Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...