Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...