Homeಮುಖಪುಟಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

- Advertisement -
- Advertisement -

2023ರ ಜನಾದೇಶ ಪ್ರಕಟಗೊಂಡಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಆಡಳಿತರೂಢ ಬಿಜೆಪಿ ನೆಲಕಚ್ಚಿದೆ. ಭಾರೀ ಬಹುಮತದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷ 9 ಜಿಲ್ಲೆಗಳಲ್ಲಿ ಒಂದೂ ಸ್ಥಾನ ಪಡೆಯಲು ವಿಫಲವಾಗಿದೆ. ಅಂತಹ ಜಿಲ್ಲೆಗಳ ಮಾಹಿತಿ ಇಲ್ಲಿದೆ.

ಕೊಡಗು

ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಡಗು ಜಿಲ್ಲೆಯ ಬಿಜೆಪಿಯ ಭದ್ರನೆಲೆಯಾಗಿತ್ತು. ಸತತವಾಗಿ ಗೆಲ್ಲುತ್ತಿದ್ದ ಬಿಜೆಪಿ ಬ್ರೇಕ್ ಹಾಕಿದ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಚಾಮರಾಜನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳಿರುವ ಚಾಮರಾಜನಗರದಲ್ಲಿ ಬಿಜೆಪಿ ಗೆಲುವು ಕಂಡಿತ್ತು. ಆದರೆ ಈ ಬಾರಿ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಸಹ ಬಿಜೆಪಿಗೆ ಗೆಲ್ಲಲಾಗಲಿಲ್ಲ. ಮೂರು ಕಡೆ ಕಾಂಗ್ರೆಸ್ ಮತ್ತು ಒಂದು ಕಡೆ ಜೆಡಿಎಸ್ ವಿಜಯ ಪತಾಕೆ ಹಾರಿಸಿವೆ.

ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ 2019ರಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಎಸ್‌ನ ನಾರಾಯಣಗೌಡರನ್ನು ಬಿಜೆಪಿ ಸೆಳೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲಾಗಿತ್ತು. ಆದರೆ ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡರು. ಅಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ ಮಂಜು ಜಯ ಗಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 5 ಕಡೆ ಕಾಂಗ್ರೆಸ್, ಒಂದು ಕಡೆ ಸರ್ವೋದಯ ಕರ್ನಾಟಕ ಮತ್ತು ಒಂದು ಕಡೆ ಜೆಡಿಎಸ್ ಗೆದ್ದಿದೆ. ಬಿಜೆಪಿ ಶೂನ್ಯ ಸಾಧನೆ ಮಾಡಿದೆ.

ರಾಮನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳ ರಾಮನಗರದಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿಯ ಪ್ರಬಲ ಸ್ಪರ್ಧೆ ಇತ್ತು. ಅಲ್ಲಿಯೂ ಸಿ.ಪಿ ಯೋಗೀಶ್ವರ್ ಎಚ್‌ಡಿಕೆ ಎದುರು ಸೋತರು. ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಕೋಲಾರ

ಆರು ವಿಧಾನಸಭಾ ಕ್ಷೇತ್ರಗಳ ಕೋಲಾರದಲ್ಲಿ ಎರಡು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ನಾಲ್ಕು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಿಕ್ಕಬಳ್ಳಾಪುರ

ಆರೋಗ್ಯ ಸಚಿವರಾಗಿದ್ದ ಡಾ.ಕೆ ಸುಧಾಕರ್ ಸೋಲಿನೊಂದಿಗೆ ಜಿಲ್ಲೆಯಲ್ಲಿ ಇದ್ದ ಏಕೈಕ ಬಿಜೆಪಿ ಖಾತೆ ಕ್ಲೋಸ್ ಆಗಿದೆ. ಐದು ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕಮಗಳೂರು

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಛಿದ್ರವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಿ.ಟಿ ರವಿ ಸೋಲುಂಡಿದ್ದಾರೆ.

ಬಳ್ಳಾರಿ

ಹಳೆಯ ಕಾಂಗ್ರೆಸ್ ನೆಲೆ ಬಳ್ಳಾರಿ ಮತ್ತೆ ಕೈ ವಶವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ಬಿಜೆಪಿಯ ಬಿ.ಶ್ರೀರಾಮುಲು ಸೋಲುಂಡಿದ್ದಾರೆ.

ಯಾದಗಿರಿ

ನಾಲ್ಕು ವಿಧಾನಸಭಾ ಕ್ಷೇತ್ರಗಳ ಯಾದಗಿರಿಯಲ್ಲಿ ಒಂದು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...