Homeಮುಖಪುಟ9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

ಮಣಿಪುರದಲ್ಲಿ ರಾಜ್ಯಸಭೆ ಚುನಾವಣೆ ಗೆಲ್ಲಲು ಹೊರಟಿದ್ದ ಬಿಜೆಪಿ ಪಕ್ಷಕ್ಕೆ ಈಗ ಸರ್ಕಾರ ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

- Advertisement -
- Advertisement -

ಆಪರೇಷನ್ ಕಮಲದ ಮೂಲಕ ಮಣಿಪುರದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಹಲವು ಕಾರಣಗಳಿಗಾಗಿ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಮಣಿಪುರ ರಾಜ್ಯಸಭಾ ಚುನಾವಣೆ ಗೆಲ್ಲಲು ಹೊರಟಿದ್ದ ಅದಕ್ಕೆ ಈಗ ಸರ್ಕಾರವನ್ನು ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

ಮಣಿಪುರದ ಬಿಜೆಪಿ ನೇತೃತ್ವದ ಬಿರೆನ್ ಸಿಂಗ್ ಸರ್ಕಾರದಿಂದ ಕನಿಷ್ಠ ಒಂಬತ್ತು ಶಾಸಕರು ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿ ಸರ್ಕಾರವು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದು ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ದೊಡ್ಡ ತೊಂದರೆಯಾಗಲಿದೆ.

ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಒಂಬತ್ತು ಶಾಸಕರಲ್ಲಿ ಕಾನ್ರಾಡ್ ಸಾಂಗ್ಮಾ ನೇತೃತ್ವದ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಅಥವಾ ಎನ್‌ಪಿಪಿಯಿಂದ ನಾಲ್ವರು ಸೇರಿದ್ದಾರೆ. ಅವರಲ್ಲಿ ಉಪಮುಖ್ಯಮಂತ್ರಿ ವೈ ಜಾಯ್‌ಕುಮಾರ್ ಸಿಂಗ್, ಕ್ಯಾಬಿನೆಟ್ ಮಂತ್ರಿಗಳಾದ ಎನ್ ಕಾಯಿಸಿ, ಎಲ್ ಜಯಂತ ಕುಮಾರ್ ಸಿಂಗ್ ಮತ್ತು ಲೆಟ್‌ಪಾವೊ ಹಾಕಿಪ್ ಅವರು ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ.

ಮೂವರು ಬಿಜೆಪಿ ಶಾಸಕರು, ಒಬ್ಬ ತೃಣಮೂಲ ಕಾಂಗ್ರೆಸ್ ಶಾಸಕ ಟಿ.ರಬಿಂದ್ರೊ ಸಿಂಗ್ ಮತ್ತು ಸ್ವತಂತ್ರ ಶಾಸಕ ಶಹಾಬುದ್ದೀನ್ ಕೂಡ ಬಿಜೆಪಿಗೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2017 ರಲ್ಲಿ ಬಿಜೆಪಿಗೆ ಪಕ್ಷಾಂತರವಾದ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆ ಪ್ರವೇಶಿಸಬಾರದೆಂದು ಮಣಿಪುರ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಹಠಾತ್ ಅಸ್ಥಿರತೆ ಉಂಟಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಶಾಸಕ ಥ.ಶ್ಯಾಮ್‌ಕುಮಾರ್ ಸಿಂಗ್ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸಿ ಕ್ಯಾಬಿನೆಟ್ ಸಚಿವರಾಗಿ ಆಯ್ಕೆಯಾದಾಗ ಅವರನ್ನು ಅನರ್ಹಗೊಳಿಸಲಾಯಿತು. ಇತರ ಏಳು ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿಯು ಸ್ಪೀಕರ್ ಖೇಮ್‌ಚಂದ್ ಸಿಂಗ್ ಅವರ ನ್ಯಾಯಮಂಡಳಿಯಲ್ಲಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 28 ಸ್ಥಾನಗಳೊಂದಿಗೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಗೆ 21 ಸ್ಥಾನಗಳು ದೊರೆತಿವೆ. ಆದರೆ ನಾಲ್ಕು ಎನ್‌ಪಿಪಿ, ನಾಲ್ಕು ಎನ್‌ಪಿಎಫ್, ಒಂದು ಎಲ್‌ಜೆಪಿ, ಒಂದು ಟಿಎಂಸಿ, ಒಬ್ಬ ಸ್ವತಂತ್ರ ಸದಸ್ಯ ಮತ್ತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಬೆಂಬಲ ಪಡೆಯುವ ಮೂಲಕ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಬಿರೆನ್ ಸಿಂಗ್ ಸರ್ಕಾರ ರಚನೆಯ ನಂತರ ಇತರ ಏಳು ಕಾಂಗ್ರೆಸ್ ಶಾಸಕರು ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಶ್ಯಾಮ್‌ಕುಮಾರ್ ಸಿಂಗ್ ಮತ್ತು ಇತರ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ವಿಧಾನಸಭೆಯ ಬಲಾಬಲ 52 ಕ್ಕೆ ಕುಸಿದಿದೆ.

ಬಿಜೆಪಿಗೆ ಸದ್ಯಕ್ಕೆ 23 ಸದಸ್ಯರ ಬಲವನ್ನು ಹೊಂದಿದೆ. ಅದರಲ್ಲಿ 18 ಬಿಜೆಪಿ ಶಾಸಕರು, ನಾಲ್ಕು ಎನ್‌ಪಿಎಫ್ ಮತ್ತು ಒಬ್ಬ 1 ಎಲ್‌ಜೆಪಿ ಸದಸ್ಯ ಸೇರಿದ್ದಾರೆ.

ಕಾಂಗ್ರೆಸ್ ತನ್ನದೇ ಆದ 20 ಶಾಸಕರನ್ನು ಹೊಂದಿದೆ. ಒಬ್ಬ ಸದಸ್ಯನನ್ನು ಅನರ್ಹಗೊಳಿಸಲಾಗಿದೆ ಮತ್ತು ಏಳು ಪಕ್ಷಾಂತರಿಗಳನ್ನು ನಿರ್ಬಂಧಿಸಲಾಗಿದೆ. ಬಿರೆನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡ ಒಂಬತ್ತು ಶಾಸಕರ ಬೆಂಬಲ ಸಿಕ್ಕರೆ, ಕಾಂಗ್ರೆಸ್ 29 ಶಾಸಕರ ಬೆಂಬಲವನ್ನು ಪಡೆಯುವ ಮೂಲಕ ರಾಜ್ಯಸಭಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ಪಾಲಿಗೆ ಮುಳುವಾಗಲಿದೆ.


ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...