Homeಕರೋನಾ ತಲ್ಲಣಕೊರೊನಾ ತಡೆಗೆ ಕ್ರಮ ಕೈಗೊಳ್ಳಲು ಕರ್ನಾಟಕ ಸೇರಿ 9 ರಾಜ್ಯಗಳಿಗೆ ಕೇಂದ್ರ ಸೂಚನೆ

ಕೊರೊನಾ ತಡೆಗೆ ಕ್ರಮ ಕೈಗೊಳ್ಳಲು ಕರ್ನಾಟಕ ಸೇರಿ 9 ರಾಜ್ಯಗಳಿಗೆ ಕೇಂದ್ರ ಸೂಚನೆ

ಎರಡು-ಮೂರು ದಿನಗಳ ಕಾಲ ಲಾಕ್‌ಡೌನ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ ಕೊರೊನ ಸೋಂಕು ಹರಡುವುದನ್ನು ತಡೆಯಲು ಅದು ಪರಿಹಾರವೂ ಅಲ್ಲ ಎಂಬುದನ್ನು ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಕೇಂದ್ರ ಸರ್ಕಾಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳಲ್ಲಿ ಕಣ್ಗಾವಲು ವಹಿಸುವಂತೆ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಿಗೆ ಸೂಚಿಸಿದೆ.

ನಿನ್ನೆ ಆಂದ್ರಪ್ರದೇಶ, ಬಿಹಾರ, ತೆಲಂಗಾಣ, ಒಢಿಶಾ, ಪಶ್ಚಿಮಬಂಗಾಳ, ಅಸ್ಸಾಂ, ಕರ್ನಾಟಕ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳೊಂದಿಗೆ ಮೂರು ಗಂಟೆಗಳ ಕಾಲ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಸಚಿವ ಸಂಪುಟದ ಕಾರ್ಯದರ್ಶಿಗಳು, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಟ್ಯಾಸ್ಕ್ ಪೋರ್ಸ್ ಅಧಿಕಾರಿಗಳು ಸತತ ಮೂರು ಗಂಟೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಎಂಟು ರೀತಿಯ ನಿಬಂಧನಗೆಳನ್ನು ಪಾಲಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳಬೇಕು. ಕೊವಿಡ್-19 ಮರಣ ಪ್ರಮಾಣವನ್ನು ತಡೆಯಬೇಕು. ಕೊರೊನಾ ಸೋಂಕು ಪಾಸಿಟೀವ್ ಕೇಸುಗಳು ಹೆಚ್ಚದಂತೆ ಮುಖ್ಯ ಕಾರ್ಯದರ್ಶಿಗಳು ಕೇಂದ್ರದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಒಂಬತ್ತು ರಾಜ್ಯಗಳು ಲಾಕ್‌ಡೌನ್ ಮತ್ತು ಸ್ಥಳೀಯ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು. ಕಂಟೈನ್ಮೆಂಟ್ ಜೋನ್‌ಗಳಲ್ಲಿ ಕಾಣ್ಗಾವಲು ಹಾಕಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹೇಳಿದೆ.

ಈ ಸಂದರ್ಭದಲ್ಲಿ ಎರಡು-ಮೂರು ದಿನಗಳ ಕಾಲ ಲಾಕ್ ಡೌನ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಅದು ಪರಿಹಾರವೂ ಅಲ್ಲ ಎಂಬುದನ್ನು ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಕೇಂದ್ರ ಸರ್ಕಾಕ್ಕೆ ತಿಳಿಸಿದರೆಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿಯಲ್ಲಿ ತಿಳಿಸಿಲಾಗಿದೆ.

ಕೊರೊನ ಎದುರಿಸಲು ಸಿಬ್ಬಂದಿಯ ಕೊರತೆ ಇರುವುದರಿಂದ ಲಭ್ಯವಿರುವ ಜನರನ್ನು ಬಳಸಿಕೊಳ್ಳಲು ಮುಂದಾಗಬೇಕು, ಪರ್ಯಾಯ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ನಿವೃತ್ತ ವೈದ್ಯರು, ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಆಸ್ಪತ್ರೆಗಳಲ್ಲಿ ಆಕ್ಸಿಜೆನ್ ಸಿಲೆಂಡರ್‌‌‌ಗಳು, ಪರೀಕ್ಷಾ ಕಿಟ್‌ಗಳು, ಔಷಧಿಗಳು ಮತ್ತು ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಿಕೊಳ್ಳಲು ವಿಳಂಬ ಮಾಡಬಾರದು. ಅಗತ್ಯ ಸಿಬ್ಬಂದಿ ಮತ್ತು ವೈದ್ಯಕೀಯ ಸಲಕರಣೆಗಳು ಇರುವಂತೆ ಮುಖ್ಯಕಾರ್ಯದರ್ಶಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದೆ.

ಕೇರಳ, ಗೋವಾ ಮತ್ತು ದೆಹಲಿಯಿಂದ ಈ ರಾಜ್ಯಗಳು ಪಾಠ ಕಲಿಯಬೇಕು. ಕರ್ನಾಟಕದಲ್ಲೂ ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಶ್ಲಾಘಿಸಲಾಯಿತು ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.


ಓದಿ: ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...