Homeಕರ್ನಾಟಕಕರ್ನಾಟಕ-ಕೇರಳದಲ್ಲಿ 9 ಕೊರೋನ ಪ್ರಕರಣ ಪತ್ತೆ: ಭಾರತದಲ್ಲಿ ಒಟ್ಟು 56 ಪ್ರಕರಣಗಳು

ಕರ್ನಾಟಕ-ಕೇರಳದಲ್ಲಿ 9 ಕೊರೋನ ಪ್ರಕರಣ ಪತ್ತೆ: ಭಾರತದಲ್ಲಿ ಒಟ್ಟು 56 ಪ್ರಕರಣಗಳು

- Advertisement -
- Advertisement -

ಒಂಬತ್ತು ಹೊಸ ಕೊರೋನ ವೈರಸ್ ಭಾದಿತ ಪ್ರಕರಣಗಳು ಕೇರಳ ಮತ್ತು ಕರ್ನಾಟಕದಲ್ಲಿ ವರದಿಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿಗೆ ಒಳಗಾದವರ ಸಂಖ್ಯೆಯನ್ನು 56 ಕ್ಕೆ ಏರಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ

ಇಂದು ಬೆಳಿಗ್ಗೆ 58 ಭಾರತೀಯರನ್ನು ಸುರಕ್ಷಿತವಾಗಿ ಇರಾನ್‌ನಿಂದ ವಿಮಾನದಲ್ಲಿ ಕರೆತರಲಾಗಿದೆ. ಇರಾನಿನಿಂದ ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ-ಸಿ-17 ಗ್ಲೋಬ್ ಮಾಸ್ಟರ್ ದೆಹಲಿಯಿಂದ 30 ಕಿ.ಮೀ ದೂರದಲ್ಲಿರುವ ಗಾಜಿಯಾಬಾದ್‌ಗೆ ಬಂದಿಳಿಯಿತು. ಈ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ “ಮಿಷನ್ ಪೂರ್ಣಗೊಂಡಿದೆ, ಇನ್ನು ಮುಂದಿನದ್ದು” ಎಂದು  ಟ್ವೀಟ್ ಮಾಡಿದ್ದಾರೆ.

ಇದು ಬೆಳಿಗ್ಗೆ ಇರಾನಿನಿಂದ ಕರೆ ತಂದ ಭಾರತೀಯ ವಾಯುಪಡೆಯ ಸಿ -17 ಗ್ಲೋಬ್‌ಮಾಸ್ಟರ್, ಭಾರತೀಯ ವಾಯುಪಡೆಯಲ್ಲೆ ಅತಿದೊಡ್ಡ ಮಿಲಿಟರಿ ವಿಮಾನವಾಗಿದೆ. ಫೆಬ್ರವರಿ 27 ರಂದು, 76 ಭಾರತೀಯರು ಮತ್ತು 36 ವಿದೇಶಿ ಪ್ರಜೆಗಳನ್ನು ಕೊರೋನ ವೈರಸ್ ಪತ್ತೆಯಾದ ವುಹಾನ್ ನಗರದಿಂದ ಕರೆತಲಾಗಿತ್ತು.

ಕಳೆದ ಮೂರು ದಿನಗಳಲ್ಲಿ ಕೇರಳದಲ್ಲಿ 12 ಪ್ರಕರಣಗಳು ವರದಿಯಾಗಿವೆ. ಕೊರೋನ ವೈರಸ್ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ ಸುಮಾರು 270 ಜನರು ಪತ್ತೆಯಾಗಿದ್ದಾರೆ. ಅವರಲ್ಲಿ ತೊಂಬತ್ತೈದು ಮಂದಿ “ಹೆಚ್ಚಿನ ಅಪಾಯದ ವಿಭಾಗ” ದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪ್ರಕರಣಗಳು ಪತ್ತೆಯಾದ ನಂತರ ಕಣ್ಗಾವಲನ್ನು ಬಲಪಡಿಸಲಾಗಿದೆ.

ಕೊರೋನ ಭೀತಿಯಿಂದಾಗಿ ಮಾರ್ಚ್‌ 31ರವರೆಗೆ ಬಹುತೇಕ ಸಿನಿಮಾ ಮಂದಿರಗಳನ್ನು ಮುಚ್ಚಲಾಗಿದೆ. ಹಲವು ಸಿನಿಮಾ ಸಂಘಟನೆಗಳ ಸಭೆಯ ನಂತರ ಈ ನಿರ್ಧಾರ ಬಂದಿದೆ.

“ಸುಮಾರು 1,116 ಜನರು ವೀಕ್ಷಣೆಯಲ್ಲಿದ್ದಾರೆ, 976 ಮಂದಿ ಮನೆ ಕ್ಯಾರೆಂಟೈನ್‌ನಲ್ಲಿದ್ದರೆ, 149 ಜನರು ಆಸ್ಪತ್ರೆಗಳಲ್ಲಿದ್ದಾರೆ. ಇದರಲ್ಲಿ ರೋಗಲಕ್ಷಣಗಳು ಇದ್ದವರೂ ಇದ್ದಾರೆ” ಎಂದು ಕೇರಳ ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ನಿವಾಸಿಯೊಬ್ಬರು ಕೊರೋನ ವೈರಸ್ ಭಾದಿತರಾಗಿದ್ದು ಪತ್ತೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...