Homeಮುಖಪುಟಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಬೆಂಗಳೂರಿನ ಮತದಾರರಿಗೆ ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳು: ಜನಾಗ್ರಹ ಸಮೀಕ್ಷೆ ವರದಿ

ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ ಎನ್ನುತ್ತದೆ ವರದಿ

- Advertisement -
- Advertisement -

ಬೆಂಗಳೂರಿನ ಮತದಾರರು ರಸ್ತೆಗಳು, ಟ್ರಾಫಿಕ್, ಮತ್ತು ನೀರು ಮುಖ್ಯ ಸಮಸ್ಯೆಗಳೆಂದು ಭಾವಿಸುತ್ತಾರೆ. ಆದರೆ ಈ ಸಮಸ್ಯೆಯ ಪರಿಹಾರಕ್ಕಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇಕಡಾ 88ರಷ್ಟು ಮಂದಿಯು BBMP ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಶಾಸಕರ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ ಎಂದು ಜನಾಗ್ರಹ ನಗರ ರಾಜಕೀಯ ಸಮೀಕ್ಷೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಸೆಪ್ಟಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಅದಕ್ಕೆ ಮುಂಚಿತವಾಗಿ ಜನಾಗ್ರಹ ಸೆಂಟರ್ ಫಾರ್ ಸಿಟಿಝನ್ ಶಿಪ್ ಆಂಡ್ ಡೆಮಾಕ್ರಸಿ ಸಂಸ್ಥೆಯು ಕೇಂದ್ರ ನಗರ ರಾಜಕೀಯ ಸಮೀಕ್ಷೆಯನ್ನು ನಡೆಸಿದೆ. ಇದರ ಭಾಗವಾಗಿ ಸ್ಥಳೀಯ ಆಡಳಿತ, ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು, ಮುಂಬರುವ ಬಿಬಿಎಂಪಿ ಚುನಾವಣೆಗಳಿಂದ ಮತದಾರರ ನಿರೀಕ್ಷೆ ಇತ್ಯಾದಿ ಪ್ರಶ್ನೆಗಳ ಆಧಾರದಲ್ಲಿ ಜೂನ್ 21 ರಂದು ವರದಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಶೇಕಡಾ 83ರಷ್ಟು ಮತದಾರರ ಪ್ರಕಾರ ಬಿಬಿಎಂಪಿ ಚುನಾವಣೆಯು ನಗರವು ಎದುರಿಸುತ್ತಿರುವ ಸಮಸ್ಯೆಗಳ ಆಧಾರದ ಮೇಲೆ ನಡೆಯಬೇಕೆ ಹೊರತು ಬೇರೆ ವಿಷಯಗಳ ಮೇಲಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷೆಯ ಮುಖ್ಯಾಂಶಗಳು:

