Homeಮುಖಪುಟಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

- Advertisement -
- Advertisement -

2023ರ ಜನಾದೇಶ ಪ್ರಕಟಗೊಂಡಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಆಡಳಿತರೂಢ ಬಿಜೆಪಿ ನೆಲಕಚ್ಚಿದೆ. ಭಾರೀ ಬಹುಮತದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷ 9 ಜಿಲ್ಲೆಗಳಲ್ಲಿ ಒಂದೂ ಸ್ಥಾನ ಪಡೆಯಲು ವಿಫಲವಾಗಿದೆ. ಅಂತಹ ಜಿಲ್ಲೆಗಳ ಮಾಹಿತಿ ಇಲ್ಲಿದೆ.

ಕೊಡಗು

ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಡಗು ಜಿಲ್ಲೆಯ ಬಿಜೆಪಿಯ ಭದ್ರನೆಲೆಯಾಗಿತ್ತು. ಸತತವಾಗಿ ಗೆಲ್ಲುತ್ತಿದ್ದ ಬಿಜೆಪಿ ಬ್ರೇಕ್ ಹಾಕಿದ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಚಾಮರಾಜನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳಿರುವ ಚಾಮರಾಜನಗರದಲ್ಲಿ ಬಿಜೆಪಿ ಗೆಲುವು ಕಂಡಿತ್ತು. ಆದರೆ ಈ ಬಾರಿ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಸಹ ಬಿಜೆಪಿಗೆ ಗೆಲ್ಲಲಾಗಲಿಲ್ಲ. ಮೂರು ಕಡೆ ಕಾಂಗ್ರೆಸ್ ಮತ್ತು ಒಂದು ಕಡೆ ಜೆಡಿಎಸ್ ವಿಜಯ ಪತಾಕೆ ಹಾರಿಸಿವೆ.

ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ 2019ರಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಎಸ್‌ನ ನಾರಾಯಣಗೌಡರನ್ನು ಬಿಜೆಪಿ ಸೆಳೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲಾಗಿತ್ತು. ಆದರೆ ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡರು. ಅಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ ಮಂಜು ಜಯ ಗಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 5 ಕಡೆ ಕಾಂಗ್ರೆಸ್, ಒಂದು ಕಡೆ ಸರ್ವೋದಯ ಕರ್ನಾಟಕ ಮತ್ತು ಒಂದು ಕಡೆ ಜೆಡಿಎಸ್ ಗೆದ್ದಿದೆ. ಬಿಜೆಪಿ ಶೂನ್ಯ ಸಾಧನೆ ಮಾಡಿದೆ.

ರಾಮನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳ ರಾಮನಗರದಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿಯ ಪ್ರಬಲ ಸ್ಪರ್ಧೆ ಇತ್ತು. ಅಲ್ಲಿಯೂ ಸಿ.ಪಿ ಯೋಗೀಶ್ವರ್ ಎಚ್‌ಡಿಕೆ ಎದುರು ಸೋತರು. ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಕೋಲಾರ

ಆರು ವಿಧಾನಸಭಾ ಕ್ಷೇತ್ರಗಳ ಕೋಲಾರದಲ್ಲಿ ಎರಡು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ನಾಲ್ಕು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಿಕ್ಕಬಳ್ಳಾಪುರ

ಆರೋಗ್ಯ ಸಚಿವರಾಗಿದ್ದ ಡಾ.ಕೆ ಸುಧಾಕರ್ ಸೋಲಿನೊಂದಿಗೆ ಜಿಲ್ಲೆಯಲ್ಲಿ ಇದ್ದ ಏಕೈಕ ಬಿಜೆಪಿ ಖಾತೆ ಕ್ಲೋಸ್ ಆಗಿದೆ. ಐದು ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕಮಗಳೂರು

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಛಿದ್ರವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಿ.ಟಿ ರವಿ ಸೋಲುಂಡಿದ್ದಾರೆ.

ಬಳ್ಳಾರಿ

ಹಳೆಯ ಕಾಂಗ್ರೆಸ್ ನೆಲೆ ಬಳ್ಳಾರಿ ಮತ್ತೆ ಕೈ ವಶವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ಬಿಜೆಪಿಯ ಬಿ.ಶ್ರೀರಾಮುಲು ಸೋಲುಂಡಿದ್ದಾರೆ.

ಯಾದಗಿರಿ

ನಾಲ್ಕು ವಿಧಾನಸಭಾ ಕ್ಷೇತ್ರಗಳ ಯಾದಗಿರಿಯಲ್ಲಿ ಒಂದು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...