Homeಕರ್ನಾಟಕಕರ್ನಾಟಕ-ಕೇರಳದಲ್ಲಿ 9 ಕೊರೋನ ಪ್ರಕರಣ ಪತ್ತೆ: ಭಾರತದಲ್ಲಿ ಒಟ್ಟು 56 ಪ್ರಕರಣಗಳು

ಕರ್ನಾಟಕ-ಕೇರಳದಲ್ಲಿ 9 ಕೊರೋನ ಪ್ರಕರಣ ಪತ್ತೆ: ಭಾರತದಲ್ಲಿ ಒಟ್ಟು 56 ಪ್ರಕರಣಗಳು

- Advertisement -
- Advertisement -

ಒಂಬತ್ತು ಹೊಸ ಕೊರೋನ ವೈರಸ್ ಭಾದಿತ ಪ್ರಕರಣಗಳು ಕೇರಳ ಮತ್ತು ಕರ್ನಾಟಕದಲ್ಲಿ ವರದಿಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿಗೆ ಒಳಗಾದವರ ಸಂಖ್ಯೆಯನ್ನು 56 ಕ್ಕೆ ಏರಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ

ಇಂದು ಬೆಳಿಗ್ಗೆ 58 ಭಾರತೀಯರನ್ನು ಸುರಕ್ಷಿತವಾಗಿ ಇರಾನ್‌ನಿಂದ ವಿಮಾನದಲ್ಲಿ ಕರೆತರಲಾಗಿದೆ. ಇರಾನಿನಿಂದ ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ-ಸಿ-17 ಗ್ಲೋಬ್ ಮಾಸ್ಟರ್ ದೆಹಲಿಯಿಂದ 30 ಕಿ.ಮೀ ದೂರದಲ್ಲಿರುವ ಗಾಜಿಯಾಬಾದ್‌ಗೆ ಬಂದಿಳಿಯಿತು. ಈ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ “ಮಿಷನ್ ಪೂರ್ಣಗೊಂಡಿದೆ, ಇನ್ನು ಮುಂದಿನದ್ದು” ಎಂದು  ಟ್ವೀಟ್ ಮಾಡಿದ್ದಾರೆ.

ಇದು ಬೆಳಿಗ್ಗೆ ಇರಾನಿನಿಂದ ಕರೆ ತಂದ ಭಾರತೀಯ ವಾಯುಪಡೆಯ ಸಿ -17 ಗ್ಲೋಬ್‌ಮಾಸ್ಟರ್, ಭಾರತೀಯ ವಾಯುಪಡೆಯಲ್ಲೆ ಅತಿದೊಡ್ಡ ಮಿಲಿಟರಿ ವಿಮಾನವಾಗಿದೆ. ಫೆಬ್ರವರಿ 27 ರಂದು, 76 ಭಾರತೀಯರು ಮತ್ತು 36 ವಿದೇಶಿ ಪ್ರಜೆಗಳನ್ನು ಕೊರೋನ ವೈರಸ್ ಪತ್ತೆಯಾದ ವುಹಾನ್ ನಗರದಿಂದ ಕರೆತಲಾಗಿತ್ತು.

ಕಳೆದ ಮೂರು ದಿನಗಳಲ್ಲಿ ಕೇರಳದಲ್ಲಿ 12 ಪ್ರಕರಣಗಳು ವರದಿಯಾಗಿವೆ. ಕೊರೋನ ವೈರಸ್ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ ಸುಮಾರು 270 ಜನರು ಪತ್ತೆಯಾಗಿದ್ದಾರೆ. ಅವರಲ್ಲಿ ತೊಂಬತ್ತೈದು ಮಂದಿ “ಹೆಚ್ಚಿನ ಅಪಾಯದ ವಿಭಾಗ” ದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪ್ರಕರಣಗಳು ಪತ್ತೆಯಾದ ನಂತರ ಕಣ್ಗಾವಲನ್ನು ಬಲಪಡಿಸಲಾಗಿದೆ.

ಕೊರೋನ ಭೀತಿಯಿಂದಾಗಿ ಮಾರ್ಚ್‌ 31ರವರೆಗೆ ಬಹುತೇಕ ಸಿನಿಮಾ ಮಂದಿರಗಳನ್ನು ಮುಚ್ಚಲಾಗಿದೆ. ಹಲವು ಸಿನಿಮಾ ಸಂಘಟನೆಗಳ ಸಭೆಯ ನಂತರ ಈ ನಿರ್ಧಾರ ಬಂದಿದೆ.

“ಸುಮಾರು 1,116 ಜನರು ವೀಕ್ಷಣೆಯಲ್ಲಿದ್ದಾರೆ, 976 ಮಂದಿ ಮನೆ ಕ್ಯಾರೆಂಟೈನ್‌ನಲ್ಲಿದ್ದರೆ, 149 ಜನರು ಆಸ್ಪತ್ರೆಗಳಲ್ಲಿದ್ದಾರೆ. ಇದರಲ್ಲಿ ರೋಗಲಕ್ಷಣಗಳು ಇದ್ದವರೂ ಇದ್ದಾರೆ” ಎಂದು ಕೇರಳ ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ನಿವಾಸಿಯೊಬ್ಬರು ಕೊರೋನ ವೈರಸ್ ಭಾದಿತರಾಗಿದ್ದು ಪತ್ತೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...