Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿ 2021ರ ಮೇ ತಿಂಗಳೊಂದರಲ್ಲಿಯೇ 8,000 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಅಹಮದ್‌ ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಕೊರೋನಾ ಮೂರನೆಯ ಅಲೆ ನಿಧಾನಕ್ಕೆ ಆರಂಭವಾಗುತ್ತಿರುವ ಲಕ್ಷಣವನ್ನು ತೋರಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಿದ್ದು ಕೊರೋನಾ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದಲ್ಲೂ ದಿನೇ ದಿನೇ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಲಿದ್ದು, ರಾಜ್ಯ ಸರ್ಕಾರ ಸಂಭಾವ್ಯ ಕೋವಿಡ್‌ ಅಲೆಯನ್ನು ನಿಯಂತ್ರಿಸಿಲು ಅಗತ್ಯ ಕ್ರಮಕ್ಕೆ ಮುಂದಾಗಬೇಕು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಸ್ಥಾಪಿಸಿದ್ದು ಸದ್ಯ ಐದು ಕೋವಿಡ್‌ ಸೋಂಕಿತ ಮಕ್ಕಳಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾವು ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಆರಂಭಿಸಿದ್ದೇವೆ. ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆಯೇ ಅಥವಾ ಯಾವಾಗ ಅರಂಭವಾಗಬಹುದು ಎಂಬುದು ಇನ್ನೂ ತಿಳಿದಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೇವೆ. ಮಕ್ಕಳ ವಿಶೇಷ ಕೋವಿಡ್‌ ವಾರ್ಡ್‌ಗಳು ಆಸ್ಪತ್ರೆಗಳ ರೀತಿಯಲ್ಲಿ ಇಲ್ಲ. ಬದಲಾಗಿ ಮಕ್ಕಳು ತಮ್ಮ ಸ್ಕೂಲ್‌ ಅಥವಾ ನರ್ಸರಿಯಲ್ಲಿ ಪಡೆಯುವ ಸೌಲಭ್ಯಗಳನ್ನು ವಿಶೇಷ ವಾರ್ಡ್‌ಗಳಲ್ಲಿ ಕಲ್ಪಿಸಲಾಗಿದೆ ಎಂದು ಸಾಂಗ್ಲಿ ನಗರ ಕಾರ್ಪೊರೇಟರ್‌ ಅಭಿಜಿತ್‌ ಬೋಂಸ್ಲೆ ತಿಳಿಸಿದ್ದಾರೆ.

ಅಹಮದನಗರ ಜಿಲ್ಲೆಯಲ್ಲಿ 8000 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್‌ ಸುಂಕಿಗೆ ತುತ್ತಾಗಿರುವುದು ಸರ್ಕಾರಕ್ಕೆ ಕೋವಿಡ್‌ ಮೂರನೇ ಅಲೆಯ ಎಚ್ಚರಿಕೆಗಂಟೆಯಾಗಿದೆ. ಜಿಲ್ಲಾಡಳಿತ ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಎಚ್ಚರಿಕೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ 10% ದಷ್ಟು ಜನರು 18 ವರ್ಷದ ಮಕ್ಕಳಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಿಲ್ಲಾಡಳಿತವು ಮಕ್ಕಳ ತಜ್ಞರೊಂದಿಗೆ ಈ ಸಬಂಧ ಚರ್ಚೆಯನ್ನು ನಡೆಸಿದೆ. ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ಸಂಬಂಧಿಸಿದ ಆಸ್ಪತ್ರೆಗೆ ತಿಳಿಸಲಾಗಿದೆ. 2021 ರ ಮೇ ತಿಂಗಳೊಂದರಲ್ಲೇ ಜಿಲ್ಲೆಯ 8000 ಮಕ್ಕಳಲ್ಲಿ ಕೊರೋನಾ ಸೋಂಕು ಧೃಢಪಟ್ಟಿರುವುದು ಮುಂದೆ ಬರಲಿರುವ ವಿಪತ್ತಿನ ಮುನ್ಸೂಚನೆಯಂತಿದೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಬೋಸ್ಲೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಎರಡನೇಯ ಅಲೆಯ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಸ್ಪತ್ರೆಗಳ ಬೆಡ್‌ಗಳ ಕೊರತೆ ಮತ್ತು ಆಕ್ಸಿಜನ್‌ ಕೊರತೆ ವ್ಯಾಪಕವಾಗಿ ತಲೆದೋರಿತು. ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹಿಂದೆ ಸಂಭವಿಸಿದ ದುರಂತ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ಶಾಸಕ ಸಂಗ್ರಾಮ್‌ ಜಗದೀಪ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ಸಂದರ್ಭದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧವಿಲ್ಲ. ಜುಲೈ ಕೊನೇ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಮಹರಾಷ್ಟ್ರದಲ್ಲಿ ಕೋವಿಡ್‌ ಮೂರನೇ ಅಲೆಯು ಕಾಣಸಿಕೊಳ್ಳುವ ಲಕ್ಷಣವಿದ್ದು ಎರಡು ತಿಂಗಳ ಅವಧಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಎರಡನೆ ಅಲೆಯು ಆರಂಭವಾದ ಮೊದಲ ರಾಜ್ಯ ಮಹಾರಾಷ್ಟ್ರ. ಫೆಭ್ರವರಿ ಕೊನೆಯಲ್ಲಿ ಆರಂಭವಾದ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಸಾವಿರಾರು ಸೋಂಕಿತರು ತೊಂದರೆಗೆ ಒಳಗಾಗಿದ್ದರು. ಆಕ್ಸಿಜನ್‌, ಅಗತ್ಯ ಔಷಧಿಗಳ ಕೊರತೆ ಮಹರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ದುರಂತಕ್ಕೆ ಕಾರಣವಾಗಿತ್ತು.

ಕೇಂದ್ರಸರ್ಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ ವಿಜಯರಾಘವನ್‌ ಅವರು ಜೂನ್‌ ತಿಂಗಳಿನ ಆರಂಭ ಅಥವಾ ಮಧ್ಯದ ವೇಳೆಗೆ ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಲಕ್ಷಣಗಳಿವೆ ಎಂದು ಸರ್ಕಾರಕ್ಕೆ ಮತ್ತು ದೇಶಕ್ಕೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಆಸ್ಪತ್ರೆಗಳ ಅವ್ಯಸ್ಥೆಯನ್ನು ತೆರೆದಿಟ್ಟ ಕೊರೋನಾ ಸಾಂಕ್ರಾಮಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...