಲ್ಯ ಮತ್ತು ಅರ್ಹತೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದೆಯೇ ಹೊರತು ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಅಲ್ಲ” ಎಂದು ಸ್ಪಷ್ಟಪಡಿಸಿದೆ.

“ಕೆಲವು ಸ್ವಾರ್ಥಿಗಳು ನಮ್ಮನ್ನು ಟಾರ್ಗೆಟ್ ಮಾಡಲು ಪ್ರಯತ್ನಿಸುತ್ತಿರುವುದು ದುಃಖಕರವಾಗಿದೆ. ನಮ್ಮ ಉದ್ಯೋಗಿಗಳಲ್ಲಿ 80 ಪ್ರತಿಶತದಷ್ಟು ಹಿಂದೂಗಳು ಇದ್ದಾರೆ. ಉಳಿದವರು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಇತರ ವಿವಿಧ ಸಮುದಾಯಗಳಿಗೆ ಸೇರಿದ್ದಾರೆ” ಎಂದು ತಿಳಿಸಿದೆ.

ಮಾಲ್ ಆಡಳಿತವು ಎಫ್‌ಐಆರ್ ದಾಖಲಿಸಿದೆ. ಸಾರ್ವಜನಿಕ ಪ್ರದೇಶದಲ್ಲಿ “ದುರುದ್ದೇಶದಿಂದ” ಪ್ರಾರ್ಥನೆಗಳನ್ನು ನಡೆಸಲು ಪ್ರಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿರುವುದಾಗಿ ಮಾಲ್‌ ಹೇಳಿದೆ.

ಶನಿವಾರ ಲುಲು ಮಾಲ್‌ಗೆ ಪ್ರವೇಶಿಸಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರನ್ನು ಇತ್ತೀಚೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲ್‌ನಲ್ಲಿ ನಮಾಜ್ ಮಾಡಿದ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ಅಲ್ಲದೇ ಗಲಭೆ ಸೃಷ್ಟಿಸುವ ಪಿತೂರಿಯಿಂದಲೇ ಇಲ್ಲಿ ನಮಾಜ್‌ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ನಮಾಜ್‌ ಮಾಡಿದರಿಗೆ ನಮಾಜ್ ಮಾಡುವ ವಿಧಿ ವಿಧಾನವೂ ತಿಳಿದಿರಲಿಲ್ಲ ಎಂದು ವಿಡಿಯೊವನ್ನು ಪರಿಶೀಲಿಸಿದವರು ಹೇಳುತ್ತಿದ್ದಾರೆ.

ಸಾಮಾನ್ಯವಾಗಿ ಐದರಿಂದ ಆರು ನಿಮಿಷಗಳ ಕಾಲ ನಡೆಯುವ ನಮಾಜ್‌ ಕೇವಲ ಒಂದೇ ನಿಮಿಷದಲ್ಲಿ ಮುಗಿಯುತ್ತದೆ. ಜೊತೆಗೆ ಮಾಲ್‌ಗೆ ಬಂದಿರುವ ಈ ದುಷ್ಕರ್ಮಿಗಳು ಮಾಲ್‌ನಲ್ಲಿ ಏನನ್ನೂ ಖರೀದಿಸದೇ ಕೇವಲ ವಿವಾದ ಸೃಷ್ಟಿಸಲೆಂದೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿರುವ ಪೊಲೀಸರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...