Homeಮುಖಪುಟಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ ಎನ್ನುತ್ತದೆ ವರದಿ

- Advertisement -
- Advertisement -

ಬೆಂಗಳೂರಿನ ಮತದಾರರು ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳೆಂದು ಭಾವಿಸುತ್ತಾರೆ. ಆದರೆ ಈ ಸಮಸ್ಯೆಯ ಪರಿಹಾರಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇಕಡಾ 88ರಷ್ಟು ಮಂದಿಯು BBMP ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಶಾಸಕರ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ ಎಂದು ಜನಾಗ್ರಹ ನಗರ ರಾಜಕೀಯ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಜನಾಗ್ರಹ ಸೆಂಟರ್ ಫಾರ್ ಸಿಟಿಝನ್ ಶಿಪ್ ಆಂಡ್ ಡೆಮಾಕ್ರಸಿ ಸಂಸ್ಥೆಯು ಕೇಂದ್ರ ನಗರ ರಾಜಕೀಯ ಸಮೀಕ್ಷೆಯನ್ನು ನಡೆಸಿದೆ. ಇದರ ಭಾಗವಾಗಿ ಸ್ಥಳೀಯ ಆಡಳಿತ, ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು, ಮುಂಬರುವ ಬಿಬಿಎಂಪಿ ಚುನಾವಣೆಗಳಿಂದ ಮತದಾರರ ನಿರೀಕ್ಷೆ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ಜೂನ್ 21 ರಂದು ವರದಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಶೇಕಡಾ 83ರಷ್ಟು ಮತದಾರರ ಪ್ರಕಾರ ಬಿಬಿಎಂಪಿ ಚುನಾವಣೆಯು ನಗರವು ಎದುರಿಸುತ್ತಿರುವ ಸಮಸ್ಯೆಗಳ ಆಧಾರದ ಮೇಲೆ ನಡೆಯಬೇಕೆ ಹೊರತು ಬೇರೆ ವಿಷಯಗಳ ಮೇಲಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯ ಮುಖ್ಯಾಂಶಗಳು:

  • ಶೇಕಡಾ 17ರಷ್ಟು ನಾಗರಿಕರಿಗೆ ಮಾತ್ರ BBMP ಮಾಜಿ ಮೇಯರ್ ಹೆಸರು ತಿಳಿದಿದೆ. ಇದಕ್ಕೆ ಹೋಲಿಸಿದ್ದಲ್ಲಿ ಶೇಕಡಾ 97ರಷ್ಟು ಮಂದಿಗೆ ಪ್ರಧಾನ ಮಂತ್ರಿಯ ಹೆಸರು ತಿಳಿದಿದ್ದು, ಶೇಕಡಾ 83ರಷ್ಟು ಮಂದಿಗೆ ರಾಜ್ಯದ ಮುಖ್ಯಮಂತ್ರಿಯ ಹೆಸರು ತಿಳಿದಿದೆ.
  • ಶೇಕಡಾ 88ರಷ್ಟು ಮಂದಿಯು ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈ ವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಎಂಎಲ್ ಎ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ.
  • ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ
  • ಬೆಂಗಳೂರಿನ ಶೇಕಡಾ 87ರಷ್ಟು ಮತದಾರರ ಪ್ರಕಾರ BBMP ಪ್ರಬಲ ಕೌನ್ಸಿಲರ್ ಗಳಿಂದ ತಮ್ಮ ವಾರ್ಡ್‌ಗಳಿಗೆ ಉತ್ತಮ ಸೇವೆ ಒದಗಿಸಿ ಮೂಲಸೌಕರ್ಯದಲ್ಲಿ ಸುಧಾರಣೆಯನ್ನು ತರಲು ಸಾಧ್ಯ
  • ಬೆಂಗಳೂರಿನ ಶೇಕಡಾ 23ರಷ್ಟು ಮತದಾರರ ಸಮಸ್ಯೆಯು ಫುಟ್ಪಾತ್ ಗೆ ಸಂಬಂಧಿಸಿದ್ದು, 20 ಪ್ರತಿಶತ ಜನ ಕಸ ನಿರ್ವಹಣೆ ತಮ್ಮ ಸಮಸ್ಯೆಯೆಂದು ಸೂಚಿಸಿದ್ದು, 16 ಶೇಕಡಾವಾರಿನಷ್ಟು ಮಂದಿ ಸಂಚಾರ ಮತ್ತು 15 ಪ್ರತಿಶತ ಮಂದಿ ಸ್ವಚ್ಛ ಕುಡಿಯುವ ನೀರಿನ ಕೊರತೆಯನ್ನು ತಮ್ಮ ಮುಖ್ಯ ಸಮಸ್ಯೆಯನ್ನಾಗಿ ಎತ್ತಿಹಿಡಿದಿದ್ದಾರೆ
  • ಬೆಂಗಳೂರಿನ 89% ಮತದಾರರಿಗೆ ಪರಿಸರ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಇದ್ದು, ಕೇವಲ 25% ಮತದಾರರು ಕೌನ್ಸಿಲರ್‌ಗಳು ಪರಿಸರ ಸಮಸ್ಯೆಗಳಿಗೆ ಗಮನಾರ್ಹ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ಭಾವಿಸುತ್ತಾರೆ.

