Homeಮುಖಪುಟಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ 800 ಕೋಟಿ ಹಗರಣ: ಮಾಗಡಿ ಶಾಸಕ ಎ.ಮಂಜುನಾಥ್ ಆರೋಪ

- Advertisement -
- Advertisement -

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ವೇಳೆ ಯೋಜನಾ ನಿರ್ದೇಶಕರು 800 ಕೋಟಿ ರೂ ಹಗರಣ ನಡೆಸಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕೆಂದು ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಒತ್ತಾಯಿಸಿದ್ದಾರೆ.

ಆರಂಭದಲ್ಲಿ ಭೂ ಸ್ವಾಧೀನಕ್ಕಾಗಿ 8,060 ಕೋಟಿ ರೂಗೆ ಡಿಪಿಆರ್ ಆಗಿತ್ತು. ಈಗ 10,600 ಕೋಟಿ ರೂವರೆಗೂ ಬಂದು ನಿಂತಿದೆ. ಪ್ರಾಥಮಿಕ ಭೂ ಸ್ವಾಧೀನ ನಡೆದಾಗ ಇದ್ದ ಹಣಕ್ಕೂ, ಸದ್ಯ ಅವರು ನೀಡಿರುವ ಹಣಕ್ಕೂ 800-900 ಕೋಟಿ ರೂ ಹೆಚ್ಚು ತೋರಿಸುತ್ತಿದ್ದಾರೆ. ಆ ಮೂಲಕ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಶಾಸಕರು, “ಬೆಂಗಳೂರು ಮೈಸೂರು ರಸ್ತೆಗಾಗಿ ನಾವು ಜನರನ್ನು ಒಪ್ಪಿಸಿ ಭೂಮಿ ಬಿಟ್ಟುಕೊಡುವಂತೆ ಮನವಿ ಮಾಡಿದ್ದೆವು. ಆದರೆ ಆ ಸಮಯದಲ್ಲಿ ಜನರಿಂದ ಭೂಮಿ ತೆಗೆದುಕೊಂಡು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆನಂತರ ಸರ್ಕಾರಕ್ಕೆ ಬಿಟ್ಟುಕೊಟ್ಟಿದ್ದಾರೆ. ಯಾರದೋ ಭೂಮಿಗೆ ಇನ್ಯಾರೊ ಪರಿಹಾರ ಪಡೆಯುತ್ತಿದ್ದಾರೆ. ಆ ಮೂಲಕ ಯೋಜನಾ ನಿರ್ದೇಶಕರು ಹಣ ಹೊಡೆದಿದ್ದಾರೆ. ಇದರಿಂದ ನಿಜವಾದ ರೈತರಿಗೆ ಅನ್ಯಾಯವಾಗಿದೆ” ಎಂದು ದೂರಿದರು.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಸಮೀಕ್ಷೆ; ಮಾಗಡಿಯಲ್ಲಿ ಗೆಲ್ಲುವವರು ಯಾರು?

ರಸ್ತೆ ಮಾಡುವಾಗ ಕೆರೆಗಳನ್ನು ಇಭ್ಭಾಗ ಮಾಡಲಾಗಿದೆ. ಕೆರೆಯ ಮಧ್ಯದಲ್ಲಿ ರಸ್ತೆ ಮಾಡಲಾಗಿದೆ. ರಾಜಕಾಲುವೆ ಮತ್ತು ಸ್ವಾಭಾವಿಕ ಹಳ್ಳಗಳನ್ನು ಬೇರೆ ದಿಕ್ಕಿಗೆ ತಿರುಗಿಸಲಾಗಿದೆ. ಈ ಕಾರಣದಿಂದ ಕಳೆದ ವಾರದಿಂದ ರಸ್ತೆಯಲ್ಲಿ ನೀರು ತುಂಬಿಕೊಂಡು ಪರದಾಡುವ ಸ್ಥಿತಿ ಬಂದಿದೆ ಎಂದ ಅವರು ಶನಿವಾರದ ಪತ್ರಿಕಾಗೋಷ್ಟಿಯಲ್ಲಿ ಜಲಾವೃತಗೊಂಡ ರಸ್ತೆಯ ಫೋಟೊಗಳನ್ನು ಬಿಡುಗಡೆ ಮಾಡಿದ್ದಾರೆ.

ಒಂದು ಕಿ.ಮೀ ರಸ್ತೆ ನಿರ್ಮಾಣಕ್ಕೆ 80 ಕೋಟಿ ರೂ ಖರ್ಚು ಮಾಡುತ್ತಿದ್ದಾರೆ. ಅವರು ನಿರ್ಮಿಸಿದ ಹಲವು ಕಿ.ಮೀ ನಷ್ಟು ರಸ್ತೆ ಹಾಳಾಗಿದ್ದು ಅದರಿಂದ 1,300 ಕೋಟಿ ರೂ ನಷ್ಟವಾಗಿದೆ. ಜನರ ತೆರಿಗೆ ಹಣವನ್ನು ಈ ರೀತಿ ವ್ಯಯ ಮಾಡುವುದು ಸರಿಯೇ? ಈ ರಸ್ತೆಗೆ ಪ್ರತಾಪ್ ಸಿಂಹರವರು ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆಯೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಮಸ್ಯೆಗಳಿಗೆಲ್ಲ ಪ್ರಾಜೆಕ್ಟ್ ಡೈರೆಕ್ಟರ್ ಡಿ.ಬಿ ಶ್ರೀಧರ್ ನೇರ ಹೊಣೆಯಾಗಿದ್ದಾರೆ. ಅವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹರವರ ಬೆಂಬಲವಿದೆ. ಹಾಗಾಗಿ ಈ ಹಗರಣದ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಸಲ್ಲಿಸಲು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗುತ್ತೇವೆ ಮತ್ತು ಪ್ರಧಾನಿಯವರ ಗಮನಕ್ಕೆ ತರುತ್ತೇವೆ ಎಂದರು.


ಇದನ್ನೂ ಓದಿ: ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...