Homeಮುಖಪುಟಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

- Advertisement -
- Advertisement -

2023ರ ಜನಾದೇಶ ಪ್ರಕಟಗೊಂಡಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಆಡಳಿತರೂಢ ಬಿಜೆಪಿ ನೆಲಕಚ್ಚಿದೆ. ಭಾರೀ ಬಹುಮತದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷ 9 ಜಿಲ್ಲೆಗಳಲ್ಲಿ ಒಂದೂ ಸ್ಥಾನ ಪಡೆಯಲು ವಿಫಲವಾಗಿದೆ. ಅಂತಹ ಜಿಲ್ಲೆಗಳ ಮಾಹಿತಿ ಇಲ್ಲಿದೆ.

ಕೊಡಗು

ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಡಗು ಜಿಲ್ಲೆಯ ಬಿಜೆಪಿಯ ಭದ್ರನೆಲೆಯಾಗಿತ್ತು. ಸತತವಾಗಿ ಗೆಲ್ಲುತ್ತಿದ್ದ ಬಿಜೆಪಿ ಬ್ರೇಕ್ ಹಾಕಿದ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಚಾಮರಾಜನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳಿರುವ ಚಾಮರಾಜನಗರದಲ್ಲಿ ಬಿಜೆಪಿ ಗೆಲುವು ಕಂಡಿತ್ತು. ಆದರೆ ಈ ಬಾರಿ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಸಹ ಬಿಜೆಪಿಗೆ ಗೆಲ್ಲಲಾಗಲಿಲ್ಲ. ಮೂರು ಕಡೆ ಕಾಂಗ್ರೆಸ್ ಮತ್ತು ಒಂದು ಕಡೆ ಜೆಡಿಎಸ್ ವಿಜಯ ಪತಾಕೆ ಹಾರಿಸಿವೆ.

ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ 2019ರಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಎಸ್‌ನ ನಾರಾಯಣಗೌಡರನ್ನು ಬಿಜೆಪಿ ಸೆಳೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲಾಗಿತ್ತು. ಆದರೆ ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡರು. ಅಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ ಮಂಜು ಜಯ ಗಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 5 ಕಡೆ ಕಾಂಗ್ರೆಸ್, ಒಂದು ಕಡೆ ಸರ್ವೋದಯ ಕರ್ನಾಟಕ ಮತ್ತು ಒಂದು ಕಡೆ ಜೆಡಿಎಸ್ ಗೆದ್ದಿದೆ. ಬಿಜೆಪಿ ಶೂನ್ಯ ಸಾಧನೆ ಮಾಡಿದೆ.

ರಾಮನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳ ರಾಮನಗರದಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿಯ ಪ್ರಬಲ ಸ್ಪರ್ಧೆ ಇತ್ತು. ಅಲ್ಲಿಯೂ ಸಿ.ಪಿ ಯೋಗೀಶ್ವರ್ ಎಚ್‌ಡಿಕೆ ಎದುರು ಸೋತರು. ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಕೋಲಾರ

ಆರು ವಿಧಾನಸಭಾ ಕ್ಷೇತ್ರಗಳ ಕೋಲಾರದಲ್ಲಿ ಎರಡು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ನಾಲ್ಕು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಿಕ್ಕಬಳ್ಳಾಪುರ

ಆರೋಗ್ಯ ಸಚಿವರಾಗಿದ್ದ ಡಾ.ಕೆ ಸುಧಾಕರ್ ಸೋಲಿನೊಂದಿಗೆ ಜಿಲ್ಲೆಯಲ್ಲಿ ಇದ್ದ ಏಕೈಕ ಬಿಜೆಪಿ ಖಾತೆ ಕ್ಲೋಸ್ ಆಗಿದೆ. ಐದು ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕಮಗಳೂರು

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಛಿದ್ರವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಿ.ಟಿ ರವಿ ಸೋಲುಂಡಿದ್ದಾರೆ.

ಬಳ್ಳಾರಿ

ಹಳೆಯ ಕಾಂಗ್ರೆಸ್ ನೆಲೆ ಬಳ್ಳಾರಿ ಮತ್ತೆ ಕೈ ವಶವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ಬಿಜೆಪಿಯ ಬಿ.ಶ್ರೀರಾಮುಲು ಸೋಲುಂಡಿದ್ದಾರೆ.

ಯಾದಗಿರಿ

ನಾಲ್ಕು ವಿಧಾನಸಭಾ ಕ್ಷೇತ್ರಗಳ ಯಾದಗಿರಿಯಲ್ಲಿ ಒಂದು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....