Homeಮುಖಪುಟ9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

ಮಣಿಪುರದಲ್ಲಿ ರಾಜ್ಯಸಭೆ ಚುನಾವಣೆ ಗೆಲ್ಲಲು ಹೊರಟಿದ್ದ ಬಿಜೆಪಿ ಪಕ್ಷಕ್ಕೆ ಈಗ ಸರ್ಕಾರ ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

- Advertisement -
- Advertisement -

ಆಪರೇಷನ್ ಕಮಲದ ಮೂಲಕ ಮಣಿಪುರದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಹಲವು ಕಾರಣಗಳಿಗಾಗಿ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಮಣಿಪುರ ರಾಜ್ಯಸಭಾ ಚುನಾವಣೆ ಗೆಲ್ಲಲು ಹೊರಟಿದ್ದ ಅದಕ್ಕೆ ಈಗ ಸರ್ಕಾರವನ್ನು ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

ಮಣಿಪುರದ ಬಿಜೆಪಿ ನೇತೃತ್ವದ ಬಿರೆನ್ ಸಿಂಗ್ ಸರ್ಕಾರದಿಂದ ಕನಿಷ್ಠ ಒಂಬತ್ತು ಶಾಸಕರು ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿ ಸರ್ಕಾರವು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದು ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ದೊಡ್ಡ ತೊಂದರೆಯಾಗಲಿದೆ.

ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಒಂಬತ್ತು ಶಾಸಕರಲ್ಲಿ ಕಾನ್ರಾಡ್ ಸಾಂಗ್ಮಾ ನೇತೃತ್ವದ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಅಥವಾ ಎನ್‌ಪಿಪಿಯಿಂದ ನಾಲ್ವರು ಸೇರಿದ್ದಾರೆ. ಅವರಲ್ಲಿ ಉಪಮುಖ್ಯಮಂತ್ರಿ ವೈ ಜಾಯ್‌ಕುಮಾರ್ ಸಿಂಗ್, ಕ್ಯಾಬಿನೆಟ್ ಮಂತ್ರಿಗಳಾದ ಎನ್ ಕಾಯಿಸಿ, ಎಲ್ ಜಯಂತ ಕುಮಾರ್ ಸಿಂಗ್ ಮತ್ತು ಲೆಟ್‌ಪಾವೊ ಹಾಕಿಪ್ ಅವರು ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ.

ಮೂವರು ಬಿಜೆಪಿ ಶಾಸಕರು, ಒಬ್ಬ ತೃಣಮೂಲ ಕಾಂಗ್ರೆಸ್ ಶಾಸಕ ಟಿ.ರಬಿಂದ್ರೊ ಸಿಂಗ್ ಮತ್ತು ಸ್ವತಂತ್ರ ಶಾಸಕ ಶಹಾಬುದ್ದೀನ್ ಕೂಡ ಬಿಜೆಪಿಗೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2017 ರಲ್ಲಿ ಬಿಜೆಪಿಗೆ ಪಕ್ಷಾಂತರವಾದ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆ ಪ್ರವೇಶಿಸಬಾರದೆಂದು ಮಣಿಪುರ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಹಠಾತ್ ಅಸ್ಥಿರತೆ ಉಂಟಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಶಾಸಕ ಥ.ಶ್ಯಾಮ್‌ಕುಮಾರ್ ಸಿಂಗ್ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸಿ ಕ್ಯಾಬಿನೆಟ್ ಸಚಿವರಾಗಿ ಆಯ್ಕೆಯಾದಾಗ ಅವರನ್ನು ಅನರ್ಹಗೊಳಿಸಲಾಯಿತು. ಇತರ ಏಳು ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿಯು ಸ್ಪೀಕರ್ ಖೇಮ್‌ಚಂದ್ ಸಿಂಗ್ ಅವರ ನ್ಯಾಯಮಂಡಳಿಯಲ್ಲಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 28 ಸ್ಥಾನಗಳೊಂದಿಗೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಗೆ 21 ಸ್ಥಾನಗಳು ದೊರೆತಿವೆ. ಆದರೆ ನಾಲ್ಕು ಎನ್‌ಪಿಪಿ, ನಾಲ್ಕು ಎನ್‌ಪಿಎಫ್, ಒಂದು ಎಲ್‌ಜೆಪಿ, ಒಂದು ಟಿಎಂಸಿ, ಒಬ್ಬ ಸ್ವತಂತ್ರ ಸದಸ್ಯ ಮತ್ತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಬೆಂಬಲ ಪಡೆಯುವ ಮೂಲಕ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಬಿರೆನ್ ಸಿಂಗ್ ಸರ್ಕಾರ ರಚನೆಯ ನಂತರ ಇತರ ಏಳು ಕಾಂಗ್ರೆಸ್ ಶಾಸಕರು ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಶ್ಯಾಮ್‌ಕುಮಾರ್ ಸಿಂಗ್ ಮತ್ತು ಇತರ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ವಿಧಾನಸಭೆಯ ಬಲಾಬಲ 52 ಕ್ಕೆ ಕುಸಿದಿದೆ.

ಬಿಜೆಪಿಗೆ ಸದ್ಯಕ್ಕೆ 23 ಸದಸ್ಯರ ಬಲವನ್ನು ಹೊಂದಿದೆ. ಅದರಲ್ಲಿ 18 ಬಿಜೆಪಿ ಶಾಸಕರು, ನಾಲ್ಕು ಎನ್‌ಪಿಎಫ್ ಮತ್ತು ಒಬ್ಬ 1 ಎಲ್‌ಜೆಪಿ ಸದಸ್ಯ ಸೇರಿದ್ದಾರೆ.

ಕಾಂಗ್ರೆಸ್ ತನ್ನದೇ ಆದ 20 ಶಾಸಕರನ್ನು ಹೊಂದಿದೆ. ಒಬ್ಬ ಸದಸ್ಯನನ್ನು ಅನರ್ಹಗೊಳಿಸಲಾಗಿದೆ ಮತ್ತು ಏಳು ಪಕ್ಷಾಂತರಿಗಳನ್ನು ನಿರ್ಬಂಧಿಸಲಾಗಿದೆ. ಬಿರೆನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡ ಒಂಬತ್ತು ಶಾಸಕರ ಬೆಂಬಲ ಸಿಕ್ಕರೆ, ಕಾಂಗ್ರೆಸ್ 29 ಶಾಸಕರ ಬೆಂಬಲವನ್ನು ಪಡೆಯುವ ಮೂಲಕ ರಾಜ್ಯಸಭಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ಪಾಲಿಗೆ ಮುಳುವಾಗಲಿದೆ.


ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...