Homeಮುಖಪುಟವಿಶಾಖಪಟ್ಟಣಂ ಶಿಪ್‌ಯಾರ್ಡ್‌ನಲ್ಲಿ ಕ್ರೇನ್ ಕುಸಿತ: 9 ಜನರು ಸಾವು

ವಿಶಾಖಪಟ್ಟಣಂ ಶಿಪ್‌ಯಾರ್ಡ್‌ನಲ್ಲಿ ಕ್ರೇನ್ ಕುಸಿತ: 9 ಜನರು ಸಾವು

ಲೋಡ್-ಪರೀಕ್ಷಾ ಪ್ರಯೋಗಗಳ ಸಮಯದಲ್ಲಿ ಕ್ರೇನ್ ಕುಸಿದಿದೆ.

- Advertisement -
- Advertisement -

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್ ಯಾರ್ಡ್ ಲಿಮಿಟೆಡ್ ಕಾಂಪ್ಲೆಕ್ಸ್ ನಲ್ಲಿ ಇಂದು ಬೃಹತ್ ಕ್ರೇನ್ ಕುಸಿದು 9 ಜನರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋಡ್-ಪರೀಕ್ಷಾ ಪ್ರಯೋಗಗಳ ಸಮಯದಲ್ಲಿ ಕ್ರೇನ್ ಕುಸಿದಿದೆ ಎನ್ನಲಾಗಿದೆ.

ಮೃತಪಟ್ಟವರಲ್ಲಿ ನಾಲ್ವರು ಶಿಪ್‌ಯಾರ್ಡ್ ನೌಕರರು ಮತ್ತು ಉಳಿದವರು ಗುತ್ತಿಗೆ ಸಿಬ್ಬಂದಿ ಎಂದು ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಆರ್.ಕೆ. ಮೀನಾ ತಿಳಿಸಿದ್ದಾರೆ.

ಎಂಟು ಸೆಕೆಂಡುಗಳ ವೀಡಿಯೊದಲ್ಲಿ ದೈತ್ಯ ಹಳದಿ ಕ್ರೇನ್ ಹಡಗುಕಟ್ಟೆಯಲ್ಲಿ ನೆಲದ ಮೇಲೆ ಅಪ್ಪಳಿಸುತ್ತಿರುವುದು ಕಂಡುಬಂದಿದೆ.

ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ಮತ್ತು ನಗರ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

ಆಂಧ್ರಪ್ರದೇಶದ ಕರಾವಳಿ ನಗರದಲ್ಲಿರುವ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್, ಹಡಗು ನಿರ್ಮಾಣ, ಹಡಗು ರಿಪೇರಿ, ಜಲಾಂತರ್ಗಾಮಿ ನಿರ್ಮಾಣ ಮತ್ತು ರೀಫಿಟ್‌ಗಳ ಜೊತೆಗೆ ಕಡಲಾಚೆಯ ರಚನೆಗಳ ವಿನ್ಯಾಸ ಮತ್ತು ನಿರ್ಮಾಣದ ಅಗತ್ಯತೆಗಳನ್ನು ಪೂರೈಸುವಲ್ಲಿ ತೊಡಗಿಸಿಕೊಂಡಿದೆ.

ವಿಶಾಖಪಟ್ಟಣಂ ನಲ್ಲಿ ಇತ್ತೀಚೆಗೆ ಸರಣಿ ಅಪಘಾತ ಪ್ರಕರಗಳು ನಡೆದಿವೆ. ಅದಕ್ಕೆ ಇದು ಹೊಸ ಸೇರ್ಪಸೆಯಾಗಿದೆ.

ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿರುವ ಎಲ್ಜಿ ಪಾಲಿಮರ್ಸ್ ಸೌಲಭ್ಯ ಎಂಬ ರಾಸಾಯನಿಕ ಸ್ಥಾವರದಲ್ಲಿ ಅನಿಲ ಸೋರಿಕೆಯಾದ ನಂತರ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದರು ಮತ್ತು 1,000 ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದರು.

ಜೂನ್ 30 ರಂದು ಬಂದರು ನಗರದ ಔಷಧೀಯ ಘಟಕವೊಂದರಲ್ಲಿ ಅನಿಲ ಸೋರಿಕೆಯಾದ ನಂತರ ಇಬ್ಬರು ಸಾವನ್ನಪ್ಪಿದರು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದರು.

ಜುಲೈನಲ್ಲಿ, ವಿಶಾಖಪಟ್ಟಣಂ ಬಳಿಯ ಮತ್ತೊಂದು ಔಷಧೀಯ ಘಟಕದಲ್ಲಿ ಸ್ಫೋಟ ಸಂಭವಿಸಿದ ನಂತರ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬ ಕಾರ್ಮಿಕ ಗಾಯಗೊಂಡಿದ್ದ ಎನ್ನಲಾಗಿದೆ.


ಇದನ್ನೂ ಓದಿ: ಕೊರೊನಾ ನಿಯಂತ್ರಿಸಲು ದೆಹಲಿ ಮಾದರಿ ಅನುಸರಿಸಿ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...