Homeಮುಖಪುಟಜಾರ್ಖಂಡ್‌ನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು; ಸ್ವಪಕ್ಷದ ಶಾಸಕರನ್ನು ಸಂಪುಟದಿಂದ ಕೈಬಿಡುವಂತೆ ಪಟ್ಟು ಹಿಡಿದ ಕಾಂಗ್ರೆಸ್‌ ಶಾಸಕರು

ಜಾರ್ಖಂಡ್‌ನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು; ಸ್ವಪಕ್ಷದ ಶಾಸಕರನ್ನು ಸಂಪುಟದಿಂದ ಕೈಬಿಡುವಂತೆ ಪಟ್ಟು ಹಿಡಿದ ಕಾಂಗ್ರೆಸ್‌ ಶಾಸಕರು

- Advertisement -
- Advertisement -

ಜಾರ್ಖಂಡ್‌ನಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರಿದಿದ್ದು, ಚಂಪೈ ಸೊರೆನ್ ಸರ್ಕಾರದಲ್ಲಿ ಈಗಿರುವ ಪಕ್ಷದ ಕೋಟಾದಿಂದ ಸಚಿವರಾಗಿರುವ 7 ಮಂದಿ ಸಚಿವರನ್ನು ತಕ್ಷಣ ತೆಗೆದು ಹಾಕಿ ಹೊಸಬರಿಗೆ ನೇಮಿಸಬೇಕು ಎಂಬ ಬೇಡಿಕೆಯೊಂದಿಗೆ 9 ಮಂದಿ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಶುಕ್ರವಾರ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ 12 ಮಂದಿ ಭಿನ್ನಮತೀಯ ಶಾಸಕರ ಜತೆ ನಡೆಸಿದ ಸರಣಿ ಮಾತುಕತೆಗಳು ವಿಫಲವಾದ ಬೆನ್ನಲ್ಲೇ 9 ಮಂದಿ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಶನಿವಾರ ಕೂಡಾ ದೆಹಲಿಗೆ ಆಗಮಿಸುವ ಮುನ್ನ ಸರ್ಕ್ಯೂಟ್ ಹೌಸ್ ಮತ್ತು ನಗರದ ಹೋಟೆಲ್‌ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿದೆ.

ಮೈತ್ರಿಕೂಟದ ಮಧ್ಯಸ್ಥಿಕೆ ಪ್ರಯತ್ನಗಳ ಭಾಗವಾಗಿ ಮಿತ್ರಪಕ್ಷ JMMನ ದುಮ್ಕಾ ಶಾಸಕ ಮತ್ತು ಸಚಿವ ಬಸಂತ್ ಸೊರೆನ್ ಅವರು ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರನ್ನು ಹೋಟೆಲ್‌ನಲ್ಲಿ ಭೇಟಿಯಾಗಿ ಮನವೊಲಿಕಗೆ ಯತ್ನಿಸಿದ್ದು, ಯಾವುದೇ ಪ್ರಯೋಜನವಾಗಲಿಲ್ಲ.

ಜಾರ್ಖಾಂಡ್‌ ಆಡಳಿತಾರೂಢ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷವಾದ ಕಾಂಗ್ರೆಸ್ 17 ಶಾಸಕರನ್ನು ಹೊಂದಿದೆ. ಈ ಪೈಕಿ ನಾಲ್ವರು ಸಚಿವರನ್ನು ಹೊರತುಪಡಿಸಿ, ನಾಲ್ಕು ಮಂದಿ ಶಾಸಕರು ಇತರ ಕಾರಣಗಳಿಂದಾಗಿ ರಾಂಚಿಯಲ್ಲೇ ಉಳಿದುಕೊಂಡಿದ್ದಾರೆ. ಈ ಪೈಕಿ ಶಿಲ್ಪಿ ನೇಹಾ ಟಿರ್ಕೆ (ಮಂದರ್), ಪೂರ್ಣಿಮಾ ನೀರಜ್ ಸಿಂಗ್ (ಝಾರಿಯಾ) ಮತ್ತು ರಾಮಚಂದ್ರ ಸಿಂಗ್ (ಮನಿಕಾ) ಭಾನುವಾರ ದೆಹಲಿಗೆ ತಲುಪುವ ನಿರೀಕ್ಷೆ ಇದೆ. ಪೊರಿಯಾಹಾತ್ ಶಾಸಕ ಪ್ರದೀಪ್ ಯಾದವ್ ಕೂಡಾ 12 ಮಂದಿಯ ಬಣದಿಂದ ದೂರ ಉಳಿದಿದ್ದಾರೆ.

ಎಐಸಿಸಿಯು ಜಾರ್ಖಂಡ್‌ನಲ್ಲಿನ  ಪ್ರಸ್ತುತ ಬಿಕ್ಕಟ್ಟಿನ ವೀಕ್ಷಕರಾಗಿ ಗಂಧವಾನಿಯ ಶಾಸಕ ಉಮಂಗ್ ಸಿಂಘಾರ್ ಅವರನ್ನು ನೇಮಿಸಿದೆ ಮತ್ತು ಇವರು ಇಂದು ದೆಹಲಿಗೆ ತೆರಳಿ ಇವರು ಅತೃಪ್ತ ಶಾಸಕರ ಜೊತೆ ಮಾತುಕತೆಯನ್ನು ನಡೆಸಲಿದ್ದಾರೆ. ಅತೃಪ್ತ ಶಾಸಕರು ಫೆಬ್ರವರಿ 23ರಿಂದ ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದಿಂದ ದೂರ ಉಳಿಯಲು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಣಕಾಸು ಮಸೂದೆಯ ಸಮಯದಲ್ಲಿ ಮತದಾನದಿಂದ ದೂರವಿರಲು ಯೋಚಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಚಂಪೈ ಸೊರೆನ್ ಸರ್ಕಾರದ  ಉಳಿದ ಅವಧಿಗೆ ನಾಲ್ವರು ಸಚಿವರನ್ನು ಮರುನಾಮಕರಣ ಮಾಡಿರುವುದರಿಂದ ಶಾಸಕರು ಅಸಮಾಧಾನಗೊಂಡಿದ್ದಾರೆ. ಜಾರ್ಖಂಡ್‌ನಲ್ಲಿನ ನೂತನ ಸರಕಾರದಲ್ಲಿ ಕಾಂಗ್ರೆಸ್‌ನಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಅಲಂಗೀರ್ ಆಲಂ, ರಾಮೇಶ್ವರ್ ಓರಾನ್, ಬನ್ನಾ ಗುಪ್ತಾ ಮತ್ತು ಬಾದಲ್ ಪತ್ರಲೇಖ್ ಸೇರಿದ್ದಾರೆ.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...