Homeಅಂತರಾಷ್ಟ್ರೀಯಉಕ್ರೇನ್ ಮೇಲೆ ರಷ್ಯಾ ಸರಣಿ ದಾಳಿಗೆ 9 ಜನರು ಸಾವು: ಕೆಲವೆಡೆ ನೀರು-ವಿದ್ಯುತ್ ಸಂಪರ್ಕ ಕಡಿತ

ಉಕ್ರೇನ್ ಮೇಲೆ ರಷ್ಯಾ ಸರಣಿ ದಾಳಿಗೆ 9 ಜನರು ಸಾವು: ಕೆಲವೆಡೆ ನೀರು-ವಿದ್ಯುತ್ ಸಂಪರ್ಕ ಕಡಿತ

- Advertisement -
- Advertisement -

ಮಂಗಳವಾರ ಉಕ್ರೇನ್ ಮೇಲೆ ರಷ್ಯಾ ಸರಣಿ ದಾಳಿಗಳನ್ನು ನಡೆಸಿದ್ದು, ನಗರದ ಕಟ್ಟಡಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಗಳಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಆದರೆ, ದಕ್ಷಿಣ ರಷ್ಯಾದಲ್ಲಿ ಉಕ್ರೇನ್ ನಡೆಸಿದ ದಾಳಿಯಲ್ಲಿ ಮೂವರು ಸಾವನ್ನಪ್ಪಿ, ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ರೇನ್ ರಾಜಧಾನಿ ಕೈವ್‌ನ ಕೆಲವು ಭಾಗಗಳಲ್ಲಿ ನೀರು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಟೆಲಿಗ್ರಾಮ್‌ಗೆ ಪೋಸ್ಟ್ ಮಾಡಲಾದ ವೀಡಿಯೊ ದೃಶ್ಯಾವಳಿಗಳು ಕೈವ್‌ನ ಪೂರ್ವ ಜಿಲ್ಲೆಯ ಡ್ನಿಪ್ರೊವಿನ್ಸ್‌ಕಿಯಲ್ಲಿರುವ ಒಂಬತ್ತು ಅಂತಸ್ತಿನ ವಸತಿ ಕಟ್ಟಡದಲ್ಲಿ ದೊಡ್ಡದಾಗಿ ಬೆಂಕಿ ಹರಡುತ್ತಿರುವುದು ಸೆರೆಯಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಜಿನೀವಾದಲ್ಲಿ ಯುಎಸ್ ಮತ್ತು ಉಕ್ರೇನಿಯನ್ ಪ್ರತಿನಿಧಿಗಳ ನಡುವೆ ಯುಎಸ್-ರಷ್ಯಾ ಮಧ್ಯಸ್ಥಿಕೆಯ ಶಾಂತಿ ಯೋಜನೆಯ ಕುರಿತು ಭಾನುವಾರ ನಡೆದ ಮಾತುಕತೆಯ ನಂತರ ಈ ದಾಳಿಗಳು ನಡೆದಿವೆ.

ಡ್ನಿಪ್ರೊವಿನ್ಸ್‌ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐದು ಜನರು ಗಾಯಗೊಂಡಿದ್ದಾರೆ. ಮಧ್ಯ ಪೆಚೆರ್ಸ್ಕ್ ಜಿಲ್ಲೆಯ ಮತ್ತೊಂದು ವಸತಿ ಕಟ್ಟಡವು ತೀವ್ರವಾಗಿ ಹಾನಿಗೊಳಗಾಗಿದೆ ಎಂದು ಮೇಯರ್ ವಿಟಾಲಿ ಕಿಟ್ಸ್ಕೊ ಹೇಳಿದ್ದಾರೆ.

ನಂತರ ನಡೆದ ಸರಣಿ ದಾಳಿಗಳಲ್ಲಿ, ಕೈವ್‌ನ ಪಶ್ಚಿಮ ಸ್ವ್ಯಾಟೋಶಿನಿ ಜಿಲ್ಲೆಯ ವಸತಿ ರಹಿತ ಕಟ್ಟಡದ ಮೇಲೆ ನಡೆದ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದರು. ಮೂವರು ಗಾಯಗೊಂಡಿದ್ದಾರೆ ಎಂದು ಕೈವ್ ನಗರ ಆಡಳಿತದ ಮುಖ್ಯಸ್ಥ ಟೈಮರ್ ಟ್ಕಾಚೆಂಕೊ ತಿಳಿಸಿದ್ದಾರೆ.

ಉಕ್ರೇನ್‌ನ ಇಂಧನ ಸಚಿವಾಲಯವು ಇಂಧನ ಮೂಲಸೌಕರ್ಯಕ್ಕೆ ಹಾನಿಯಾಗಿದೆ ಎಂದು ಹೇಳಿದ್ದರೂ, ಹಾನಿಯ ವ್ಯಾಪ್ತಿಯನ್ನು ವಿವರಿಸಲಿಲ್ಲ. ಒಡೆಸಾ ಪ್ರದೇಶದಲ್ಲಿ ಇಂಧನ ಮತ್ತು ಬಂದರು ಮೂಲಸೌಕರ್ಯದ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ತುರ್ತು ಸೇವೆಗಳು ತಿಳಿಸಿವೆ.

ರಷ್ಯಾದ ದಕ್ಷಿಣ ರೋಸ್ಟೊವ್ ಪ್ರದೇಶದ ಮೇಲೆ ರಾತ್ರಿಯಿಡೀ ಉಕ್ರೇನಿಯನ್ ಡ್ರೋನ್ ದಾಳಿಯಲ್ಲಿ ಮೂವರು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದು, ಉಕ್ರೇನ್‌ನ ಗಡಿಯಿಂದ ದೂರದಲ್ಲಿರುವ ಟ್ಯಾಗನ್ರೋಗ್ ನಗರದಲ್ಲಿ ಸಾವುನೋವುಗಳು ಸಂಭವಿಸಿವೆ ಎಂದು ಗವರ್ನರ್ ಯೂರಿ ಸ್ಲ್ಯುಸರ್ ಮಂಗಳವಾರ ಆನ್‌ಲೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ದಾಳಿಯು ಖಾಸಗಿ ಮನೆಗಳು ಮತ್ತು ಬಹುಮಹಡಿ ವಸತಿ ಬ್ಲಾಕ್‌ಗಳು, ಸಾರ್ವಜನಿಕ ಸ್ಥಳಗಳು, ಗೋದಾಮು ಮತ್ತು ಅಂಗಡಿಯನ್ನು ಹಾನಿಗೊಳಿಸಿದೆ ಎಂದು ಸ್ಲ್ಯುಸರ್ ಹೇಳಿದರು.

ರಷ್ಯಾದ ವಾಯು ರಕ್ಷಣಾ ಪಡೆಗಳು ರಷ್ಯಾದ ವಿವಿಧ ಪ್ರದೇಶಗಳ ಮೇಲೆ ಮತ್ತು ಆಕ್ರಮಿತ ಕ್ರೈಮಿಯಾದ ಮೇಲೆ ರಾತ್ರೋರಾತ್ರಿ 249 ಉಕ್ರೇನಿಯನ್ ಡ್ರೋನ್‌ಗಳನ್ನು ನಾಶಪಡಿಸಿದವು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಮಂಗಳವಾರ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...