Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...