Homeಮುಖಪುಟಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ ಎನ್ನುತ್ತದೆ ವರದಿ

- Advertisement -
- Advertisement -

ಬೆಂಗಳೂರಿನ ಮತದಾರರು ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳೆಂದು ಭಾವಿಸುತ್ತಾರೆ. ಆದರೆ ಈ ಸಮಸ್ಯೆಯ ಪರಿಹಾರಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇಕಡಾ 88ರಷ್ಟು ಮಂದಿಯು BBMP ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಶಾಸಕರ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ ಎಂದು ಜನಾಗ್ರಹ ನಗರ ರಾಜಕೀಯ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಜನಾಗ್ರಹ ಸೆಂಟರ್ ಫಾರ್ ಸಿಟಿಝನ್ ಶಿಪ್ ಆಂಡ್ ಡೆಮಾಕ್ರಸಿ ಸಂಸ್ಥೆಯು ಕೇಂದ್ರ ನಗರ ರಾಜಕೀಯ ಸಮೀಕ್ಷೆಯನ್ನು ನಡೆಸಿದೆ. ಇದರ ಭಾಗವಾಗಿ ಸ್ಥಳೀಯ ಆಡಳಿತ, ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು, ಮುಂಬರುವ ಬಿಬಿಎಂಪಿ ಚುನಾವಣೆಗಳಿಂದ ಮತದಾರರ ನಿರೀಕ್ಷೆ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ಜೂನ್ 21 ರಂದು ವರದಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಶೇಕಡಾ 83ರಷ್ಟು ಮತದಾರರ ಪ್ರಕಾರ ಬಿಬಿಎಂಪಿ ಚುನಾವಣೆಯು ನಗರವು ಎದುರಿಸುತ್ತಿರುವ ಸಮಸ್ಯೆಗಳ ಆಧಾರದ ಮೇಲೆ ನಡೆಯಬೇಕೆ ಹೊರತು ಬೇರೆ ವಿಷಯಗಳ ಮೇಲಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯ ಮುಖ್ಯಾಂಶಗಳು:

  • ಶೇಕಡಾ 17ರಷ್ಟು ನಾಗರಿಕರಿಗೆ ಮಾತ್ರ BBMP ಮಾಜಿ ಮೇಯರ್ ಹೆಸರು ತಿಳಿದಿದೆ. ಇದಕ್ಕೆ ಹೋಲಿಸಿದ್ದಲ್ಲಿ ಶೇಕಡಾ 97ರಷ್ಟು ಮಂದಿಗೆ ಪ್ರಧಾನ ಮಂತ್ರಿಯ ಹೆಸರು ತಿಳಿದಿದ್ದು, ಶೇಕಡಾ 83ರಷ್ಟು ಮಂದಿಗೆ ರಾಜ್ಯದ ಮುಖ್ಯಮಂತ್ರಿಯ ಹೆಸರು ತಿಳಿದಿದೆ.
  • ಶೇಕಡಾ 88ರಷ್ಟು ಮಂದಿಯು ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈ ವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಎಂಎಲ್ ಎ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ.
  • ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ
  • ಬೆಂಗಳೂರಿನ ಶೇಕಡಾ 87ರಷ್ಟು ಮತದಾರರ ಪ್ರಕಾರ BBMP ಪ್ರಬಲ ಕೌನ್ಸಿಲರ್ ಗಳಿಂದ ತಮ್ಮ ವಾರ್ಡ್‌ಗಳಿಗೆ ಉತ್ತಮ ಸೇವೆ ಒದಗಿಸಿ ಮೂಲಸೌಕರ್ಯದಲ್ಲಿ ಸುಧಾರಣೆಯನ್ನು ತರಲು ಸಾಧ್ಯ
  • ಬೆಂಗಳೂರಿನ ಶೇಕಡಾ 23ರಷ್ಟು ಮತದಾರರ ಸಮಸ್ಯೆಯು ಫುಟ್ಪಾತ್ ಗೆ ಸಂಬಂಧಿಸಿದ್ದು, 20 ಪ್ರತಿಶತ ಜನ ಕಸ ನಿರ್ವಹಣೆ ತಮ್ಮ ಸಮಸ್ಯೆಯೆಂದು ಸೂಚಿಸಿದ್ದು, 16 ಶೇಕಡಾವಾರಿನಷ್ಟು ಮಂದಿ ಸಂಚಾರ ಮತ್ತು 15 ಪ್ರತಿಶತ ಮಂದಿ ಸ್ವಚ್ಛ ಕುಡಿಯುವ ನೀರಿನ ಕೊರತೆಯನ್ನು ತಮ್ಮ ಮುಖ್ಯ ಸಮಸ್ಯೆಯನ್ನಾಗಿ ಎತ್ತಿಹಿಡಿದಿದ್ದಾರೆ
  • ಬೆಂಗಳೂರಿನ 89% ಮತದಾರರಿಗೆ ಪರಿಸರ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಇದ್ದು, ಕೇವಲ 25% ಮತದಾರರು ಕೌನ್ಸಿಲರ್‌ಗಳು ಪರಿಸರ ಸಮಸ್ಯೆಗಳಿಗೆ ಗಮನಾರ್ಹ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ಭಾವಿಸುತ್ತಾರೆ.

