Homeಮುಖಪುಟ9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

ಮಣಿಪುರದಲ್ಲಿ ರಾಜ್ಯಸಭೆ ಚುನಾವಣೆ ಗೆಲ್ಲಲು ಹೊರಟಿದ್ದ ಬಿಜೆಪಿ ಪಕ್ಷಕ್ಕೆ ಈಗ ಸರ್ಕಾರ ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

- Advertisement -
- Advertisement -

ಆಪರೇಷನ್ ಕಮಲದ ಮೂಲಕ ಮಣಿಪುರದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಹಲವು ಕಾರಣಗಳಿಗಾಗಿ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಮಣಿಪುರ ರಾಜ್ಯಸಭಾ ಚುನಾವಣೆ ಗೆಲ್ಲಲು ಹೊರಟಿದ್ದ ಅದಕ್ಕೆ ಈಗ ಸರ್ಕಾರವನ್ನು ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

ಮಣಿಪುರದ ಬಿಜೆಪಿ ನೇತೃತ್ವದ ಬಿರೆನ್ ಸಿಂಗ್ ಸರ್ಕಾರದಿಂದ ಕನಿಷ್ಠ ಒಂಬತ್ತು ಶಾಸಕರು ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿ ಸರ್ಕಾರವು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದು ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ದೊಡ್ಡ ತೊಂದರೆಯಾಗಲಿದೆ.

ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಒಂಬತ್ತು ಶಾಸಕರಲ್ಲಿ ಕಾನ್ರಾಡ್ ಸಾಂಗ್ಮಾ ನೇತೃತ್ವದ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಅಥವಾ ಎನ್‌ಪಿಪಿಯಿಂದ ನಾಲ್ವರು ಸೇರಿದ್ದಾರೆ. ಅವರಲ್ಲಿ ಉಪಮುಖ್ಯಮಂತ್ರಿ ವೈ ಜಾಯ್‌ಕುಮಾರ್ ಸಿಂಗ್, ಕ್ಯಾಬಿನೆಟ್ ಮಂತ್ರಿಗಳಾದ ಎನ್ ಕಾಯಿಸಿ, ಎಲ್ ಜಯಂತ ಕುಮಾರ್ ಸಿಂಗ್ ಮತ್ತು ಲೆಟ್‌ಪಾವೊ ಹಾಕಿಪ್ ಅವರು ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ.

ಮೂವರು ಬಿಜೆಪಿ ಶಾಸಕರು, ಒಬ್ಬ ತೃಣಮೂಲ ಕಾಂಗ್ರೆಸ್ ಶಾಸಕ ಟಿ.ರಬಿಂದ್ರೊ ಸಿಂಗ್ ಮತ್ತು ಸ್ವತಂತ್ರ ಶಾಸಕ ಶಹಾಬುದ್ದೀನ್ ಕೂಡ ಬಿಜೆಪಿಗೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2017 ರಲ್ಲಿ ಬಿಜೆಪಿಗೆ ಪಕ್ಷಾಂತರವಾದ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆ ಪ್ರವೇಶಿಸಬಾರದೆಂದು ಮಣಿಪುರ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಹಠಾತ್ ಅಸ್ಥಿರತೆ ಉಂಟಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಶಾಸಕ ಥ.ಶ್ಯಾಮ್‌ಕುಮಾರ್ ಸಿಂಗ್ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸಿ ಕ್ಯಾಬಿನೆಟ್ ಸಚಿವರಾಗಿ ಆಯ್ಕೆಯಾದಾಗ ಅವರನ್ನು ಅನರ್ಹಗೊಳಿಸಲಾಯಿತು. ಇತರ ಏಳು ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿಯು ಸ್ಪೀಕರ್ ಖೇಮ್‌ಚಂದ್ ಸಿಂಗ್ ಅವರ ನ್ಯಾಯಮಂಡಳಿಯಲ್ಲಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 28 ಸ್ಥಾನಗಳೊಂದಿಗೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಗೆ 21 ಸ್ಥಾನಗಳು ದೊರೆತಿವೆ. ಆದರೆ ನಾಲ್ಕು ಎನ್‌ಪಿಪಿ, ನಾಲ್ಕು ಎನ್‌ಪಿಎಫ್, ಒಂದು ಎಲ್‌ಜೆಪಿ, ಒಂದು ಟಿಎಂಸಿ, ಒಬ್ಬ ಸ್ವತಂತ್ರ ಸದಸ್ಯ ಮತ್ತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಬೆಂಬಲ ಪಡೆಯುವ ಮೂಲಕ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಬಿರೆನ್ ಸಿಂಗ್ ಸರ್ಕಾರ ರಚನೆಯ ನಂತರ ಇತರ ಏಳು ಕಾಂಗ್ರೆಸ್ ಶಾಸಕರು ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಶ್ಯಾಮ್‌ಕುಮಾರ್ ಸಿಂಗ್ ಮತ್ತು ಇತರ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ವಿಧಾನಸಭೆಯ ಬಲಾಬಲ 52 ಕ್ಕೆ ಕುಸಿದಿದೆ.

ಬಿಜೆಪಿಗೆ ಸದ್ಯಕ್ಕೆ 23 ಸದಸ್ಯರ ಬಲವನ್ನು ಹೊಂದಿದೆ. ಅದರಲ್ಲಿ 18 ಬಿಜೆಪಿ ಶಾಸಕರು, ನಾಲ್ಕು ಎನ್‌ಪಿಎಫ್ ಮತ್ತು ಒಬ್ಬ 1 ಎಲ್‌ಜೆಪಿ ಸದಸ್ಯ ಸೇರಿದ್ದಾರೆ.

ಕಾಂಗ್ರೆಸ್ ತನ್ನದೇ ಆದ 20 ಶಾಸಕರನ್ನು ಹೊಂದಿದೆ. ಒಬ್ಬ ಸದಸ್ಯನನ್ನು ಅನರ್ಹಗೊಳಿಸಲಾಗಿದೆ ಮತ್ತು ಏಳು ಪಕ್ಷಾಂತರಿಗಳನ್ನು ನಿರ್ಬಂಧಿಸಲಾಗಿದೆ. ಬಿರೆನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡ ಒಂಬತ್ತು ಶಾಸಕರ ಬೆಂಬಲ ಸಿಕ್ಕರೆ, ಕಾಂಗ್ರೆಸ್ 29 ಶಾಸಕರ ಬೆಂಬಲವನ್ನು ಪಡೆಯುವ ಮೂಲಕ ರಾಜ್ಯಸಭಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ಪಾಲಿಗೆ ಮುಳುವಾಗಲಿದೆ.


ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...