Homeಮುಖಪುಟಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ...

ಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ ಎಎಪಿ ನಾಯಕನ ವಿರುದ್ಧ FIR

- Advertisement -
- Advertisement -

‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ 830 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಇಸುದನ್ ಗಧ್ವಿ ಅವರು ಟ್ವೀಟ್ ಮಾಡಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸೋಮವಾರ ಪಿಟಿಐ ವರದಿ ಮಾಡಿದೆ.

2014ಅಕ್ಟೋಬರ್ 3ರಂದು ಪ್ರಧಾನಿ ಮೋದಿ ಅವರು ಈ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮ ಆರಂಭಿಸಿದ್ದರು.ಇದು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಕಾಶವಾಣಿಯಲ್ಲಿ ಪ್ರಸಾರವಾಗುತ್ತದೆ. ಏಪ್ರಿಲ್ 30ರಂದು 100ನೇ ಸಂಚಿಕೆ ಪ್ರಸಾರವಾಗಿತ್ತು.

”ಮನ್ ಕಿ ಬಾತ್‌ನ ಒಂದು ಸಂಚಿಕೆಗೆ 8.3 ಕೋಟಿ ರೂಪಾಯಿ ವೆಚ್ಚವಾಗಿದೆ. ಅಂದರೆ ಕೇಂದ್ರವು ಇದುವರೆಗೆ 100 ಸಂಚಿಕೆಗಳಿಗೆ 830 ಕೋಟಿ ರೂ. ಖರ್ಚು ಮಾಡಿದೆ” ಎಂದು ಇಸುದನ್ ಗಧ್ವಿ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದರು, ಆದರೆ ಆನಂತರ ಅದನ್ನು ಈಗ ಅಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಪ್ರೆಸ್ ಬ್ಯೂರೋ ಆಫ್ ಇನ್ಫಾರ್ಮೇಶನ್‌ನ ಸತ್ಯ-ಪರಿಶೀಲನಾ ಘಟಕವು, ಗಧ್ವಿ ಅವರು ಟ್ವೀಟ್‌ನ ಮಾಹಿತಿಯು ತಪ್ಪುದಾರಿಗೆಳೆಯುವಂತಿದೆ ಎಂದು ಆರೋಪ ಮಾಡಿದೆ.

ಇದನ್ನೂ ಓದಿ: ‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

”8.3 ಕೋಟಿ ರೂ.ಗಳು ಇಲ್ಲಿಯವರೆಗಿನ ಮನ್ ಕಿ ಬಾತ್‌ ಕಾರ್ಯಕ್ರಮದ ಒಟ್ಟು ಜಾಹೀರಾತುಗಳಿಂದ ಬಂದಿರುವ ಹಣವಾಗಿದೆ. ಅದು ಒಂದು ಸಂಚಿಕೆಯ ಹಣ ಅಲ್ಲ. ಗಧ್ವಿ ಅವರ ಟ್ವೀಟ್‌ನ ಮಾಹಿತಿ ಸುಳ್ಳು ಎಂದು ಎಂದು ಬ್ಯೂರೋ ಭಾನುವಾರ ಟ್ವೀಟ್ ಮಾಡಿದೆ.

ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಗಧ್ವಿಯ ವಿರುದ್ಧ ಏಪ್ರಿಲ್ 29ರಂದು ಪ್ರಕರಣ ದಾಖಲಿಸಿಕೊಂಡಿದ್ದು, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು), 500 (ಮಾನನಷ್ಟ), 505(1)(ಬಿ) ಮತ್ತು (ಸಿ) (ವದಂತಿಯನ್ನು ಪ್ರಕಟಿಸುವುದು ಅಥವಾ ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ ಉದ್ದೇಶದಿಂದ ವರದಿ ಮಾಡಿ, ಅಥವಾ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧ ಮಾಡಲು ಜನರನ್ನು ಪ್ರೇರೇಪಿಸುವುದು) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ಕೆಟ್ಟ ಇಚ್ಛೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು), ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಗಧ್ವಿ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಸೈಬರ್ ಕ್ರೈಂ) ಜೆಎಂ ಯಾದವ್ ಪಿಟಿಐಗೆ ತಿಳಿಸಿದ್ದಾರೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷವು ಪ್ರತಿಕ್ರಿಯಿಸಿದ್ದು, ”ಗಧ್ವಿ ವಿರುದ್ಧದ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷಗಳ ಮೇಲೆ ಮತ್ತೊಂದು ದಾಳಿ ನಡೆಸಿದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...