Homeಮುಖಪುಟ9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

ಮಣಿಪುರದಲ್ಲಿ ರಾಜ್ಯಸಭೆ ಚುನಾವಣೆ ಗೆಲ್ಲಲು ಹೊರಟಿದ್ದ ಬಿಜೆಪಿ ಪಕ್ಷಕ್ಕೆ ಈಗ ಸರ್ಕಾರ ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

- Advertisement -
- Advertisement -

ಆಪರೇಷನ್ ಕಮಲದ ಮೂಲಕ ಮಣಿಪುರದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಹಲವು ಕಾರಣಗಳಿಗಾಗಿ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಮಣಿಪುರ ರಾಜ್ಯಸಭಾ ಚುನಾವಣೆ ಗೆಲ್ಲಲು ಹೊರಟಿದ್ದ ಅದಕ್ಕೆ ಈಗ ಸರ್ಕಾರವನ್ನು ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

ಮಣಿಪುರದ ಬಿಜೆಪಿ ನೇತೃತ್ವದ ಬಿರೆನ್ ಸಿಂಗ್ ಸರ್ಕಾರದಿಂದ ಕನಿಷ್ಠ ಒಂಬತ್ತು ಶಾಸಕರು ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿ ಸರ್ಕಾರವು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದು ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ದೊಡ್ಡ ತೊಂದರೆಯಾಗಲಿದೆ.

ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಒಂಬತ್ತು ಶಾಸಕರಲ್ಲಿ ಕಾನ್ರಾಡ್ ಸಾಂಗ್ಮಾ ನೇತೃತ್ವದ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಅಥವಾ ಎನ್‌ಪಿಪಿಯಿಂದ ನಾಲ್ವರು ಸೇರಿದ್ದಾರೆ. ಅವರಲ್ಲಿ ಉಪಮುಖ್ಯಮಂತ್ರಿ ವೈ ಜಾಯ್‌ಕುಮಾರ್ ಸಿಂಗ್, ಕ್ಯಾಬಿನೆಟ್ ಮಂತ್ರಿಗಳಾದ ಎನ್ ಕಾಯಿಸಿ, ಎಲ್ ಜಯಂತ ಕುಮಾರ್ ಸಿಂಗ್ ಮತ್ತು ಲೆಟ್‌ಪಾವೊ ಹಾಕಿಪ್ ಅವರು ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ.

ಮೂವರು ಬಿಜೆಪಿ ಶಾಸಕರು, ಒಬ್ಬ ತೃಣಮೂಲ ಕಾಂಗ್ರೆಸ್ ಶಾಸಕ ಟಿ.ರಬಿಂದ್ರೊ ಸಿಂಗ್ ಮತ್ತು ಸ್ವತಂತ್ರ ಶಾಸಕ ಶಹಾಬುದ್ದೀನ್ ಕೂಡ ಬಿಜೆಪಿಗೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2017 ರಲ್ಲಿ ಬಿಜೆಪಿಗೆ ಪಕ್ಷಾಂತರವಾದ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆ ಪ್ರವೇಶಿಸಬಾರದೆಂದು ಮಣಿಪುರ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಹಠಾತ್ ಅಸ್ಥಿರತೆ ಉಂಟಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಶಾಸಕ ಥ.ಶ್ಯಾಮ್‌ಕುಮಾರ್ ಸಿಂಗ್ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸಿ ಕ್ಯಾಬಿನೆಟ್ ಸಚಿವರಾಗಿ ಆಯ್ಕೆಯಾದಾಗ ಅವರನ್ನು ಅನರ್ಹಗೊಳಿಸಲಾಯಿತು. ಇತರ ಏಳು ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿಯು ಸ್ಪೀಕರ್ ಖೇಮ್‌ಚಂದ್ ಸಿಂಗ್ ಅವರ ನ್ಯಾಯಮಂಡಳಿಯಲ್ಲಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 28 ಸ್ಥಾನಗಳೊಂದಿಗೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಗೆ 21 ಸ್ಥಾನಗಳು ದೊರೆತಿವೆ. ಆದರೆ ನಾಲ್ಕು ಎನ್‌ಪಿಪಿ, ನಾಲ್ಕು ಎನ್‌ಪಿಎಫ್, ಒಂದು ಎಲ್‌ಜೆಪಿ, ಒಂದು ಟಿಎಂಸಿ, ಒಬ್ಬ ಸ್ವತಂತ್ರ ಸದಸ್ಯ ಮತ್ತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಬೆಂಬಲ ಪಡೆಯುವ ಮೂಲಕ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಬಿರೆನ್ ಸಿಂಗ್ ಸರ್ಕಾರ ರಚನೆಯ ನಂತರ ಇತರ ಏಳು ಕಾಂಗ್ರೆಸ್ ಶಾಸಕರು ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಶ್ಯಾಮ್‌ಕುಮಾರ್ ಸಿಂಗ್ ಮತ್ತು ಇತರ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ವಿಧಾನಸಭೆಯ ಬಲಾಬಲ 52 ಕ್ಕೆ ಕುಸಿದಿದೆ.

ಬಿಜೆಪಿಗೆ ಸದ್ಯಕ್ಕೆ 23 ಸದಸ್ಯರ ಬಲವನ್ನು ಹೊಂದಿದೆ. ಅದರಲ್ಲಿ 18 ಬಿಜೆಪಿ ಶಾಸಕರು, ನಾಲ್ಕು ಎನ್‌ಪಿಎಫ್ ಮತ್ತು ಒಬ್ಬ 1 ಎಲ್‌ಜೆಪಿ ಸದಸ್ಯ ಸೇರಿದ್ದಾರೆ.

ಕಾಂಗ್ರೆಸ್ ತನ್ನದೇ ಆದ 20 ಶಾಸಕರನ್ನು ಹೊಂದಿದೆ. ಒಬ್ಬ ಸದಸ್ಯನನ್ನು ಅನರ್ಹಗೊಳಿಸಲಾಗಿದೆ ಮತ್ತು ಏಳು ಪಕ್ಷಾಂತರಿಗಳನ್ನು ನಿರ್ಬಂಧಿಸಲಾಗಿದೆ. ಬಿರೆನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡ ಒಂಬತ್ತು ಶಾಸಕರ ಬೆಂಬಲ ಸಿಕ್ಕರೆ, ಕಾಂಗ್ರೆಸ್ 29 ಶಾಸಕರ ಬೆಂಬಲವನ್ನು ಪಡೆಯುವ ಮೂಲಕ ರಾಜ್ಯಸಭಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ಪಾಲಿಗೆ ಮುಳುವಾಗಲಿದೆ.


ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...