Homeಮುಖಪುಟಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ ಎನ್ನುತ್ತದೆ ವರದಿ

- Advertisement -
- Advertisement -

ಬೆಂಗಳೂರಿನ ಮತದಾರರು ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳೆಂದು ಭಾವಿಸುತ್ತಾರೆ. ಆದರೆ ಈ ಸಮಸ್ಯೆಯ ಪರಿಹಾರಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇಕಡಾ 88ರಷ್ಟು ಮಂದಿಯು BBMP ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಶಾಸಕರ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ ಎಂದು ಜನಾಗ್ರಹ ನಗರ ರಾಜಕೀಯ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಜನಾಗ್ರಹ ಸೆಂಟರ್ ಫಾರ್ ಸಿಟಿಝನ್ ಶಿಪ್ ಆಂಡ್ ಡೆಮಾಕ್ರಸಿ ಸಂಸ್ಥೆಯು ಕೇಂದ್ರ ನಗರ ರಾಜಕೀಯ ಸಮೀಕ್ಷೆಯನ್ನು ನಡೆಸಿದೆ. ಇದರ ಭಾಗವಾಗಿ ಸ್ಥಳೀಯ ಆಡಳಿತ, ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು, ಮುಂಬರುವ ಬಿಬಿಎಂಪಿ ಚುನಾವಣೆಗಳಿಂದ ಮತದಾರರ ನಿರೀಕ್ಷೆ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ಜೂನ್ 21 ರಂದು ವರದಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಶೇಕಡಾ 83ರಷ್ಟು ಮತದಾರರ ಪ್ರಕಾರ ಬಿಬಿಎಂಪಿ ಚುನಾವಣೆಯು ನಗರವು ಎದುರಿಸುತ್ತಿರುವ ಸಮಸ್ಯೆಗಳ ಆಧಾರದ ಮೇಲೆ ನಡೆಯಬೇಕೆ ಹೊರತು ಬೇರೆ ವಿಷಯಗಳ ಮೇಲಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯ ಮುಖ್ಯಾಂಶಗಳು:

  • ಶೇಕಡಾ 17ರಷ್ಟು ನಾಗರಿಕರಿಗೆ ಮಾತ್ರ BBMP ಮಾಜಿ ಮೇಯರ್ ಹೆಸರು ತಿಳಿದಿದೆ. ಇದಕ್ಕೆ ಹೋಲಿಸಿದ್ದಲ್ಲಿ ಶೇಕಡಾ 97ರಷ್ಟು ಮಂದಿಗೆ ಪ್ರಧಾನ ಮಂತ್ರಿಯ ಹೆಸರು ತಿಳಿದಿದ್ದು, ಶೇಕಡಾ 83ರಷ್ಟು ಮಂದಿಗೆ ರಾಜ್ಯದ ಮುಖ್ಯಮಂತ್ರಿಯ ಹೆಸರು ತಿಳಿದಿದೆ.
  • ಶೇಕಡಾ 88ರಷ್ಟು ಮಂದಿಯು ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈ ವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಎಂಎಲ್ ಎ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ.
  • ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ
  • ಬೆಂಗಳೂರಿನ ಶೇಕಡಾ 87ರಷ್ಟು ಮತದಾರರ ಪ್ರಕಾರ BBMP ಪ್ರಬಲ ಕೌನ್ಸಿಲರ್ ಗಳಿಂದ ತಮ್ಮ ವಾರ್ಡ್‌ಗಳಿಗೆ ಉತ್ತಮ ಸೇವೆ ಒದಗಿಸಿ ಮೂಲಸೌಕರ್ಯದಲ್ಲಿ ಸುಧಾರಣೆಯನ್ನು ತರಲು ಸಾಧ್ಯ
  • ಬೆಂಗಳೂರಿನ ಶೇಕಡಾ 23ರಷ್ಟು ಮತದಾರರ ಸಮಸ್ಯೆಯು ಫುಟ್ಪಾತ್ ಗೆ ಸಂಬಂಧಿಸಿದ್ದು, 20 ಪ್ರತಿಶತ ಜನ ಕಸ ನಿರ್ವಹಣೆ ತಮ್ಮ ಸಮಸ್ಯೆಯೆಂದು ಸೂಚಿಸಿದ್ದು, 16 ಶೇಕಡಾವಾರಿನಷ್ಟು ಮಂದಿ ಸಂಚಾರ ಮತ್ತು 15 ಪ್ರತಿಶತ ಮಂದಿ ಸ್ವಚ್ಛ ಕುಡಿಯುವ ನೀರಿನ ಕೊರತೆಯನ್ನು ತಮ್ಮ ಮುಖ್ಯ ಸಮಸ್ಯೆಯನ್ನಾಗಿ ಎತ್ತಿಹಿಡಿದಿದ್ದಾರೆ
  • ಬೆಂಗಳೂರಿನ 89% ಮತದಾರರಿಗೆ ಪರಿಸರ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಇದ್ದು, ಕೇವಲ 25% ಮತದಾರರು ಕೌನ್ಸಿಲರ್‌ಗಳು ಪರಿಸರ ಸಮಸ್ಯೆಗಳಿಗೆ ಗಮನಾರ್ಹ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ಭಾವಿಸುತ್ತಾರೆ.