  • ಶೇಕಡಾ 17ರಷ್ಟು ನಾಗರಿಕರಿಗೆ ಮಾತ್ರ BBMP ಮಾಜಿ ಮೇಯರ್ ಹೆಸರು ತಿಳಿದಿದೆ. ಇದಕ್ಕೆ ಹೋಲಿಸಿದ್ದಲ್ಲಿ ಶೇಕಡಾ 97ರಷ್ಟು ಮಂದಿಗೆ ಪ್ರಧಾನ ಮಂತ್ರಿಯ ಹೆಸರು ತಿಳಿದಿದ್ದು, ಶೇಕಡಾ 83ರಷ್ಟು ಮಂದಿಗೆ ರಾಜ್ಯದ ಮುಖ್ಯಮಂತ್ರಿಯ ಹೆಸರು ತಿಳಿದಿದೆ.
  • ಶೇಕಡಾ 88ರಷ್ಟು ಮಂದಿಯು ತಮ್ಮ ವಾರ್ಡ್ ಕೌನ್ಸಿಲರ್ ಗಳನ್ನು ಈ ವರೆಗೆ ಭೇಟಿಯಾಗಿಲ್ಲ. ಶೇಕಡಾ 87 ರಷ್ಟು ಜನರಿಗೆ ವಾರ್ಡ್ ಸಮಿತಿಗಳ ಬಗ್ಗೆ ತಿಳಿದಿಲ್ಲ. ಶೇಕಡಾ 95ರಷ್ಟು ಮಂದಿ ಎಂದೂ ವಾರ್ಡ್ ಸಮಿತಿ ಸಭೆಗೆ ಹೋಗಿಲ್ಲ. ಶೇಕಡಾ 22ರಷ್ಟು ಮಂದಿ ನೇರವಾಗಿ ಎಂಎಲ್ ಎ ಬಳಿ ತೆರಳಿ ತಮ್ಮ ತೊಂದರೆಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಹೋಲಿಸಿದ್ದಲ್ಲಿ ಕೇವಲ 12% ಜನ ಮಾತ್ರ ತಮ್ಮ ಸ್ಥಳೀಯ ಕೌನ್ಸಿಲರ್ ಗಳನ್ನು ಭೇಟಿಯಾಗಿದ್ದಾರೆ.
  • ಶೇಕಡಾ 94ರಷ್ಟು ಜನರಿಗೆ 2021-22 ಆರ್ಥಿಕ ಸಾಲಿನಲ್ಲಿ ಬಿಬಿಎಂಪಿ ವಾರ್ಡ್ ಗಳಿಗೆ ನೀಡಿದ 60 ಲಕ್ಷ ರೂಪಾಯಿಗಳ ಬಗ್ಗೆ ತಿಳಿದಿಲ್ಲ
  • ಬೆಂಗಳೂರಿನ ಶೇಕಡಾ 87ರಷ್ಟು ಮತದಾರರ ಪ್ರಕಾರ BBMP ಪ್ರಬಲ ಕೌನ್ಸಿಲರ್ ಗಳಿಂದ ತಮ್ಮ ವಾರ್ಡ್‌ಗಳಿಗೆ ಉತ್ತಮ ಸೇವೆ ಒದಗಿಸಿ ಮೂಲಸೌಕರ್ಯದಲ್ಲಿ ಸುಧಾರಣೆಯನ್ನು ತರಲು ಸಾಧ್ಯ
  • ಬೆಂಗಳೂರಿನ ಶೇಕಡಾ 23ರಷ್ಟು ಮತದಾರರ ಸಮಸ್ಯೆಯು ಫುಟ್ಪಾತ್ ಗೆ ಸಂಬಂಧಿಸಿದ್ದು, 20 ಪ್ರತಿಶತ ಜನ ಕಸ ನಿರ್ವಹಣೆ ತಮ್ಮ ಸಮಸ್ಯೆಯೆಂದು ಸೂಚಿಸಿದ್ದು, 16 ಶೇಕಡಾವಾರಿನಷ್ಟು ಮಂದಿ ಸಂಚಾರ ಮತ್ತು 15 ಪ್ರತಿಶತ ಮಂದಿ ಸ್ವಚ್ಛ ಕುಡಿಯುವ ನೀರಿನ ಕೊರತೆಯನ್ನು ತಮ್ಮ ಮುಖ್ಯ ಸಮಸ್ಯೆಯನ್ನಾಗಿ ಎತ್ತಿಹಿಡಿದಿದ್ದಾರೆ
  • ಬೆಂಗಳೂರಿನ 89% ಮತದಾರರಿಗೆ ಪರಿಸರ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಇದ್ದು, ಕೇವಲ 25% ಮತದಾರರು ಕೌನ್ಸಿಲರ್‌ಗಳು ಪರಿಸರ ಸಮಸ್ಯೆಗಳಿಗೆ ಗಮನಾರ್ಹ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ಭಾವಿಸುತ್ತಾರೆ.

