Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...