Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿ 2021ರ ಮೇ ತಿಂಗಳೊಂದರಲ್ಲಿಯೇ 8,000 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಅಹಮದ್‌ ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಕೊರೋನಾ ಮೂರನೆಯ ಅಲೆ ನಿಧಾನಕ್ಕೆ ಆರಂಭವಾಗುತ್ತಿರುವ ಲಕ್ಷಣವನ್ನು ತೋರಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಿದ್ದು ಕೊರೋನಾ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದಲ್ಲೂ ದಿನೇ ದಿನೇ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಲಿದ್ದು, ರಾಜ್ಯ ಸರ್ಕಾರ ಸಂಭಾವ್ಯ ಕೋವಿಡ್‌ ಅಲೆಯನ್ನು ನಿಯಂತ್ರಿಸಿಲು ಅಗತ್ಯ ಕ್ರಮಕ್ಕೆ ಮುಂದಾಗಬೇಕು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಸ್ಥಾಪಿಸಿದ್ದು ಸದ್ಯ ಐದು ಕೋವಿಡ್‌ ಸೋಂಕಿತ ಮಕ್ಕಳಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾವು ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಆರಂಭಿಸಿದ್ದೇವೆ. ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆಯೇ ಅಥವಾ ಯಾವಾಗ ಅರಂಭವಾಗಬಹುದು ಎಂಬುದು ಇನ್ನೂ ತಿಳಿದಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೇವೆ. ಮಕ್ಕಳ ವಿಶೇಷ ಕೋವಿಡ್‌ ವಾರ್ಡ್‌ಗಳು ಆಸ್ಪತ್ರೆಗಳ ರೀತಿಯಲ್ಲಿ ಇಲ್ಲ. ಬದಲಾಗಿ ಮಕ್ಕಳು ತಮ್ಮ ಸ್ಕೂಲ್‌ ಅಥವಾ ನರ್ಸರಿಯಲ್ಲಿ ಪಡೆಯುವ ಸೌಲಭ್ಯಗಳನ್ನು ವಿಶೇಷ ವಾರ್ಡ್‌ಗಳಲ್ಲಿ ಕಲ್ಪಿಸಲಾಗಿದೆ ಎಂದು ಸಾಂಗ್ಲಿ ನಗರ ಕಾರ್ಪೊರೇಟರ್‌ ಅಭಿಜಿತ್‌ ಬೋಂಸ್ಲೆ ತಿಳಿಸಿದ್ದಾರೆ.

ಅಹಮದನಗರ ಜಿಲ್ಲೆಯಲ್ಲಿ 8000 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್‌ ಸುಂಕಿಗೆ ತುತ್ತಾಗಿರುವುದು ಸರ್ಕಾರಕ್ಕೆ ಕೋವಿಡ್‌ ಮೂರನೇ ಅಲೆಯ ಎಚ್ಚರಿಕೆಗಂಟೆಯಾಗಿದೆ. ಜಿಲ್ಲಾಡಳಿತ ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಎಚ್ಚರಿಕೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ 10% ದಷ್ಟು ಜನರು 18 ವರ್ಷದ ಮಕ್ಕಳಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಿಲ್ಲಾಡಳಿತವು ಮಕ್ಕಳ ತಜ್ಞರೊಂದಿಗೆ ಈ ಸಬಂಧ ಚರ್ಚೆಯನ್ನು ನಡೆಸಿದೆ. ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ಸಂಬಂಧಿಸಿದ ಆಸ್ಪತ್ರೆಗೆ ತಿಳಿಸಲಾಗಿದೆ. 2021 ರ ಮೇ ತಿಂಗಳೊಂದರಲ್ಲೇ ಜಿಲ್ಲೆಯ 8000 ಮಕ್ಕಳಲ್ಲಿ ಕೊರೋನಾ ಸೋಂಕು ಧೃಢಪಟ್ಟಿರುವುದು ಮುಂದೆ ಬರಲಿರುವ ವಿಪತ್ತಿನ ಮುನ್ಸೂಚನೆಯಂತಿದೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಬೋಸ್ಲೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಎರಡನೇಯ ಅಲೆಯ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಸ್ಪತ್ರೆಗಳ ಬೆಡ್‌ಗಳ ಕೊರತೆ ಮತ್ತು ಆಕ್ಸಿಜನ್‌ ಕೊರತೆ ವ್ಯಾಪಕವಾಗಿ ತಲೆದೋರಿತು. ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹಿಂದೆ ಸಂಭವಿಸಿದ ದುರಂತ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ಶಾಸಕ ಸಂಗ್ರಾಮ್‌ ಜಗದೀಪ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ಸಂದರ್ಭದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧವಿಲ್ಲ. ಜುಲೈ ಕೊನೇ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಮಹರಾಷ್ಟ್ರದಲ್ಲಿ ಕೋವಿಡ್‌ ಮೂರನೇ ಅಲೆಯು ಕಾಣಸಿಕೊಳ್ಳುವ ಲಕ್ಷಣವಿದ್ದು ಎರಡು ತಿಂಗಳ ಅವಧಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಎರಡನೆ ಅಲೆಯು ಆರಂಭವಾದ ಮೊದಲ ರಾಜ್ಯ ಮಹಾರಾಷ್ಟ್ರ. ಫೆಭ್ರವರಿ ಕೊನೆಯಲ್ಲಿ ಆರಂಭವಾದ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಸಾವಿರಾರು ಸೋಂಕಿತರು ತೊಂದರೆಗೆ ಒಳಗಾಗಿದ್ದರು. ಆಕ್ಸಿಜನ್‌, ಅಗತ್ಯ ಔಷಧಿಗಳ ಕೊರತೆ ಮಹರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ದುರಂತಕ್ಕೆ ಕಾರಣವಾಗಿತ್ತು.

ಕೇಂದ್ರಸರ್ಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ ವಿಜಯರಾಘವನ್‌ ಅವರು ಜೂನ್‌ ತಿಂಗಳಿನ ಆರಂಭ ಅಥವಾ ಮಧ್ಯದ ವೇಳೆಗೆ ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಲಕ್ಷಣಗಳಿವೆ ಎಂದು ಸರ್ಕಾರಕ್ಕೆ ಮತ್ತು ದೇಶಕ್ಕೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಆಸ್ಪತ್ರೆಗಳ ಅವ್ಯಸ್ಥೆಯನ್ನು ತೆರೆದಿಟ್ಟ ಕೊರೋನಾ ಸಾಂಕ್ರಾಮಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...