Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...