Homeಮುಖಪುಟಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

- Advertisement -
- Advertisement -

2023ರ ಜನಾದೇಶ ಪ್ರಕಟಗೊಂಡಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಆಡಳಿತರೂಢ ಬಿಜೆಪಿ ನೆಲಕಚ್ಚಿದೆ. ಭಾರೀ ಬಹುಮತದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷ 9 ಜಿಲ್ಲೆಗಳಲ್ಲಿ ಒಂದೂ ಸ್ಥಾನ ಪಡೆಯಲು ವಿಫಲವಾಗಿದೆ. ಅಂತಹ ಜಿಲ್ಲೆಗಳ ಮಾಹಿತಿ ಇಲ್ಲಿದೆ.

ಕೊಡಗು

ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಡಗು ಜಿಲ್ಲೆಯ ಬಿಜೆಪಿಯ ಭದ್ರನೆಲೆಯಾಗಿತ್ತು. ಸತತವಾಗಿ ಗೆಲ್ಲುತ್ತಿದ್ದ ಬಿಜೆಪಿ ಬ್ರೇಕ್ ಹಾಕಿದ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಚಾಮರಾಜನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳಿರುವ ಚಾಮರಾಜನಗರದಲ್ಲಿ ಬಿಜೆಪಿ ಗೆಲುವು ಕಂಡಿತ್ತು. ಆದರೆ ಈ ಬಾರಿ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಸಹ ಬಿಜೆಪಿಗೆ ಗೆಲ್ಲಲಾಗಲಿಲ್ಲ. ಮೂರು ಕಡೆ ಕಾಂಗ್ರೆಸ್ ಮತ್ತು ಒಂದು ಕಡೆ ಜೆಡಿಎಸ್ ವಿಜಯ ಪತಾಕೆ ಹಾರಿಸಿವೆ.

ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ 2019ರಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಎಸ್‌ನ ನಾರಾಯಣಗೌಡರನ್ನು ಬಿಜೆಪಿ ಸೆಳೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲಾಗಿತ್ತು. ಆದರೆ ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡರು. ಅಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ ಮಂಜು ಜಯ ಗಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 5 ಕಡೆ ಕಾಂಗ್ರೆಸ್, ಒಂದು ಕಡೆ ಸರ್ವೋದಯ ಕರ್ನಾಟಕ ಮತ್ತು ಒಂದು ಕಡೆ ಜೆಡಿಎಸ್ ಗೆದ್ದಿದೆ. ಬಿಜೆಪಿ ಶೂನ್ಯ ಸಾಧನೆ ಮಾಡಿದೆ.

ರಾಮನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳ ರಾಮನಗರದಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿಯ ಪ್ರಬಲ ಸ್ಪರ್ಧೆ ಇತ್ತು. ಅಲ್ಲಿಯೂ ಸಿ.ಪಿ ಯೋಗೀಶ್ವರ್ ಎಚ್‌ಡಿಕೆ ಎದುರು ಸೋತರು. ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಕೋಲಾರ

ಆರು ವಿಧಾನಸಭಾ ಕ್ಷೇತ್ರಗಳ ಕೋಲಾರದಲ್ಲಿ ಎರಡು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ನಾಲ್ಕು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಿಕ್ಕಬಳ್ಳಾಪುರ

ಆರೋಗ್ಯ ಸಚಿವರಾಗಿದ್ದ ಡಾ.ಕೆ ಸುಧಾಕರ್ ಸೋಲಿನೊಂದಿಗೆ ಜಿಲ್ಲೆಯಲ್ಲಿ ಇದ್ದ ಏಕೈಕ ಬಿಜೆಪಿ ಖಾತೆ ಕ್ಲೋಸ್ ಆಗಿದೆ. ಐದು ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕಮಗಳೂರು

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಛಿದ್ರವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಿ.ಟಿ ರವಿ ಸೋಲುಂಡಿದ್ದಾರೆ.

ಬಳ್ಳಾರಿ

ಹಳೆಯ ಕಾಂಗ್ರೆಸ್ ನೆಲೆ ಬಳ್ಳಾರಿ ಮತ್ತೆ ಕೈ ವಶವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ಬಿಜೆಪಿಯ ಬಿ.ಶ್ರೀರಾಮುಲು ಸೋಲುಂಡಿದ್ದಾರೆ.

ಯಾದಗಿರಿ

ನಾಲ್ಕು ವಿಧಾನಸಭಾ ಕ್ಷೇತ್ರಗಳ ಯಾದಗಿರಿಯಲ್ಲಿ ಒಂದು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...