ಜನಾಗ್ರಹ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅಲವಿಲ್ಲಿ ಮಾತನಾಡಿ, “ಬೆಂಗಳೂರಿನ ಬಹುತೇಕ ಮತದಾರರು ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದಾರೆ. ಆದರೆ ವರದಿಯ ಪ್ರಕಾರ ಬಿಬಿಎಂಪಿ, ವಾರ್ಡ್ ಕಾರ್ಪೊರೇಟರ್‌ಗಳು, ವಾರ್ಡ್ ಸಮಿತಿಗಳು ಇತ್ಯಾದಿಗಳ ಪಾತ್ರವನ್ನು ಕೆಲವೇ ಕೆಲವರು ಮಾತ್ರ ಅರ್ಥೈಸಿಕೊಂಡಿದ್ದಾರೆ. ಅವರೆಲ್ಲರ ಪ್ರಕಾರ ಬೆಂಗಳೂರಿಗರನ್ನು ಕಾಡುವ ಸಮಸ್ಯೆಯ ಆಧಾರದ ಮೇಲೆ ಸ್ಥಳೀಯ ಚುನಾವಣೆಯನ್ನು ನಡೆಸಬೇಕು. ನಮ್ಮ ನಗರವನ್ನು ಅಭಿವೃದ್ಧಿಪಡಿಸಲು ನಮ್ಮ ಸ್ಥಳೀಯ ಆಡಳಿತಾಂಗವನ್ನು ಬಲಪಡಿಸಬೇಕಾಗಿದೆ. ಇದು ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಸಾಧ್ಯವಾಗುತ್ತದೆ. ನಮ್ಮ ನಗರಕ್ಕೆ ಸಧೃಡ ಭವಿಷ್ಯದ ಯೋಜನೆಯನ್ನು ಪ್ರಸ್ತುತಪಡಿಸಲು ಮತ್ತು ಅದರ ಆಧಾರದ ಮೇಲೆ ಮತಗಳನ್ನು ಕೇಳಲು ನಾವು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇವೆ. ಮಾಧ್ಯಮದವರು ರಾಜ್ಯ ಮತ್ತು ರಾಷ್ಟೀಯ ಮಟ್ಟದ ಚುನಾವಣೆಗೆ ನೀಡುವ ಪ್ರಾಮುಖ್ಯತೆಯನ್ನು ಬಿಬಿಎಂಪಿ ಚುನಾವಣೆಗೂ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ.” ಎಂದರು.

ಬೆಂಗಳೂರಿನ ಬಹುತೇಕ ನಾಗರಿಕರಿಗೆ ಮತ್ತು ಮತದಾರರಿಗೆ ವಾರ್ಡ್ ಮಟ್ಟದ ಆಡಳಿತಾಂಗದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರ ಪ್ರಕಾರ ಒಳ್ಳೆಯ ಪಾದಾಚಾರಿ ಮಾರ್ಗ, ಸ್ವಚ್ಛ ಪರಿಸರ, ಸಶಕ್ತ ಸಂಚಾರಿ ವ್ಯವಸ್ಥೆ, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆ ಬೇಕಾಗಿದೆ ಎನ್ನುತ್ತಾರೆ.

ಶ್ರೇಣೀಕೃತ ಯಾದೃಚ್ಛಿಕ ಮಾದರಿ ವಿಧಾನವನ್ನು ಬಳಸಿ ನಡೆಸಲಾದ ಈ ಸಮೀಕ್ಷೆಯಲ್ಲಿ, ಬೆಂಗಳೂರಿನ ಎಂಟು ವಲಯಗಳಲ್ಲಿ ಇರುವ 27 ವಾರ್ಡ್ ಗಳ 503 ನಾಗರಿಕರು ಭಾಗವಹಿಸಿದ್ದಾರೆ. 16ನೇ ಡಿಸೆಂಬರ್ 2021 ರಿಂದ 2ನೇ ಜನವರಿ 2022ರ ವರೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ವಿವಿಧ ವಯೋಮಿತಿ ಮತ್ತು ಆರ್ಥಿಕ ಹಾಗು ಸಾಮಾಜಿಕ ಹಿನ್ನಲೆಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಈ ಸಮೀಕ್ಷೆಯ ವರದಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...