Homeಮುಖಪುಟಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ ಎನ್ನುತ್ತದೆ ವರದಿ

- Advertisement -
- Advertisement -

ಬೆಂಗಳೂರಿನ ಮತದಾರರು ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳೆಂದು ಭಾವಿಸುತ್ತಾರೆ. ಆದರೆ ಈ ಸಮಸ್ಯೆಯ ಪರಿಹಾರಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇಕಡಾ 88ರಷ್ಟು ಮಂದಿಯು BBMP ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಶಾಸಕರ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ ಎಂದು ಜನಾಗ್ರಹ ನಗರ ರಾಜಕೀಯ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಜನಾಗ್ರಹ ಸೆಂಟರ್ ಫಾರ್ ಸಿಟಿಝನ್ ಶಿಪ್ ಆಂಡ್ ಡೆಮಾಕ್ರಸಿ ಸಂಸ್ಥೆಯು ಕೇಂದ್ರ ನಗರ ರಾಜಕೀಯ ಸಮೀಕ್ಷೆಯನ್ನು ನಡೆಸಿದೆ. ಇದರ ಭಾಗವಾಗಿ ಸ್ಥಳೀಯ ಆಡಳಿತ, ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು, ಮುಂಬರುವ ಬಿಬಿಎಂಪಿ ಚುನಾವಣೆಗಳಿಂದ ಮತದಾರರ ನಿರೀಕ್ಷೆ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ಜೂನ್ 21 ರಂದು ವರದಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಶೇಕಡಾ 83ರಷ್ಟು ಮತದಾರರ ಪ್ರಕಾರ ಬಿಬಿಎಂಪಿ ಚುನಾವಣೆಯು ನಗರವು ಎದುರಿಸುತ್ತಿರುವ ಸಮಸ್ಯೆಗಳ ಆಧಾರದ ಮೇಲೆ ನಡೆಯಬೇಕೆ ಹೊರತು ಬೇರೆ ವಿಷಯಗಳ ಮೇಲಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯ ಮುಖ್ಯಾಂಶಗಳು:

  • ಶೇಕಡಾ 17ರಷ್ಟು ನಾಗರಿಕರಿಗೆ ಮಾತ್ರ BBMP ಮಾಜಿ ಮೇಯರ್ ಹೆಸರು ತಿಳಿದಿದೆ. ಇದಕ್ಕೆ ಹೋಲಿಸಿದ್ದಲ್ಲಿ ಶೇಕಡಾ 97ರಷ್ಟು ಮಂದಿಗೆ ಪ್ರಧಾನ ಮಂತ್ರಿಯ ಹೆಸರು ತಿಳಿದಿದ್ದು, ಶೇಕಡಾ 83ರಷ್ಟು ಮಂದಿಗೆ ರಾಜ್ಯದ ಮುಖ್ಯಮಂತ್ರಿಯ ಹೆಸರು ತಿಳಿದಿದೆ.
  • ಶೇಕಡಾ 88ರಷ್ಟು ಮಂದಿಯು ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈ ವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಎಂಎಲ್ ಎ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ.
  • ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ
  • ಬೆಂಗಳೂರಿನ ಶೇಕಡಾ 87ರಷ್ಟು ಮತದಾರರ ಪ್ರಕಾರ BBMP ಪ್ರಬಲ ಕೌನ್ಸಿಲರ್ ಗಳಿಂದ ತಮ್ಮ ವಾರ್ಡ್‌ಗಳಿಗೆ ಉತ್ತಮ ಸೇವೆ ಒದಗಿಸಿ ಮೂಲಸೌಕರ್ಯದಲ್ಲಿ ಸುಧಾರಣೆಯನ್ನು ತರಲು ಸಾಧ್ಯ
  • ಬೆಂಗಳೂರಿನ ಶೇಕಡಾ 23ರಷ್ಟು ಮತದಾರರ ಸಮಸ್ಯೆಯು ಫುಟ್ಪಾತ್ ಗೆ ಸಂಬಂಧಿಸಿದ್ದು, 20 ಪ್ರತಿಶತ ಜನ ಕಸ ನಿರ್ವಹಣೆ ತಮ್ಮ ಸಮಸ್ಯೆಯೆಂದು ಸೂಚಿಸಿದ್ದು, 16 ಶೇಕಡಾವಾರಿನಷ್ಟು ಮಂದಿ ಸಂಚಾರ ಮತ್ತು 15 ಪ್ರತಿಶತ ಮಂದಿ ಸ್ವಚ್ಛ ಕುಡಿಯುವ ನೀರಿನ ಕೊರತೆಯನ್ನು ತಮ್ಮ ಮುಖ್ಯ ಸಮಸ್ಯೆಯನ್ನಾಗಿ ಎತ್ತಿಹಿಡಿದಿದ್ದಾರೆ
  • ಬೆಂಗಳೂರಿನ 89% ಮತದಾರರಿಗೆ ಪರಿಸರ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಇದ್ದು, ಕೇವಲ 25% ಮತದಾರರು ಕೌನ್ಸಿಲರ್‌ಗಳು ಪರಿಸರ ಸಮಸ್ಯೆಗಳಿಗೆ ಗಮನಾರ್ಹ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ಭಾವಿಸುತ್ತಾರೆ.

