Homeಕರ್ನಾಟಕಕರ್ನಾಟಕ-ಕೇರಳದಲ್ಲಿ 9 ಕೊರೋನ ಪ್ರಕರಣ ಪತ್ತೆ: ಭಾರತದಲ್ಲಿ ಒಟ್ಟು 56 ಪ್ರಕರಣಗಳು

ಕರ್ನಾಟಕ-ಕೇರಳದಲ್ಲಿ 9 ಕೊರೋನ ಪ್ರಕರಣ ಪತ್ತೆ: ಭಾರತದಲ್ಲಿ ಒಟ್ಟು 56 ಪ್ರಕರಣಗಳು

- Advertisement -
- Advertisement -

ಒಂಬತ್ತು ಹೊಸ ಕೊರೋನ ವೈರಸ್ ಭಾದಿತ ಪ್ರಕರಣಗಳು ಕೇರಳ ಮತ್ತು ಕರ್ನಾಟಕದಲ್ಲಿ ವರದಿಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿಗೆ ಒಳಗಾದವರ ಸಂಖ್ಯೆಯನ್ನು 56 ಕ್ಕೆ ಏರಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ

ಇಂದು ಬೆಳಿಗ್ಗೆ 58 ಭಾರತೀಯರನ್ನು ಸುರಕ್ಷಿತವಾಗಿ ಇರಾನ್‌ನಿಂದ ವಿಮಾನದಲ್ಲಿ ಕರೆತರಲಾಗಿದೆ. ಇರಾನಿನಿಂದ ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ-ಸಿ-17 ಗ್ಲೋಬ್ ಮಾಸ್ಟರ್ ದೆಹಲಿಯಿಂದ 30 ಕಿ.ಮೀ ದೂರದಲ್ಲಿರುವ ಗಾಜಿಯಾಬಾದ್‌ಗೆ ಬಂದಿಳಿಯಿತು. ಈ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ “ಮಿಷನ್ ಪೂರ್ಣಗೊಂಡಿದೆ, ಇನ್ನು ಮುಂದಿನದ್ದು” ಎಂದು  ಟ್ವೀಟ್ ಮಾಡಿದ್ದಾರೆ.

ಇದು ಬೆಳಿಗ್ಗೆ ಇರಾನಿನಿಂದ ಕರೆ ತಂದ ಭಾರತೀಯ ವಾಯುಪಡೆಯ ಸಿ -17 ಗ್ಲೋಬ್‌ಮಾಸ್ಟರ್, ಭಾರತೀಯ ವಾಯುಪಡೆಯಲ್ಲೆ ಅತಿದೊಡ್ಡ ಮಿಲಿಟರಿ ವಿಮಾನವಾಗಿದೆ. ಫೆಬ್ರವರಿ 27 ರಂದು, 76 ಭಾರತೀಯರು ಮತ್ತು 36 ವಿದೇಶಿ ಪ್ರಜೆಗಳನ್ನು ಕೊರೋನ ವೈರಸ್ ಪತ್ತೆಯಾದ ವುಹಾನ್ ನಗರದಿಂದ ಕರೆತಲಾಗಿತ್ತು.

ಕಳೆದ ಮೂರು ದಿನಗಳಲ್ಲಿ ಕೇರಳದಲ್ಲಿ 12 ಪ್ರಕರಣಗಳು ವರದಿಯಾಗಿವೆ. ಕೊರೋನ ವೈರಸ್ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ ಸುಮಾರು 270 ಜನರು ಪತ್ತೆಯಾಗಿದ್ದಾರೆ. ಅವರಲ್ಲಿ ತೊಂಬತ್ತೈದು ಮಂದಿ “ಹೆಚ್ಚಿನ ಅಪಾಯದ ವಿಭಾಗ” ದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪ್ರಕರಣಗಳು ಪತ್ತೆಯಾದ ನಂತರ ಕಣ್ಗಾವಲನ್ನು ಬಲಪಡಿಸಲಾಗಿದೆ.

ಕೊರೋನ ಭೀತಿಯಿಂದಾಗಿ ಮಾರ್ಚ್‌ 31ರವರೆಗೆ ಬಹುತೇಕ ಸಿನಿಮಾ ಮಂದಿರಗಳನ್ನು ಮುಚ್ಚಲಾಗಿದೆ. ಹಲವು ಸಿನಿಮಾ ಸಂಘಟನೆಗಳ ಸಭೆಯ ನಂತರ ಈ ನಿರ್ಧಾರ ಬಂದಿದೆ.

“ಸುಮಾರು 1,116 ಜನರು ವೀಕ್ಷಣೆಯಲ್ಲಿದ್ದಾರೆ, 976 ಮಂದಿ ಮನೆ ಕ್ಯಾರೆಂಟೈನ್‌ನಲ್ಲಿದ್ದರೆ, 149 ಜನರು ಆಸ್ಪತ್ರೆಗಳಲ್ಲಿದ್ದಾರೆ. ಇದರಲ್ಲಿ ರೋಗಲಕ್ಷಣಗಳು ಇದ್ದವರೂ ಇದ್ದಾರೆ” ಎಂದು ಕೇರಳ ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ನಿವಾಸಿಯೊಬ್ಬರು ಕೊರೋನ ವೈರಸ್ ಭಾದಿತರಾಗಿದ್ದು ಪತ್ತೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....