ಜನಾಗ್ರಹ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ಅಲವಿಲ್ಲಿ ಮಾತನಾಡಿ, “ಬೆಂಗಳೂರಿನ ಬಹುತೇಕ ಮತದಾರರು ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದಾರೆ. ಆದರೆ ವರದಿಯ ಪ್ರಕಾರ ಬಿಬಿಎಂಪಿ, ವಾರ್ಡ್ ಕಾರ್ಪೊರೇಟರ್‌ಗಳು, ವಾರ್ಡ್ ಸಮಿತಿಗಳು ಇತ್ಯಾದಿಗಳ ಪಾತ್ರವನ್ನು ಕೆಲವೇ ಕೆಲವರು ಮಾತ್ರ ಅರ್ಥೈಸಿಕೊಂಡಿದ್ದಾರೆ. ಅವರೆಲ್ಲರ ಪ್ರಕಾರ ಬೆಂಗಳೂರಿಗರನ್ನು ಕಾಡುವ ಸಮಸ್ಯೆಯ ಆಧಾರದ ಮೇಲೆ ಸ್ಥಳೀಯ ಚುನಾವಣೆಯನ್ನು ನಡೆಸಬೇಕು. ನಮ್ಮ ನಗರವನ್ನು ಅಭಿವೃದ್ಧಿಪಡಿಸಲು ನಮ್ಮ ಸ್ಥಳೀಯ ಆಡಳಿತಾಂಗವನ್ನು ಬಲಪಡಿಸಬೇಕಾಗಿದೆ. ಇದು ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಸಾಧ್ಯವಾಗುತ್ತದೆ. ನಮ್ಮ ನಗರಕ್ಕೆ ಸಧೃಡ ಭವಿಷ್ಯದ ಯೋಜನೆಯನ್ನು ಪ್ರಸ್ತುತಪಡಿಸಲು ಮತ್ತು ಅದರ ಆಧಾರದ ಮೇಲೆ ಮತಗಳನ್ನು ಕೇಳಲು ನಾವು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇವೆ. ಮಾಧ್ಯಮದವರು ರಾಜ್ಯ ಮತ್ತು ರಾಷ್ಟೀಯ ಮಟ್ಟದ ಚುನಾವಣೆಗೆ ನೀಡುವ ಪ್ರಾಮುಖ್ಯತೆಯನ್ನು ಬಿಬಿಎಂಪಿ ಚುನಾವಣೆಗೂ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ.” ಎಂದರು.

ಬೆಂಗಳೂರಿನ ಬಹುತೇಕ ನಾಗರಿಕರಿಗೆ ಮತ್ತು ಮತದಾರರಿಗೆ ವಾರ್ಡ್ ಮಟ್ಟದ ಆಡಳಿತಾಂಗದ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರ ಪ್ರಕಾರ ಒಳ್ಳೆಯ ಪಾದಾಚಾರಿ ಮಾರ್ಗ, ಸ್ವಚ್ಛ ಪರಿಸರ, ಸಶಕ್ತ ಸಂಚಾರಿ ವ್ಯವಸ್ಥೆ, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆ ಬೇಕಾಗಿದೆ ಎನ್ನುತ್ತಾರೆ.

ಶ್ರೇಣೀಕೃತ ಯಾದೃಚ್ಛಿಕ ಮಾದರಿ ವಿಧಾನವನ್ನು ಬಳಸಿ ನಡೆಸಲಾದ ಈ ಸಮೀಕ್ಷೆಯಲ್ಲಿ, ಬೆಂಗಳೂರಿನ ಎಂಟು ವಲಯಗಳಲ್ಲಿ ಇರುವ 27 ವಾರ್ಡ್ ಗಳ 503 ನಾಗರಿಕರು ಭಾಗವಹಿಸಿದ್ದಾರೆ. 16ನೇ ಡಿಸೆಂಬರ್ 2021 ರಿಂದ 2ನೇ ಜನವರಿ 2022ರ ವರೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ವಿವಿಧ ವಯೋಮಿತಿ ಮತ್ತು ಆರ್ಥಿಕ ಹಾಗು ಸಾಮಾಜಿಕ ಹಿನ್ನಲೆಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದಾರೆ.

ಈ ಸಮೀಕ್ಷೆಯ ವರದಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....