ಜನಾಗ್ರಹ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅಲವಿಲ್ಲಿ ಮಾತನಾಡಿ, “ಬೆಂಗಳೂರಿನ ಬಹುತೇಕ ಮತದಾರರು ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದಾರೆ. ಆದರೆ ವರದಿಯ ಪ್ರಕಾರ ಬಿಬಿಎಂಪಿ, ವಾರ್ಡ್ ಕಾರ್ಪೊರೇಟರ್‌ಗಳು, ವಾರ್ಡ್ ಸಮಿತಿಗಳು ಇತ್ಯಾದಿಗಳ ಪಾತ್ರವನ್ನು ಕೆಲವೇ ಕೆಲವರು ಮಾತ್ರ ಅರ್ಥೈಸಿಕೊಂಡಿದ್ದಾರೆ. ಅವರೆಲ್ಲರ ಪ್ರಕಾರ ಬೆಂಗಳೂರಿಗರನ್ನು ಕಾಡುವ ಸಮಸ್ಯೆಯ ಆಧಾರದ ಮೇಲೆ ಸ್ಥಳೀಯ ಚುನಾವಣೆಯನ್ನು ನಡೆಸಬೇಕು. ನಮ್ಮ ನಗರವನ್ನು ಅಭಿವೃದ್ಧಿಪಡಿಸಲು ನಮ್ಮ ಸ್ಥಳೀಯ ಆಡಳಿತಾಂಗವನ್ನು ಬಲಪಡಿಸಬೇಕಾಗಿದೆ. ಇದು ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಸಾಧ್ಯವಾಗುತ್ತದೆ. ನಮ್ಮ ನಗರಕ್ಕೆ ಸಧೃಡ ಭವಿಷ್ಯದ ಯೋಜನೆಯನ್ನು ಪ್ರಸ್ತುತಪಡಿಸಲು ಮತ್ತು ಅದರ ಆಧಾರದ ಮೇಲೆ ಮತಗಳನ್ನು ಕೇಳಲು ನಾವು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇವೆ. ಮಾಧ್ಯಮದವರು ರಾಜ್ಯ ಮತ್ತು ರಾಷ್ಟೀಯ ಮಟ್ಟದ ಚುನಾವಣೆಗೆ ನೀಡುವ ಪ್ರಾಮುಖ್ಯತೆಯನ್ನು ಬಿಬಿಎಂಪಿ ಚುನಾವಣೆಗೂ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ.” ಎಂದರು.

ಬೆಂಗಳೂರಿನ ಬಹುತೇಕ ನಾಗರಿಕರಿಗೆ ಮತ್ತು ಮತದಾರರಿಗೆ ವಾರ್ಡ್ ಮಟ್ಟದ ಆಡಳಿತಾಂಗದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರ ಪ್ರಕಾರ ಒಳ್ಳೆಯ ಪಾದಾಚಾರಿ ಮಾರ್ಗ, ಸ್ವಚ್ಛ ಪರಿಸರ, ಸಶಕ್ತ ಸಂಚಾರಿ ವ್ಯವಸ್ಥೆ, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆ ಬೇಕಾಗಿದೆ ಎನ್ನುತ್ತಾರೆ.

ಶ್ರೇಣೀಕೃತ ಯಾದೃಚ್ಛಿಕ ಮಾದರಿ ವಿಧಾನವನ್ನು ಬಳಸಿ ನಡೆಸಲಾದ ಈ ಸಮೀಕ್ಷೆಯಲ್ಲಿ, ಬೆಂಗಳೂರಿನ ಎಂಟು ವಲಯಗಳಲ್ಲಿ ಇರುವ 27 ವಾರ್ಡ್ ಗಳ 503 ನಾಗರಿಕರು ಭಾಗವಹಿಸಿದ್ದಾರೆ. 16ನೇ ಡಿಸೆಂಬರ್ 2021 ರಿಂದ 2ನೇ ಜನವರಿ 2022ರ ವರೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ವಿವಿಧ ವಯೋಮಿತಿ ಮತ್ತು ಆರ್ಥಿಕ ಹಾಗು ಸಾಮಾಜಿಕ ಹಿನ್ನಲೆಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಈ ಸಮೀಕ್ಷೆಯ ವರದಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...