Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...