Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿ 2021ರ ಮೇ ತಿಂಗಳೊಂದರಲ್ಲಿಯೇ 8,000 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಅಹಮದ್‌ ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಕೊರೋನಾ ಮೂರನೆಯ ಅಲೆ ನಿಧಾನಕ್ಕೆ ಆರಂಭವಾಗುತ್ತಿರುವ ಲಕ್ಷಣವನ್ನು ತೋರಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಿದ್ದು ಕೊರೋನಾ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದಲ್ಲೂ ದಿನೇ ದಿನೇ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಲಿದ್ದು, ರಾಜ್ಯ ಸರ್ಕಾರ ಸಂಭಾವ್ಯ ಕೋವಿಡ್‌ ಅಲೆಯನ್ನು ನಿಯಂತ್ರಿಸಿಲು ಅಗತ್ಯ ಕ್ರಮಕ್ಕೆ ಮುಂದಾಗಬೇಕು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಸ್ಥಾಪಿಸಿದ್ದು ಸದ್ಯ ಐದು ಕೋವಿಡ್‌ ಸೋಂಕಿತ ಮಕ್ಕಳಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾವು ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಆರಂಭಿಸಿದ್ದೇವೆ. ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆಯೇ ಅಥವಾ ಯಾವಾಗ ಅರಂಭವಾಗಬಹುದು ಎಂಬುದು ಇನ್ನೂ ತಿಳಿದಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೇವೆ. ಮಕ್ಕಳ ವಿಶೇಷ ಕೋವಿಡ್‌ ವಾರ್ಡ್‌ಗಳು ಆಸ್ಪತ್ರೆಗಳ ರೀತಿಯಲ್ಲಿ ಇಲ್ಲ. ಬದಲಾಗಿ ಮಕ್ಕಳು ತಮ್ಮ ಸ್ಕೂಲ್‌ ಅಥವಾ ನರ್ಸರಿಯಲ್ಲಿ ಪಡೆಯುವ ಸೌಲಭ್ಯಗಳನ್ನು ವಿಶೇಷ ವಾರ್ಡ್‌ಗಳಲ್ಲಿ ಕಲ್ಪಿಸಲಾಗಿದೆ ಎಂದು ಸಾಂಗ್ಲಿ ನಗರ ಕಾರ್ಪೊರೇಟರ್‌ ಅಭಿಜಿತ್‌ ಬೋಂಸ್ಲೆ ತಿಳಿಸಿದ್ದಾರೆ.

ಅಹಮದನಗರ ಜಿಲ್ಲೆಯಲ್ಲಿ 8000 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್‌ ಸುಂಕಿಗೆ ತುತ್ತಾಗಿರುವುದು ಸರ್ಕಾರಕ್ಕೆ ಕೋವಿಡ್‌ ಮೂರನೇ ಅಲೆಯ ಎಚ್ಚರಿಕೆಗಂಟೆಯಾಗಿದೆ. ಜಿಲ್ಲಾಡಳಿತ ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಎಚ್ಚರಿಕೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ 10% ದಷ್ಟು ಜನರು 18 ವರ್ಷದ ಮಕ್ಕಳಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಿಲ್ಲಾಡಳಿತವು ಮಕ್ಕಳ ತಜ್ಞರೊಂದಿಗೆ ಈ ಸಬಂಧ ಚರ್ಚೆಯನ್ನು ನಡೆಸಿದೆ. ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ಸಂಬಂಧಿಸಿದ ಆಸ್ಪತ್ರೆಗೆ ತಿಳಿಸಲಾಗಿದೆ. 2021 ರ ಮೇ ತಿಂಗಳೊಂದರಲ್ಲೇ ಜಿಲ್ಲೆಯ 8000 ಮಕ್ಕಳಲ್ಲಿ ಕೊರೋನಾ ಸೋಂಕು ಧೃಢಪಟ್ಟಿರುವುದು ಮುಂದೆ ಬರಲಿರುವ ವಿಪತ್ತಿನ ಮುನ್ಸೂಚನೆಯಂತಿದೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಬೋಸ್ಲೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಎರಡನೇಯ ಅಲೆಯ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಸ್ಪತ್ರೆಗಳ ಬೆಡ್‌ಗಳ ಕೊರತೆ ಮತ್ತು ಆಕ್ಸಿಜನ್‌ ಕೊರತೆ ವ್ಯಾಪಕವಾಗಿ ತಲೆದೋರಿತು. ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹಿಂದೆ ಸಂಭವಿಸಿದ ದುರಂತ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ಶಾಸಕ ಸಂಗ್ರಾಮ್‌ ಜಗದೀಪ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ಸಂದರ್ಭದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧವಿಲ್ಲ. ಜುಲೈ ಕೊನೇ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಮಹರಾಷ್ಟ್ರದಲ್ಲಿ ಕೋವಿಡ್‌ ಮೂರನೇ ಅಲೆಯು ಕಾಣಸಿಕೊಳ್ಳುವ ಲಕ್ಷಣವಿದ್ದು ಎರಡು ತಿಂಗಳ ಅವಧಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಎರಡನೆ ಅಲೆಯು ಆರಂಭವಾದ ಮೊದಲ ರಾಜ್ಯ ಮಹಾರಾಷ್ಟ್ರ. ಫೆಭ್ರವರಿ ಕೊನೆಯಲ್ಲಿ ಆರಂಭವಾದ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಸಾವಿರಾರು ಸೋಂಕಿತರು ತೊಂದರೆಗೆ ಒಳಗಾಗಿದ್ದರು. ಆಕ್ಸಿಜನ್‌, ಅಗತ್ಯ ಔಷಧಿಗಳ ಕೊರತೆ ಮಹರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ದುರಂತಕ್ಕೆ ಕಾರಣವಾಗಿತ್ತು.

ಕೇಂದ್ರಸರ್ಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ ವಿಜಯರಾಘವನ್‌ ಅವರು ಜೂನ್‌ ತಿಂಗಳಿನ ಆರಂಭ ಅಥವಾ ಮಧ್ಯದ ವೇಳೆಗೆ ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಲಕ್ಷಣಗಳಿವೆ ಎಂದು ಸರ್ಕಾರಕ್ಕೆ ಮತ್ತು ದೇಶಕ್ಕೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಆಸ್ಪತ್ರೆಗಳ ಅವ್ಯಸ್ಥೆಯನ್ನು ತೆರೆದಿಟ್ಟ ಕೊರೋನಾ ಸಾಂಕ್ರಾಮಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...