Homeಮುಖಪುಟಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

- Advertisement -
- Advertisement -

2023ರ ಜನಾದೇಶ ಪ್ರಕಟಗೊಂಡಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಆಡಳಿತರೂಢ ಬಿಜೆಪಿ ನೆಲಕಚ್ಚಿದೆ. ಭಾರೀ ಬಹುಮತದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷ 9 ಜಿಲ್ಲೆಗಳಲ್ಲಿ ಒಂದೂ ಸ್ಥಾನ ಪಡೆಯಲು ವಿಫಲವಾಗಿದೆ. ಅಂತಹ ಜಿಲ್ಲೆಗಳ ಮಾಹಿತಿ ಇಲ್ಲಿದೆ.

ಕೊಡಗು

ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಡಗು ಜಿಲ್ಲೆಯ ಬಿಜೆಪಿಯ ಭದ್ರನೆಲೆಯಾಗಿತ್ತು. ಸತತವಾಗಿ ಗೆಲ್ಲುತ್ತಿದ್ದ ಬಿಜೆಪಿ ಬ್ರೇಕ್ ಹಾಕಿದ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಚಾಮರಾಜನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳಿರುವ ಚಾಮರಾಜನಗರದಲ್ಲಿ ಬಿಜೆಪಿ ಗೆಲುವು ಕಂಡಿತ್ತು. ಆದರೆ ಈ ಬಾರಿ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಸಹ ಬಿಜೆಪಿಗೆ ಗೆಲ್ಲಲಾಗಲಿಲ್ಲ. ಮೂರು ಕಡೆ ಕಾಂಗ್ರೆಸ್ ಮತ್ತು ಒಂದು ಕಡೆ ಜೆಡಿಎಸ್ ವಿಜಯ ಪತಾಕೆ ಹಾರಿಸಿವೆ.

ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ 2019ರಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಎಸ್‌ನ ನಾರಾಯಣಗೌಡರನ್ನು ಬಿಜೆಪಿ ಸೆಳೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲಾಗಿತ್ತು. ಆದರೆ ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡರು. ಅಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ ಮಂಜು ಜಯ ಗಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 5 ಕಡೆ ಕಾಂಗ್ರೆಸ್, ಒಂದು ಕಡೆ ಸರ್ವೋದಯ ಕರ್ನಾಟಕ ಮತ್ತು ಒಂದು ಕಡೆ ಜೆಡಿಎಸ್ ಗೆದ್ದಿದೆ. ಬಿಜೆಪಿ ಶೂನ್ಯ ಸಾಧನೆ ಮಾಡಿದೆ.

ರಾಮನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳ ರಾಮನಗರದಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿಯ ಪ್ರಬಲ ಸ್ಪರ್ಧೆ ಇತ್ತು. ಅಲ್ಲಿಯೂ ಸಿ.ಪಿ ಯೋಗೀಶ್ವರ್ ಎಚ್‌ಡಿಕೆ ಎದುರು ಸೋತರು. ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಕೋಲಾರ

ಆರು ವಿಧಾನಸಭಾ ಕ್ಷೇತ್ರಗಳ ಕೋಲಾರದಲ್ಲಿ ಎರಡು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ನಾಲ್ಕು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಿಕ್ಕಬಳ್ಳಾಪುರ

ಆರೋಗ್ಯ ಸಚಿವರಾಗಿದ್ದ ಡಾ.ಕೆ ಸುಧಾಕರ್ ಸೋಲಿನೊಂದಿಗೆ ಜಿಲ್ಲೆಯಲ್ಲಿ ಇದ್ದ ಏಕೈಕ ಬಿಜೆಪಿ ಖಾತೆ ಕ್ಲೋಸ್ ಆಗಿದೆ. ಐದು ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕಮಗಳೂರು

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಛಿದ್ರವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಿ.ಟಿ ರವಿ ಸೋಲುಂಡಿದ್ದಾರೆ.

ಬಳ್ಳಾರಿ

ಹಳೆಯ ಕಾಂಗ್ರೆಸ್ ನೆಲೆ ಬಳ್ಳಾರಿ ಮತ್ತೆ ಕೈ ವಶವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ಬಿಜೆಪಿಯ ಬಿ.ಶ್ರೀರಾಮುಲು ಸೋಲುಂಡಿದ್ದಾರೆ.

ಯಾದಗಿರಿ

ನಾಲ್ಕು ವಿಧಾನಸಭಾ ಕ್ಷೇತ್ರಗಳ ಯಾದಗಿರಿಯಲ್ಲಿ ಒಂದು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...