Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...