ಜನಾಗ್ರಹ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅಲವಿಲ್ಲಿ ಮಾತನಾಡಿ, “ಬೆಂಗಳೂರಿನ ಬಹುತೇಕ ಮತದಾರರು ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದಾರೆ. ಆದರೆ ವರದಿಯ ಪ್ರಕಾರ ಬಿಬಿಎಂಪಿ, ವಾರ್ಡ್ ಕಾರ್ಪೊರೇಟರ್‌ಗಳು, ವಾರ್ಡ್ ಸಮಿತಿಗಳು ಇತ್ಯಾದಿಗಳ ಪಾತ್ರವನ್ನು ಕೆಲವೇ ಕೆಲವರು ಮಾತ್ರ ಅರ್ಥೈಸಿಕೊಂಡಿದ್ದಾರೆ. ಅವರೆಲ್ಲರ ಪ್ರಕಾರ ಬೆಂಗಳೂರಿಗರನ್ನು ಕಾಡುವ ಸಮಸ್ಯೆಯ ಆಧಾರದ ಮೇಲೆ ಸ್ಥಳೀಯ ಚುನಾವಣೆಯನ್ನು ನಡೆಸಬೇಕು. ನಮ್ಮ ನಗರವನ್ನು ಅಭಿವೃದ್ಧಿಪಡಿಸಲು ನಮ್ಮ ಸ್ಥಳೀಯ ಆಡಳಿತಾಂಗವನ್ನು ಬಲಪಡಿಸಬೇಕಾಗಿದೆ. ಇದು ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಸಾಧ್ಯವಾಗುತ್ತದೆ. ನಮ್ಮ ನಗರಕ್ಕೆ ಸಧೃಡ ಭವಿಷ್ಯದ ಯೋಜನೆಯನ್ನು ಪ್ರಸ್ತುತಪಡಿಸಲು ಮತ್ತು ಅದರ ಆಧಾರದ ಮೇಲೆ ಮತಗಳನ್ನು ಕೇಳಲು ನಾವು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇವೆ. ಮಾಧ್ಯಮದವರು ರಾಜ್ಯ ಮತ್ತು ರಾಷ್ಟೀಯ ಮಟ್ಟದ ಚುನಾವಣೆಗೆ ನೀಡುವ ಪ್ರಾಮುಖ್ಯತೆಯನ್ನು ಬಿಬಿಎಂಪಿ ಚುನಾವಣೆಗೂ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ.” ಎಂದರು.

ಬೆಂಗಳೂರಿನ ಬಹುತೇಕ ನಾಗರಿಕರಿಗೆ ಮತ್ತು ಮತದಾರರಿಗೆ ವಾರ್ಡ್ ಮಟ್ಟದ ಆಡಳಿತಾಂಗದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರ ಪ್ರಕಾರ ಒಳ್ಳೆಯ ಪಾದಾಚಾರಿ ಮಾರ್ಗ, ಸ್ವಚ್ಛ ಪರಿಸರ, ಸಶಕ್ತ ಸಂಚಾರಿ ವ್ಯವಸ್ಥೆ, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆ ಬೇಕಾಗಿದೆ ಎನ್ನುತ್ತಾರೆ.

ಶ್ರೇಣೀಕೃತ ಯಾದೃಚ್ಛಿಕ ಮಾದರಿ ವಿಧಾನವನ್ನು ಬಳಸಿ ನಡೆಸಲಾದ ಈ ಸಮೀಕ್ಷೆಯಲ್ಲಿ, ಬೆಂಗಳೂರಿನ ಎಂಟು ವಲಯಗಳಲ್ಲಿ ಇರುವ 27 ವಾರ್ಡ್ ಗಳ 503 ನಾಗರಿಕರು ಭಾಗವಹಿಸಿದ್ದಾರೆ. 16ನೇ ಡಿಸೆಂಬರ್ 2021 ರಿಂದ 2ನೇ ಜನವರಿ 2022ರ ವರೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ವಿವಿಧ ವಯೋಮಿತಿ ಮತ್ತು ಆರ್ಥಿಕ ಹಾಗು ಸಾಮಾಜಿಕ ಹಿನ್ನಲೆಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಈ ಸಮೀಕ್ಷೆಯ ವರದಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...