ಜನಾಗ್ರಹ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅಲವಿಲ್ಲಿ ಮಾತನಾಡಿ, “ಬೆಂಗಳೂರಿನ ಬಹುತೇಕ ಮತದಾರರು ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದಾರೆ. ಆದರೆ ವರದಿಯ ಪ್ರಕಾರ ಬಿಬಿಎಂಪಿ, ವಾರ್ಡ್ ಕಾರ್ಪೊರೇಟರ್‌ಗಳು, ವಾರ್ಡ್ ಸಮಿತಿಗಳು ಇತ್ಯಾದಿಗಳ ಪಾತ್ರವನ್ನು ಕೆಲವೇ ಕೆಲವರು ಮಾತ್ರ ಅರ್ಥೈಸಿಕೊಂಡಿದ್ದಾರೆ. ಅವರೆಲ್ಲರ ಪ್ರಕಾರ ಬೆಂಗಳೂರಿಗರನ್ನು ಕಾಡುವ ಸಮಸ್ಯೆಯ ಆಧಾರದ ಮೇಲೆ ಸ್ಥಳೀಯ ಚುನಾವಣೆಯನ್ನು ನಡೆಸಬೇಕು. ನಮ್ಮ ನಗರವನ್ನು ಅಭಿವೃದ್ಧಿಪಡಿಸಲು ನಮ್ಮ ಸ್ಥಳೀಯ ಆಡಳಿತಾಂಗವನ್ನು ಬಲಪಡಿಸಬೇಕಾಗಿದೆ. ಇದು ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಸಾಧ್ಯವಾಗುತ್ತದೆ. ನಮ್ಮ ನಗರಕ್ಕೆ ಸಧೃಡ ಭವಿಷ್ಯದ ಯೋಜನೆಯನ್ನು ಪ್ರಸ್ತುತಪಡಿಸಲು ಮತ್ತು ಅದರ ಆಧಾರದ ಮೇಲೆ ಮತಗಳನ್ನು ಕೇಳಲು ನಾವು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇವೆ. ಮಾಧ್ಯಮದವರು ರಾಜ್ಯ ಮತ್ತು ರಾಷ್ಟೀಯ ಮಟ್ಟದ ಚುನಾವಣೆಗೆ ನೀಡುವ ಪ್ರಾಮುಖ್ಯತೆಯನ್ನು ಬಿಬಿಎಂಪಿ ಚುನಾವಣೆಗೂ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ.” ಎಂದರು.

ಬೆಂಗಳೂರಿನ ಬಹುತೇಕ ನಾಗರಿಕರಿಗೆ ಮತ್ತು ಮತದಾರರಿಗೆ ವಾರ್ಡ್ ಮಟ್ಟದ ಆಡಳಿತಾಂಗದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರ ಪ್ರಕಾರ ಒಳ್ಳೆಯ ಪಾದಾಚಾರಿ ಮಾರ್ಗ, ಸ್ವಚ್ಛ ಪರಿಸರ, ಸಶಕ್ತ ಸಂಚಾರಿ ವ್ಯವಸ್ಥೆ, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆ ಬೇಕಾಗಿದೆ ಎನ್ನುತ್ತಾರೆ.

ಶ್ರೇಣೀಕೃತ ಯಾದೃಚ್ಛಿಕ ಮಾದರಿ ವಿಧಾನವನ್ನು ಬಳಸಿ ನಡೆಸಲಾದ ಈ ಸಮೀಕ್ಷೆಯಲ್ಲಿ, ಬೆಂಗಳೂರಿನ ಎಂಟು ವಲಯಗಳಲ್ಲಿ ಇರುವ 27 ವಾರ್ಡ್ ಗಳ 503 ನಾಗರಿಕರು ಭಾಗವಹಿಸಿದ್ದಾರೆ. 16ನೇ ಡಿಸೆಂಬರ್ 2021 ರಿಂದ 2ನೇ ಜನವರಿ 2022ರ ವರೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ವಿವಿಧ ವಯೋಮಿತಿ ಮತ್ತು ಆರ್ಥಿಕ ಹಾಗು ಸಾಮಾಜಿಕ ಹಿನ್ನಲೆಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಈ ಸಮೀಕ್ಷೆಯ ವರದಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...