Homeಅಂತರಾಷ್ಟ್ರೀಯಉಕ್ರೇನ್ ಮೇಲೆ ರಷ್ಯಾ ಸರಣಿ ದಾಳಿಗೆ 9 ಜನರು ಸಾವು: ಕೆಲವೆಡೆ ನೀರು-ವಿದ್ಯುತ್ ಸಂಪರ್ಕ ಕಡಿತ

ಉಕ್ರೇನ್ ಮೇಲೆ ರಷ್ಯಾ ಸರಣಿ ದಾಳಿಗೆ 9 ಜನರು ಸಾವು: ಕೆಲವೆಡೆ ನೀರು-ವಿದ್ಯುತ್ ಸಂಪರ್ಕ ಕಡಿತ

- Advertisement -
- Advertisement -

ಮಂಗಳವಾರ ಉಕ್ರೇನ್ ಮೇಲೆ ರಷ್ಯಾ ಸರಣಿ ದಾಳಿಗಳನ್ನು ನಡೆಸಿದ್ದು, ನಗರದ ಕಟ್ಟಡಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಗಳಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಆದರೆ, ದಕ್ಷಿಣ ರಷ್ಯಾದಲ್ಲಿ ಉಕ್ರೇನ್ ನಡೆಸಿದ ದಾಳಿಯಲ್ಲಿ ಮೂವರು ಸಾವನ್ನಪ್ಪಿ, ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ರೇನ್ ರಾಜಧಾನಿ ಕೈವ್‌ನ ಕೆಲವು ಭಾಗಗಳಲ್ಲಿ ನೀರು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಟೆಲಿಗ್ರಾಮ್‌ಗೆ ಪೋಸ್ಟ್ ಮಾಡಲಾದ ವೀಡಿಯೊ ದೃಶ್ಯಾವಳಿಗಳು ಕೈವ್‌ನ ಪೂರ್ವ ಜಿಲ್ಲೆಯ ಡ್ನಿಪ್ರೊವಿನ್ಸ್‌ಕಿಯಲ್ಲಿರುವ ಒಂಬತ್ತು ಅಂತಸ್ತಿನ ವಸತಿ ಕಟ್ಟಡದಲ್ಲಿ ದೊಡ್ಡದಾಗಿ ಬೆಂಕಿ ಹರಡುತ್ತಿರುವುದು ಸೆರೆಯಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಜಿನೀವಾದಲ್ಲಿ ಯುಎಸ್ ಮತ್ತು ಉಕ್ರೇನಿಯನ್ ಪ್ರತಿನಿಧಿಗಳ ನಡುವೆ ಯುಎಸ್-ರಷ್ಯಾ ಮಧ್ಯಸ್ಥಿಕೆಯ ಶಾಂತಿ ಯೋಜನೆಯ ಕುರಿತು ಭಾನುವಾರ ನಡೆದ ಮಾತುಕತೆಯ ನಂತರ ಈ ದಾಳಿಗಳು ನಡೆದಿವೆ.

ಡ್ನಿಪ್ರೊವಿನ್ಸ್‌ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐದು ಜನರು ಗಾಯಗೊಂಡಿದ್ದಾರೆ. ಮಧ್ಯ ಪೆಚೆರ್ಸ್ಕ್ ಜಿಲ್ಲೆಯ ಮತ್ತೊಂದು ವಸತಿ ಕಟ್ಟಡವು ತೀವ್ರವಾಗಿ ಹಾನಿಗೊಳಗಾಗಿದೆ ಎಂದು ಮೇಯರ್ ವಿಟಾಲಿ ಕಿಟ್ಸ್ಕೊ ಹೇಳಿದ್ದಾರೆ.

ನಂತರ ನಡೆದ ಸರಣಿ ದಾಳಿಗಳಲ್ಲಿ, ಕೈವ್‌ನ ಪಶ್ಚಿಮ ಸ್ವ್ಯಾಟೋಶಿನಿ ಜಿಲ್ಲೆಯ ವಸತಿ ರಹಿತ ಕಟ್ಟಡದ ಮೇಲೆ ನಡೆದ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದರು. ಮೂವರು ಗಾಯಗೊಂಡಿದ್ದಾರೆ ಎಂದು ಕೈವ್ ನಗರ ಆಡಳಿತದ ಮುಖ್ಯಸ್ಥ ಟೈಮರ್ ಟ್ಕಾಚೆಂಕೊ ತಿಳಿಸಿದ್ದಾರೆ.

ಉಕ್ರೇನ್‌ನ ಇಂಧನ ಸಚಿವಾಲಯವು ಇಂಧನ ಮೂಲಸೌಕರ್ಯಕ್ಕೆ ಹಾನಿಯಾಗಿದೆ ಎಂದು ಹೇಳಿದ್ದರೂ, ಹಾನಿಯ ವ್ಯಾಪ್ತಿಯನ್ನು ವಿವರಿಸಲಿಲ್ಲ. ಒಡೆಸಾ ಪ್ರದೇಶದಲ್ಲಿ ಇಂಧನ ಮತ್ತು ಬಂದರು ಮೂಲಸೌಕರ್ಯದ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ತುರ್ತು ಸೇವೆಗಳು ತಿಳಿಸಿವೆ.

ರಷ್ಯಾದ ದಕ್ಷಿಣ ರೋಸ್ಟೊವ್ ಪ್ರದೇಶದ ಮೇಲೆ ರಾತ್ರಿಯಿಡೀ ಉಕ್ರೇನಿಯನ್ ಡ್ರೋನ್ ದಾಳಿಯಲ್ಲಿ ಮೂವರು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದು, ಉಕ್ರೇನ್‌ನ ಗಡಿಯಿಂದ ದೂರದಲ್ಲಿರುವ ಟ್ಯಾಗನ್ರೋಗ್ ನಗರದಲ್ಲಿ ಸಾವುನೋವುಗಳು ಸಂಭವಿಸಿವೆ ಎಂದು ಗವರ್ನರ್ ಯೂರಿ ಸ್ಲ್ಯುಸರ್ ಮಂಗಳವಾರ ಆನ್‌ಲೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ದಾಳಿಯು ಖಾಸಗಿ ಮನೆಗಳು ಮತ್ತು ಬಹುಮಹಡಿ ವಸತಿ ಬ್ಲಾಕ್‌ಗಳು, ಸಾರ್ವಜನಿಕ ಸ್ಥಳಗಳು, ಗೋದಾಮು ಮತ್ತು ಅಂಗಡಿಯನ್ನು ಹಾನಿಗೊಳಿಸಿದೆ ಎಂದು ಸ್ಲ್ಯುಸರ್ ಹೇಳಿದರು.

ರಷ್ಯಾದ ವಾಯು ರಕ್ಷಣಾ ಪಡೆಗಳು ರಷ್ಯಾದ ವಿವಿಧ ಪ್ರದೇಶಗಳ ಮೇಲೆ ಮತ್ತು ಆಕ್ರಮಿತ ಕ್ರೈಮಿಯಾದ ಮೇಲೆ ರಾತ್ರೋರಾತ್ರಿ 249 ಉಕ್ರೇನಿಯನ್ ಡ್ರೋನ್‌ಗಳನ್ನು ನಾಶಪಡಿಸಿದವು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಮಂಗಳವಾರ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...