Homeಕರೋನಾ ತಲ್ಲಣಕೊರೊನಾ ತಡೆಗೆ ಕ್ರಮ ಕೈಗೊಳ್ಳಲು ಕರ್ನಾಟಕ ಸೇರಿ 9 ರಾಜ್ಯಗಳಿಗೆ ಕೇಂದ್ರ ಸೂಚನೆ

ಕೊರೊನಾ ತಡೆಗೆ ಕ್ರಮ ಕೈಗೊಳ್ಳಲು ಕರ್ನಾಟಕ ಸೇರಿ 9 ರಾಜ್ಯಗಳಿಗೆ ಕೇಂದ್ರ ಸೂಚನೆ

ಎರಡು-ಮೂರು ದಿನಗಳ ಕಾಲ ಲಾಕ್‌ಡೌನ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ ಕೊರೊನ ಸೋಂಕು ಹರಡುವುದನ್ನು ತಡೆಯಲು ಅದು ಪರಿಹಾರವೂ ಅಲ್ಲ ಎಂಬುದನ್ನು ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಕೇಂದ್ರ ಸರ್ಕಾಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳಲ್ಲಿ ಕಣ್ಗಾವಲು ವಹಿಸುವಂತೆ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಿಗೆ ಸೂಚಿಸಿದೆ.

ನಿನ್ನೆ ಆಂದ್ರಪ್ರದೇಶ, ಬಿಹಾರ, ತೆಲಂಗಾಣ, ಒಢಿಶಾ, ಪಶ್ಚಿಮಬಂಗಾಳ, ಅಸ್ಸಾಂ, ಕರ್ನಾಟಕ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳೊಂದಿಗೆ ಮೂರು ಗಂಟೆಗಳ ಕಾಲ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಸಚಿವ ಸಂಪುಟದ ಕಾರ್ಯದರ್ಶಿಗಳು, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಟ್ಯಾಸ್ಕ್ ಪೋರ್ಸ್ ಅಧಿಕಾರಿಗಳು ಸತತ ಮೂರು ಗಂಟೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಎಂಟು ರೀತಿಯ ನಿಬಂಧನಗೆಳನ್ನು ಪಾಲಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳಬೇಕು. ಕೊವಿಡ್-19 ಮರಣ ಪ್ರಮಾಣವನ್ನು ತಡೆಯಬೇಕು. ಕೊರೊನಾ ಸೋಂಕು ಪಾಸಿಟೀವ್ ಕೇಸುಗಳು ಹೆಚ್ಚದಂತೆ ಮುಖ್ಯ ಕಾರ್ಯದರ್ಶಿಗಳು ಕೇಂದ್ರದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಒಂಬತ್ತು ರಾಜ್ಯಗಳು ಲಾಕ್‌ಡೌನ್ ಮತ್ತು ಸ್ಥಳೀಯ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು. ಕಂಟೈನ್ಮೆಂಟ್ ಜೋನ್‌ಗಳಲ್ಲಿ ಕಾಣ್ಗಾವಲು ಹಾಕಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹೇಳಿದೆ.

ಈ ಸಂದರ್ಭದಲ್ಲಿ ಎರಡು-ಮೂರು ದಿನಗಳ ಕಾಲ ಲಾಕ್ ಡೌನ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಅದು ಪರಿಹಾರವೂ ಅಲ್ಲ ಎಂಬುದನ್ನು ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಕೇಂದ್ರ ಸರ್ಕಾಕ್ಕೆ ತಿಳಿಸಿದರೆಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿಯಲ್ಲಿ ತಿಳಿಸಿಲಾಗಿದೆ.

ಕೊರೊನ ಎದುರಿಸಲು ಸಿಬ್ಬಂದಿಯ ಕೊರತೆ ಇರುವುದರಿಂದ ಲಭ್ಯವಿರುವ ಜನರನ್ನು ಬಳಸಿಕೊಳ್ಳಲು ಮುಂದಾಗಬೇಕು, ಪರ್ಯಾಯ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ನಿವೃತ್ತ ವೈದ್ಯರು, ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಆಸ್ಪತ್ರೆಗಳಲ್ಲಿ ಆಕ್ಸಿಜೆನ್ ಸಿಲೆಂಡರ್‌‌‌ಗಳು, ಪರೀಕ್ಷಾ ಕಿಟ್‌ಗಳು, ಔಷಧಿಗಳು ಮತ್ತು ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಿಕೊಳ್ಳಲು ವಿಳಂಬ ಮಾಡಬಾರದು. ಅಗತ್ಯ ಸಿಬ್ಬಂದಿ ಮತ್ತು ವೈದ್ಯಕೀಯ ಸಲಕರಣೆಗಳು ಇರುವಂತೆ ಮುಖ್ಯಕಾರ್ಯದರ್ಶಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದೆ.

ಕೇರಳ, ಗೋವಾ ಮತ್ತು ದೆಹಲಿಯಿಂದ ಈ ರಾಜ್ಯಗಳು ಪಾಠ ಕಲಿಯಬೇಕು. ಕರ್ನಾಟಕದಲ್ಲೂ ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಶ್ಲಾಘಿಸಲಾಯಿತು ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.


ಓದಿ: ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....