Homeಮುಖಪುಟಜಾರ್ಖಂಡ್‌ನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು; ಸ್ವಪಕ್ಷದ ಶಾಸಕರನ್ನು ಸಂಪುಟದಿಂದ ಕೈಬಿಡುವಂತೆ ಪಟ್ಟು ಹಿಡಿದ ಕಾಂಗ್ರೆಸ್‌ ಶಾಸಕರು

ಜಾರ್ಖಂಡ್‌ನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು; ಸ್ವಪಕ್ಷದ ಶಾಸಕರನ್ನು ಸಂಪುಟದಿಂದ ಕೈಬಿಡುವಂತೆ ಪಟ್ಟು ಹಿಡಿದ ಕಾಂಗ್ರೆಸ್‌ ಶಾಸಕರು

- Advertisement -
- Advertisement -

ಜಾರ್ಖಂಡ್‌ನಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರಿದಿದ್ದು, ಚಂಪೈ ಸೊರೆನ್ ಸರ್ಕಾರದಲ್ಲಿ ಈಗಿರುವ ಪಕ್ಷದ ಕೋಟಾದಿಂದ ಸಚಿವರಾಗಿರುವ 7 ಮಂದಿ ಸಚಿವರನ್ನು ತಕ್ಷಣ ತೆಗೆದು ಹಾಕಿ ಹೊಸಬರಿಗೆ ನೇಮಿಸಬೇಕು ಎಂಬ ಬೇಡಿಕೆಯೊಂದಿಗೆ 9 ಮಂದಿ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಶುಕ್ರವಾರ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ 12 ಮಂದಿ ಭಿನ್ನಮತೀಯ ಶಾಸಕರ ಜತೆ ನಡೆಸಿದ ಸರಣಿ ಮಾತುಕತೆಗಳು ವಿಫಲವಾದ ಬೆನ್ನಲ್ಲೇ 9 ಮಂದಿ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಶನಿವಾರ ಕೂಡಾ ದೆಹಲಿಗೆ ಆಗಮಿಸುವ ಮುನ್ನ ಸರ್ಕ್ಯೂಟ್ ಹೌಸ್ ಮತ್ತು ನಗರದ ಹೋಟೆಲ್‌ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿದೆ.

ಮೈತ್ರಿಕೂಟದ ಮಧ್ಯಸ್ಥಿಕೆ ಪ್ರಯತ್ನಗಳ ಭಾಗವಾಗಿ ಮಿತ್ರಪಕ್ಷ JMMನ ದುಮ್ಕಾ ಶಾಸಕ ಮತ್ತು ಸಚಿವ ಬಸಂತ್ ಸೊರೆನ್ ಅವರು ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರನ್ನು ಹೋಟೆಲ್‌ನಲ್ಲಿ ಭೇಟಿಯಾಗಿ ಮನವೊಲಿಕಗೆ ಯತ್ನಿಸಿದ್ದು, ಯಾವುದೇ ಪ್ರಯೋಜನವಾಗಲಿಲ್ಲ.

ಜಾರ್ಖಾಂಡ್‌ ಆಡಳಿತಾರೂಢ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷವಾದ ಕಾಂಗ್ರೆಸ್ 17 ಶಾಸಕರನ್ನು ಹೊಂದಿದೆ. ಈ ಪೈಕಿ ನಾಲ್ವರು ಸಚಿವರನ್ನು ಹೊರತುಪಡಿಸಿ, ನಾಲ್ಕು ಮಂದಿ ಶಾಸಕರು ಇತರ ಕಾರಣಗಳಿಂದಾಗಿ ರಾಂಚಿಯಲ್ಲೇ ಉಳಿದುಕೊಂಡಿದ್ದಾರೆ. ಈ ಪೈಕಿ ಶಿಲ್ಪಿ ನೇಹಾ ಟಿರ್ಕೆ (ಮಂದರ್), ಪೂರ್ಣಿಮಾ ನೀರಜ್ ಸಿಂಗ್ (ಝಾರಿಯಾ) ಮತ್ತು ರಾಮಚಂದ್ರ ಸಿಂಗ್ (ಮನಿಕಾ) ಭಾನುವಾರ ದೆಹಲಿಗೆ ತಲುಪುವ ನಿರೀಕ್ಷೆ ಇದೆ. ಪೊರಿಯಾಹಾತ್ ಶಾಸಕ ಪ್ರದೀಪ್ ಯಾದವ್ ಕೂಡಾ 12 ಮಂದಿಯ ಬಣದಿಂದ ದೂರ ಉಳಿದಿದ್ದಾರೆ.

ಎಐಸಿಸಿಯು ಜಾರ್ಖಂಡ್‌ನಲ್ಲಿನ  ಪ್ರಸ್ತುತ ಬಿಕ್ಕಟ್ಟಿನ ವೀಕ್ಷಕರಾಗಿ ಗಂಧವಾನಿಯ ಶಾಸಕ ಉಮಂಗ್ ಸಿಂಘಾರ್ ಅವರನ್ನು ನೇಮಿಸಿದೆ ಮತ್ತು ಇವರು ಇಂದು ದೆಹಲಿಗೆ ತೆರಳಿ ಇವರು ಅತೃಪ್ತ ಶಾಸಕರ ಜೊತೆ ಮಾತುಕತೆಯನ್ನು ನಡೆಸಲಿದ್ದಾರೆ. ಅತೃಪ್ತ ಶಾಸಕರು ಫೆಬ್ರವರಿ 23ರಿಂದ ಆರಂಭವಾಗುವ ರಾಜ್ಯ ಬಜೆಟ್ ಅಧಿವೇಶನದಿಂದ ದೂರ ಉಳಿಯಲು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಣಕಾಸು ಮಸೂದೆಯ ಸಮಯದಲ್ಲಿ ಮತದಾನದಿಂದ ದೂರವಿರಲು ಯೋಚಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಚಂಪೈ ಸೊರೆನ್ ಸರ್ಕಾರದ  ಉಳಿದ ಅವಧಿಗೆ ನಾಲ್ವರು ಸಚಿವರನ್ನು ಮರುನಾಮಕರಣ ಮಾಡಿರುವುದರಿಂದ ಶಾಸಕರು ಅಸಮಾಧಾನಗೊಂಡಿದ್ದಾರೆ. ಜಾರ್ಖಂಡ್‌ನಲ್ಲಿನ ನೂತನ ಸರಕಾರದಲ್ಲಿ ಕಾಂಗ್ರೆಸ್‌ನಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಅಲಂಗೀರ್ ಆಲಂ, ರಾಮೇಶ್ವರ್ ಓರಾನ್, ಬನ್ನಾ ಗುಪ್ತಾ ಮತ್ತು ಬಾದಲ್ ಪತ್ರಲೇಖ್ ಸೇರಿದ್ದಾರೆ.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...