Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...