Homeಕರ್ನಾಟಕ88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ :...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -


ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.

2003ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಹೇಳಿದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು

ಪೋಲೀಸ್ ಸಬ್ ಇನ್‌ಸ್ಪೆಕ್ಟರ್, ಎಎಸ್‌ಪಿ, ಡಿವೈಎಸ್‌ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸಬಹುದು

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು. ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿಪಡಿಸಿದರೆ, ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕು. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂಬುವುದಾಗಿ ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಪೋಲೀಸ್ ಠಾಣೆಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಬೇಕು

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್, ಡಿವೈಎಸ್‌ಪಿಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು ಎಂದರು.

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ

ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ.
ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು.

ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ಅವರು ತಲೆಮರೆಸಿಕೊಂಡಿದ್ದು, ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...